ದೈಹಿಕ ಸಂಪರ್ಕದ ವೇಳೆ ಭಗವದ್ಗೀತೆ ಓದುವ ದೃಶ್ಯ.. “ಓಪೆನ್ ಹೈಮರ್” ಚಿತ್ರದ ವಿರುದ್ಧ ಕಿಡಿ


Team Udayavani, Jul 23, 2023, 11:54 AM IST

ದೈಹಿಕ ಸಂಪರ್ಕದ ವೇಳೆ ಭಗವದ್ಗೀತೆ ಓದುವ ದೃಶ್ಯ.. “ಓಪೆನ್ ಹೈಮರ್” ಚಿತ್ರದ ವಿರುದ್ಧ ಕಿಡಿ

ಮುಂಬಯಿ:  ಕ್ರಿಸ್ಟೊಫರ್ ನೋಲನ್ ಅವರ “ಓಪೆನ್ ಹೈಮರ್” ವರ್ಲ್ಡ್‌ ವೈಡ್‌ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದಲ್ಲೂ ಸಿನಿಮಾಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲೆಡೆ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಬಾಕ್ಸ್‌ ಆಪೀಸ್‌ ನಲ್ಲಿ ಮೊದಲ ದಿನವೇ “ಓಪೆನ್ ಹೈಮರ್” 14 ಕೋಟಿ ರೂ.ಗೂ ಅಧಿಕ ಕಲೆಕ್ಷನ್‌ ಮಾಡಿದೆ.

ಅಣುಬಾಂಬ್‌ ಸಂಶೋಧಿಸಿರುವ ಪರಮಾಣು ವಿಜ್ಞಾನಿ “ಓಪೆನ್ ಹೈಮರ್”ಅವರ ಕಥೆಯನ್ನು ಒಳಗೊಂಡಿರುವ ಸಿನಿಮಾಕ್ಕೆ ವಿಮರ್ಶಕರಿಂದಲೂ ಪಾಸಿಟಿವ್‌ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ. ಈ ನಡುವೆ ಭಾರತದಲ್ಲಿ ಸಿನಿಮಾದಲ್ಲಿರುವ ಒಂದು ದೃಶ್ಯಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

‘ಸೇವ್ ಕಲ್ಚರ್ ಸೇವ್ ಇಂಡಿಯಾ ಫೌಂಡೇಶನ್’ ಸ್ಥಾಪಕ, ಭಾರತ ಸರ್ಕಾರದ ಮಾಹಿತಿ ಅಧಿಕಾರಿ ಉದಯ್ ಮಹೂರ್ಕರ್ ಅವರು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿ ಚಿತ್ರತಂಡ ಹಾಗೂ ಸೆಂಟ್ರಲ್ ಬೋರ್ಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜುಲೈ 21 ರಂದು ತೆರೆಕಂಡ “ಓಪೆನ್ ಹೈಮರ್” ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಹಾನಿಯಾಗುವ ದೃಶ್ಯಗಳಿವೆ ಎಂಬುದು ʼಸೇವ್ ಕಲ್ಚರ್ ಸೇವ್ ಇಂಡಿಯಾ ಫೌಂಡೇಶನ್ʼ ಗಮನಕ್ಕೆ ಬಂದಿದೆ. ಸಿನಿಮಾದಲ್ಲಿ ಮಹಿಳೆಯೊಬ್ಬಳು ದೈಹಿಕ ಸಂಪರ್ಕ ನಡೆಸುವ ವೇಳೆ ( ಸಿನಿಮಾದ ನಾಯಕ ನಟನೊಂದಿಗೆ) ವ್ಯಕ್ತಿಯ ಬಳಿ ಭಗವದ್ಗೀತೆಯನ್ನು ಗಟ್ಟಿಯಾಗಿ ಓದುವಂತೆ ಹೇಳುವ ಒಂದು ದೃಶ್ಯವಿದೆ. ಈ ದೃಶ್ಯವನ್ನು ಸಿನಿಮಾದಲ್ಲಿ ಕಟ್‌ ಮಾಡದೆ ಹಾಕಲು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಹೇಗೆ ಅನುಮೋದನೆ ಕೊಟ್ಟಿತು ಎಂದು ಪ್ರತಿಕಾ ಪ್ರಕಟಣೆಯಲ್ಲಿ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತುರ್ತು ತನಿಖೆ ನಡೆಸಬೇಕು ಮತ್ತು ಸಂಬಂಧಪಟ್ಟವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ‘ಸೇವ್ ಕಲ್ಚರ್ ಸೇವ್ ಇಂಡಿಯಾ ಫೌಂಡೇಶನ್’ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕ್ರಿಸ್ಟೊಫರ್ ನೋಲನ್ “ಓಪೆನ್ ಹೈಮರ್” ಸಿನಿಮಾಕ್ಕೆ “ಆರ್ ರೇಟಿಂಗ್”‌ ( ಕೆಲವು ವಯಸ್ಕ ವಿಚಾರ,ವಯಸ್ಕರ ಥೀಮ್‌ಗಳು, ವಯಸ್ಕರ ಚಟುವಟಿಕೆ, ಕಠಿಣ ಭಾಷೆ, ತೀವ್ರವಾದ ಅಥವಾ ನಿರಂತರ ಹಿಂಸಾಚಾರ,  ನಗ್ನತೆ, ಮಾದಕ ದ್ರವ್ಯ ಸೇವನೆ ಅಥವಾ ಇತರ ಅಂಶಗಳನ್ನು ಒಳಗೊಂಡಿರಬಹುದು) ನ್ನು ನೀಡಿದೆ. ಆದರೆ ಭಾರತದಲ್ಲಿ ಸಿನಿಮಾಕ್ಕೆ “ಯುಎ” ರೇಟಿಂಗ್‌ ನೀಡಲಾಗಿದೆ. ಸಿನಿಮಾ ಸೆನ್ಸಾರ್‌ ಗೆ ಬರುವ ಮುನ್ನ ಸ್ಟುಡಿಯೋದವರು ಸಿನಿಮಾದಲ್ಲಿನ ಕೆಲ ದೃಶ್ಯಗಳನ್ನು ತೆಗೆದುಹಾಕಿ, ಅದರ ಅವಧಿಯನ್ನು ಕಡಿತಗೊಳಿಸಿಯೇ ಭಾರತದ ಸೆನ್ಸಾರ್‌ ಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.