ಒರಿಜಿನಲ್‌ ವರ್ಜಿನಿಯಾ!

ಕೇರಳದಿಂದ ಕನ್ನಡ ನಾಡಿಗೆ ಬಂದ ಪ್ರತಿಭೆ

Team Udayavani, Jul 28, 2019, 5:00 AM IST

q-1

ಮಹಿರಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬಂದ ವರ್ಜಿನಿಯಾ.
ಕನ್ನಡ ಚಿತ್ರರಂಗಕ್ಕೆ ಪರಭಾಷಾ ನಟಿಯರ ಆಗಮನ ಇಂದು-ನಿನ್ನೆಯದಲ್ಲ. ಅದಕ್ಕೆ ಹತ್ತಾರು ದಶಕಗಳ ಸುದೀರ್ಘ‌ ಇತಿಹಾಸವಿದೆ. ಈಗ ಈ ಸಾಲಿಗೆ ಮತ್ತೂಬ್ಬ ನಟಿಯ ಹೆಸರು ಸೇರ್ಪಡೆಯಾಗುತ್ತಿದೆ. ಅವರೇ ಮಲೆಯಾಳಂ ನಟಿ ವರ್ಜಿನಿಯಾ ರೋಡ್ರಿಗಸ್‌. ಸುಮಾರು ಎರಡೂವರೆ ದಶಕಗಳಿಂದ ಮಲೆಯಾಳಂ ಚಿತ್ರರಂಗ ಮತ್ತು ರಂಗಭೂಮಿಯಲ್ಲಿ ನಟಿಯಾಗಿ ತನ್ನದೇ ಆದ ಛಾಪು ಮೂಡಿಸಿರುವ ವರ್ಜಿನಿಯಾ, ಅತ್ಯುತ್ತಮ ಭರತನಾಟ್ಯ ಮತ್ತು ಪಾಶ್ಚಿಮಾತ್ಯ ನೃತ್ಯ ಕಲಾವಿದೆ ಕೂಡ ಹೌದು. ಕನ್ನಡ ರಂಗಭೂಮಿಯಲ್ಲಿ ಅರುಂಧತಿ ನಾಗ್‌, ಎಂ.ಎಸ್‌. ಸತ್ಯು, ಬಿ. ಜಯಶ್ರೀ- ಹೀಗೆ ಅನೇಕ ರಂಗ ದಿಗ್ಗಜರ ಜೊತೆ ನಿಕಟ ಸಂಪರ್ಕ ಹೊಂದಿರುವ ವರ್ಜಿನಿಯಾ ಹೆಸರು ರಂಗಭೂಮಿಯಲ್ಲಿ ಪರಿಚಿತವಿದ್ದರೂ, ಕನ್ನಡ ಚಿತ್ರರಂಗದ ಮಟ್ಟಿಗೆ ಇವರ ಹೆಸರು ಬಹುತೇಕರಿಗೆ ಅಪರಿಚಿತ ಎನ್ನಬಹುದು.

ಈಗಾಗಲೇ ಮಲೆಯಾಳಂ, ಹಿಂದಿ, ಇಂಗ್ಲೀಷ್‌, ಮರಾಠಿ- ಹೀಗೆ ಸುಮಾರು ಆರು ಭಾಷೆಗಳಲ್ಲಿ ಅನೇಕ ಜಾಹೀರಾತುಗಳು, ಕಿರುಚಿತ್ರಗಳಲ್ಲಿ ಅಭಿನಯಿಸಿ, ಜೊತೆಗೆ ಅವುಗಳಿಗೆ ಹಿನ್ನೆಲೆೆ ಧ್ವನಿ ನೀಡಿ ಕಂಠದಾನ ಕಲಾವಿದೆಯಾಗಿ, ರಂಗಭೂಮಿ ಕಲಾವಿದೆಯಾಗಿ, ಚಿತ್ರ ಕಲಾವಿದೆಯಾಗಿ ಗುರುತಿಸಿಕೊಂಡಿರುವ ವರ್ಜಿನಿಯಾ ರೋಡ್ರಿಗಸ್‌, ಈಗ ಕನ್ನಡ ಚಿತ್ರರಂಗಕ್ಕೂ ಅಡಿಯಿಟ್ಟಿದ್ದಾರೆ. ಇತ್ತೀಚೆಗೆ ತೆರೆಕಂಡಿರುವ ಕ್ರೈಂ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರ ಮಹಿರಾ ದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ವರ್ಜಿನಿಯಾ, ತನ್ನ ಅಭಿನಯದ ಮೂಲಕ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿರುವುದರ ಬಗ್ಗೆ ಮಾತನಾಡುವ ವರ್ಜಿನಿಯಾ, “ಮೊದಲಿನಿಂದಲೂ ಕನ್ನಡ ರಂಗಭೂಮಿಯ ಜೊತೆ ನನ್ನ ಒಡನಾಟವಿದೆ. ಇಲ್ಲಿ ಅನೇಕ ರಂಗ ಪ್ರಯೋಗಗಳಲ್ಲಿ ನಾನು ಭಾಗಿಯಾಗಿದ್ದೇನೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇದು ನನಗೆ ಹೊಸ ಹೆಜ್ಜೆ. ಕಳೆದ ಕೆಲ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕೆಲ ಚಿತ್ರಗಳಲ್ಲಿ ಅಭಿನಯಿಸುವ ಆಫ‌ರ್‌ಗಳು ಇತ್ತಾದರೂ, ನಾನು ಏಕಕಾಲಕ್ಕೆ ಬೇರೆ ಬೇರೆ ಭಾಷೆಗಳಲ್ಲಿ, ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಮಹಿರಾ ಚಿತ್ರದಲ್ಲಿ ಒಂದೊಳ್ಳೆ ಪಾತ್ರ ಮತ್ತು ಅದರ ತಯಾರಿಗೆ ಬೇಕಾದ ಸಮಯ ಎರಡೂ ಸಿಕ್ಕಿದ್ದರಿಂದ ಆ ಚಿತ್ರವನ್ನು ಒಪ್ಪಿಕೊಂಡೆ. ಚಿತ್ರದ ಕಥೆ ಮತ್ತು ಪಾತ್ರ ಎರಡೂ ಚೆನ್ನಾಗಿದೆ. ಸಾಕಷ್ಟು ಸಮಯ ತೆಗೆದುಕೊಂಡು ಪ್ರತಿಯೊಂದು ಸೂಕ್ಷ್ಮಸಂಗತಿಗಳನ್ನೂ ಪರಿಣಾಮಕಾರಿಯಾಗಿ ಈ ಚಿತ್ರದಲ್ಲಿ ಚಿತ್ರತಂಡ ತೆರೆಗೆ ತಂದಿದೆ. ಒಂದೊಳ್ಳೆ ಎನರ್ಜಿಟಿಕ್‌ ಟೀಮ್‌ ಜೊತೆ ಕೆಲಸ ಮಾಡಿರುವುದಕ್ಕೆ ಖುಷಿ ಇದೆ. ಮುಂದೆಯೂ ಇಂಥ ಟೀಮ್‌ ಸಿಕ್ಕರೆ ಕನ್ನಡ ಚಿತ್ರಗಳಲ್ಲೂ ಅಭಿನಯಿಸಲು ನನಗೇನೂ ಅಭ್ಯಂತರವಿಲ್ಲ’ ಎನ್ನುತ್ತಾರೆ.

ಸದ್ಯ ಮಹಿರಾ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮುಂದೆ ಕನ್ನಡ ಚಿತ್ರರಂಗದಲ್ಲಿ ವರ್ಜಿನಿಯಾ ಅವರಿಗೆ ಎಷ್ಟರ ಮಟ್ಟಿಗೆ ಹೊಸ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ ಅನ್ನೋದನ್ನ ಕಾದು ನೋಡಬೇಕು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.