Ramayana‌ Movie: ಬಿಗ್‌ ಬಜೆಟ್‌ ʼರಾಮಾಯಣʼಕ್ಕೆ ಆಸ್ಕರ್ ದಿಗ್ಗಜರ ಸಾಥ್


Team Udayavani, Apr 5, 2024, 1:03 PM IST

Ramayana‌ Movie: ಬಿಗ್‌ ಬಜೆಟ್‌ ʼರಾಮಾಯಣʼಕ್ಕೆ ಆಸ್ಕರ್ ದಿಗ್ಗಜರ ಸಾಥ್

ಮುಂಬಯಿ: ನಿತೇಶ್ ತಿವಾರಿ ಅವರ ಬಿಗ್‌ ಬಜೆಟ್‌ ʼರಾಮಾಯಣʼ ಸಟ್ಟೇರಲು ಸಿದ್ದವಾಗಿದೆ. ಭಾರತೀಯ ಸಿನಿಮಾರಂಗದಲ್ಲೇ ಬಹು ನಿರೀಕ್ಷಿತ ಸಿನಿಮಾವೆಂದು ಹೇಳಲಾಗುತ್ತಿರುವ ʼರಾಮಾಯಣʼ ಇದೇ ಏಪ್ರಿಲ್‌ 17 ರ ʼರಾಮ ನವಮಿʼ ದಿನದಂದು ಅಧಿಕೃತವಾಗಿ ಅನೌನ್ಸ್‌ ಆಗುವ ಸಾಧ್ಯತೆಯಿದೆ.

ಇಷ್ಟು ದಿನ ಪಾತ್ರವರ್ಗದ ವಿಚಾರದಲ್ಲಿ ಸುದ್ದಿಯಾಗುತ್ತಿದ್ದ ʼರಾಮಾಯಣʼ ಸಿನಿಮಾದ ಬಗ್ಗೆ ಮತ್ತೊಂದು ಬಿಗ್‌ ಇನ್‌ ಸೈಡ್‌ ಅಪ್ಡೇಟ್‌ ವೊಂದನ್ನು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ನಿರ್ದೇಶಕ ನಿತೇಶ್ ತಿವಾರಿ ಅವರ ʼರಾಮಾಯಣʼ ಕ್ಕೆ ಆಸ್ಕರ್‌ ವಿಜೇತರ ಸಾಥ್‌ ಸಿಕ್ಕಿದೆ. ಅಂತಾರಾಷ್ಟ್ರೀಯವಾಗಿ ಮನ್ನಣೆಗಳಿಸಿರುವ ಖ್ಯಾತ ಸಂಗೀತ ಸಂಯೋಜಕ ಮತ್ತು ಸಂಗೀತ ನಿರ್ಮಾಪಕ ಜರ್ಮನ್‌ ಮೂಲದ ಹ್ಯಾನ್ಸ್ ಜಿಮ್ಮರ್ ಇದೇ ಮೊದಲ ಬಾರಿಗೆ ಇಂಡಿಯನ್‌ ಸಿನಿಮಾಕ್ಕೆ ಕಾಲಿಡಲಿದ್ದಾರೆ. ಅದು ʼರಾಮಾಯಣʼ ಸಿನಿಮಾಕ್ಕಾಗಿ.

ಎರಡು ಆಸ್ಕರ್‌ ಹಾಗೂ ನಾಲ್ಕು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆದ್ದಿರುವ ಹ್ಯಾನ್ಸ್ ಜಿಮ್ಮರ್ ಭಾರತದ ಖ್ಯಾತ ಸಂಗೀತ ಸಂಯೋಜಕ ಆಸ್ಕರ್‌ ವಿಜೇತ ಎಆರ್ ರೆಹಮಾನ್ ಜೊತೆಯಾಗಿ ʼರಾಮಾಯಣʼಕ್ಕೆ ಮ್ಯೂಸಿಕ್‌ ನೀಡಲಿದ್ದಾರೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಹ್ಯಾನ್ಸ್ ಜಿಮ್ಮರ್ ಅವರು ರಾಮನ ಕಥೆಯಿಂದ ಆಕರ್ಷಿತರಾಗಿದ್ದಾರೆ ಮತ್ತು ರಾಮಾಯಣದ ಸ್ಕೋರ್ ರಚಿಸಲು ಸಿದ್ಧರಾಗಿದ್ದಾರೆ. ಜಿಮ್ಮರ್ ಅವರೊಂದಿಗೆ ಅಂತಿಮ ಹಂತದ ಚರ್ಚೆಗಳು ಪ್ರಗತಿಯಲ್ಲಿವೆ ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಹ್ಯಾನ್ಸ್ ಜಿಮ್ಮರ್  ಅವರು ʼದಿ ಲಯನ್ ಕಿಂಗ್ʼ, ʼಗ್ಲಾಡಿಯೇಟರ್ʼ, ʼಪೈರೇಟ್ಸ್ ಆಫ್ ದಿ ಕೆರಿಬಿಯನ್ʼ, ʼದಿ ಡಾರ್ಕ್ ನೈಟ್ ಟ್ರೈಲಾಜಿʼ, ʼಇನ್ಸೆಪ್ಶನ್ʼ, ʼಮ್ಯಾನ್ ಆಫ್ ಸ್ಟೀಲ್ʼ, ʼಇಂಟರ್ ಸ್ಟೆಲ್ಲರ್ʼ, ʼಡನ್‌ಕಿರ್ಕ್ʼ ಮತ್ತು ʼನೋ ಟೈಮ್ ಟು ಡೈʼ ಮುಂತಾದ ಹಲವಾರು ಸೂಪರ್‌ ಹಿಟ್‌ ಸಿನಿಮಾಗಳಿಗೆ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ.

ಈ ಹಿಂದೆ ಹ್ಯಾನ್ಸ್ ಅವರು ಎಆರ್ ರೆಹಮಾನ್ ಅವರೊಂದಿಗೆ ಕೈಜೋಡಿಸುವ ಬಗ್ಗೆ ಮಾತನಾಡಿದ್ದರು.

ʼರಾಮಾಯಣʼದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಹನುಮಂತನಾಗಿ ಸನ್ನಿ ಡಿಯೋಲ್ ಮತ್ತು ರಾವಣನಾಗಿ ಯಶ್ ಕಾಣಿಸಿಕೊಳ್ಳಲಿದ್ದಾರೆ. 2025 ರ ಹಬ್ಬದ ವೇಳೆ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.

 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.