ಪಾಕ್ ಸರ್ಕಾರದಿಂದ ಲೆಜೆಂಡರಿ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ಪೂರ್ವಜರ ಮನೆ ಖರೀದಿ

ರಾಜ್ ಕಪೂರ್, ದಿಲೀಪ್ ಕುಮಾರ್ ದೇಶ ಇಬ್ಭಾಗವಾಗುವ ಮುನ್ನ ತಮ್ಮ ಬಾಲ್ಯವನ್ನು ಪೇಶಾವರದಲ್ಲಿಯೇ ಕಳೆದಿದ್ದರು

Team Udayavani, Sep 28, 2020, 11:22 AM IST

ಪಾಕ್ ಸರ್ಕಾರದಿಂದ ಲೆಜೆಂಡರಿ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ಪೂರ್ವಜರ ಮನೆ ಖರೀದಿ

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತೂನ್ ಖವಾದ ಪ್ರಾಂತೀಯ ಸರ್ಕಾರ ಬಾಲಿವುಡ್ ದಂತಕತೆಯಾಗಿದ್ದ ನಟರಾದ ರಾಜ್ ಕಪೂರ್ ಮತ್ತು ದಿಲೀಪ್ ಕುಮಾರ್ ಅವರ ಪೂರ್ವಜರ ಐತಿಹಾಸಿಕ ಮನೆಗಳನ್ನು ಖರೀದಿಸಲು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.

ರಾಜ್ ಕಪೂರ್ ಮತ್ತು ದಿಲೀಪ್ ಕುಮಾರ್ ಅವರ ಪೂರ್ವಜರ ಐತಿಹಾಸಿಕ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಒಡೆಯಬೇಕಾದ ಸ್ಥಿತಿಯನ್ನು ಎದುರಿಸುತ್ತಿದೆ ಎಂದು ವರದಿ ವಿವರಿಸಿದೆ. ಈ ನಿಟ್ಟಿನಲ್ಲಿ ಖೈಬರ್ ಪಾಖ್ತುನ್ ಖವಾ ಪ್ರಾಂತ್ಯದ ಪುರಾತತ್ವ ಇಲಾಖೆ ಈ ಎರಡು ಕಟ್ಟಡಗಳನ್ನು ಖರೀದಿಸಲು ಅಗತ್ಯವಾದ ಹಣಕಾಸು ಬಿಡುಗಡೆಗೆ ನಿರ್ಧರಿಸಿದೆ.

ಪೇಶಾವರದ ಹೃದಯಭಾಗದಲ್ಲಿರುವ ಭಾರತದ ಇಬ್ಬರು ದಿಗ್ಗಜರ ಪೂರ್ವಜರ ಮನೆಗಳನ್ನು ರಾಷ್ಟ್ರೀಯ ಪಾರಂಪರಿಕ ತಾಣವನ್ನಾಗಿ ಘೋಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಐತಿಹಾಸಿಕ ಕಟ್ಟಡಗಳಿಗೆ ಎಷ್ಟು ವೆಚ್ಚ ತಗಲಬಹುದು ಎಂಬ ಬಗ್ಗೆ ಮಾಹಿತಿ ನೀಡುವಂತೆ ಪೇಶಾವರದ ಡೆಪ್ಯುಟಿ ಕಮಿಷನರ್ ಗೆ ಈಗಾಗಲೇ ಪತ್ರ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

ಭಾರತದ ಇಬ್ಬರು ಮಹಾನ್ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ದೇಶ ಇಬ್ಭಾಗವಾಗುವ ಮುನ್ನ ತಮ್ಮ ಬಾಲ್ಯವನ್ನು ಪೇಶಾವರದಲ್ಲಿಯೇ ಕಳೆದಿರುವುದಾಗಿ ಪುರಾತತ್ವ ಇಲಾಖೆಯ ಮುಖ್ಯಸ್ಥ ಡಾ.ಅಬ್ದುಸ್ ಸಮದ್ ಖಾನ್ ತಿಳಿಸಿದ್ದಾರೆ.

ನಟ ರಾಜ್ ಕಪೂರ್ ಅವರ ಪೂರ್ವಜರ ಮನೆ “ಕಪೂರ್ ಹವೇಲಿ” ಎಂದೇ ಕರೆಯಲಾಗುತ್ತಿದೆ. ಇದು ಪ್ರಸಿದ್ಧ ಕ್ವಿಸ್ಸಾ ಖಾವಾನಿ ಬಜಾರ್ ಸಮೀಪ ಕಟ್ಟಲಾಗಿದೆ. ಈ ಮನೆಯನ್ನು 1918 ಮತ್ತು 1922ರ ನಡುವೆ ದಂತಕತೆ ನಟ ಕಪೂರ್ ಅಜ್ಜ ದೀವಾನ್ ಬಾಶೇವರ್ನಾಥ್ ಕಪೂರ್ ಕಟ್ಟಿಸಿದ್ದರು. ಈ ಮನೆಯಲ್ಲಿ ಕಪೂರ್ ಮತ್ತು ಅವರ ಚಿಕ್ಕಪ್ಪ ತ್ರಿಲೋಕ್ ಕಪೂರ್ ಜನಿಸಿದ್ದರು. ಈ ಮನೆಯನ್ನು ಪೇಶಾವರದ ಪ್ರಾಂತೀಯ ಸರ್ಕಾರ ರಾಷ್ಟ್ರೀಯ ಪಾರಂಪರಿಕ ತಾಣ ಎಂದು ಘೋಷಿಸಿದೆ.

ಹಿರಿಯ ನಟ ದಿಲೀಪ್ ಕುಮಾರ್ ಅವರ ಪೂರ್ವಜರ ಮನೆ ನೂರು ವರ್ಷಕ್ಕಿಂತ ಹಿಂದೆಯೇ ಕಟ್ಟಲಾಗಿದ್ದು, ಇದು ಕೂಡಾ ಕಪೂರ್ ಮನೆಯ ಪ್ರದೇಶದಲ್ಲಿಯೇ ಇದೆ. ಈ ಮನೆಯನ್ನು 2014ರಲ್ಲಿ ನವಾಜ್ ಷರೀಫ್ ಸರ್ಕಾರ ರಾಷ್ಟ್ರೀಯ ಪಾರಂಪರಿಕ ತಾಣ ಎಂದು ಘೋಷಿಸಿತ್ತು. ಈ ಎರಡು ಮನೆಗಳ ಮಾಲೀಕರು ಹಲವಾರು ಬಾರಿ ಒಡೆಯಲು ಯತ್ನಿಸಿದ್ದು, ಇದಲ್ಲಿ ಕಮರ್ಷಿಯಲ್ ಪ್ಲಾಜಾ ನಿರ್ಮಿಸಲು ಸಿದ್ದತೆ ನಡೆಸಿದ್ದರು. ಆದರೆ ಪುರಾತತ್ವ ಇಲಾಖೆ ಅದಕ್ಕೆ ಅವಕಾಶ ನೀಡದೆ, ಐತಿಹಾಸಿಕ ಪ್ರಾಮುಖ್ಯತೆ ನೀಡಲು ನಿರ್ಧರಿಸಿ ಮನೆ ಧ್ವಂಸಕ್ಕೆ ತಡೆಯೊಡ್ಡಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.