L2E – Empuraan: ಮೋಹನ್‌ ಲಾಲ್ ʼಲೂಸಿಫರ್‌ -2ʼ ನಲ್ಲಿ ಪಾಕ್‌ ನಟಿ ಮಹಿರಾ ಖಾನ್ ನಾಯಕಿ?


Team Udayavani, Nov 27, 2023, 5:10 PM IST

L2E – Empuraan: ಮೋಹನ್‌ ಲಾಲ್ ʼಲೂಸಿಫರ್‌ -2ʼ ನಲ್ಲಿ ಪಾಕ್‌ ನಟಿ ಮಹಿರಾ ಖಾನ್ ನಾಯಕಿ?

ಕೊಚ್ಚಿ: ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ  ಲೂಸಿಫರ್- ಎಂಪುರಾನ್ʼ (ಲೂಸಿಫರ್ -2) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಟ್ಟೇರಿದ ದಿನದಿಂದ ಸುದ್ದಿಯಾಗಿರುವ ಸಿನಿಮಾ ಇದೀಗ ನಾಯಕಿ ಆಯ್ಕೆಯ ವಿಚಾರದಲ್ಲಿ ಸದ್ದು ಮಾಡುತ್ತಿದೆ.

ಇತ್ತೀಚೆಗೆ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿತ್ತು.ʼಲೂಸಿಫರ್‌ʼನಲ್ಲಿ(ಪಾರ್ಟ್‌ -1 ನಲ್ಲಿ) ಮೋಹನ್‌ಲಾಲ್‌ ಸ್ಟೀಫನ್ ನೆಡುಂಪಲ್ಲಿ ಎಂಬ ರಾಜಕಾರಣಿಯ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದ ಕಥೆಯಲ್ಲಿ ನಡೆಯುವ ಕೆಲ ಘಟನೆಗಳ ಬಳಿಕ ಸ್ಟೀಫನ್ ನೆಡುಂಪಲ್ಲಿ ಪಾತ್ರಕ್ಕೆ ಖುರೇಷಿ ಅಬ್ರಾಮ್ ಎನ್ನುವ ಹೆಸರು ಕೂಡ ಇರುವುದು ಗೊತ್ತಾಗುತ್ತದೆ. ಇದೇ ಪಾತ್ರದ ಸುತ್ತ ಎರಡನೇ ಭಾಗದ ಕಥೆ ಸಾಗಲಿದೆ.

ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಆದರೆ ಇದುವರೆಗೆ ಸಿನಿಮಾದಲ್ಲಿನ ಪಾತ್ರವರ್ಗದ ಬಗ್ಗೆ ಅಷ್ಟಾಗಿ ಮಾಹಿತಿ ಹೊರಬಿದ್ದಿಲ್ಲ. ಇದೀಗ ಸಿನಿಮಾದ ನಾಯಕಿಯ ಸುತ್ತ ಗಾಸಿಪ್‌ ಹಬ್ಬಿದೆ. ಮೋಹನ್‌ ಲಾಲ್‌ ಸಿನಿಮಾದಲ್ಲಿ ಪಾಕಿಸ್ತಾನದ ಖ್ಯಾತ ನಟಿಯೊಬ್ಬರು ಬಣ್ಣ ಹಚ್ಚಲಿದ್ದಾರೆ ಎನ್ನುವ ವರದಿಯೊಂದು ಹೊರಬಿದ್ದಿದೆ.

ಈಗಾಗಲೇ ಬಾಲಿವುಡ್‌ ಸಿನಿಮಾರಂಗದಲ್ಲಿಯೂ (ರಯೀಸ್ – ಸಿನಿಮಾ) ತನ್ನ ನಟನೆ ಮೂಲಕ ಹೆಸರು ಮಾಡಿರುವ ಪಾಕಿಸ್ತಾನದ ಖ್ಯಾತ ನಟಿ ಮಹಿರಾ ಖಾನ್ ʼಲೂಸಿಫರ್‌ -2ʼ ನಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಕೆಲ ಪೋಸ್ಟರ್‌ ಗಳು ಹರಿದಾಡುತ್ತಿದೆ. ಆದರೆ ಸಿನಿಮಾ ತಂಡದಿಂದ ಇದುವರೆಗೆ ಅಧಿಕೃತವಾಗಿ ಎಲ್ಲೂ ಕೂಡ ಮಾಹಿತಿ ಹೊರಬಿದ್ದಿಲ್ಲ.

ಪ‌ೃಥಿರಾಜ್‌ ಸುಕುಮಾರನ್‌ ನಿರ್ದೇಶನದ ಮಲಯಾಳಂ , ತಮಿಳು ,ತೆಲುಗು, ಕನ್ನಡ ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಅಂದಹಾಗೆ 2016 ರಲ್ಲಿ ಉರಿ ದಾಳಿಯ ನಂತರ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘವು (ಐಎಂಪಿಪಿಎ) ಪಾಕಿಸ್ತಾನದ ಕಲಾವಿದರಿಗೆ ಭಾರತದ ಸಿನಿಮಾರಂಗದಲ್ಲಿ ನಟಿಸಲು ನಿಷೇಧ ಹೇರಿತ್ತು. ಆದರೆ ಇತ್ತೀಚೆಗೆ ಪಾಕಿಸ್ತಾನದ ಕಲಾವಿದರು, ಹಾಡುಗಾರರು, ಸಂಗೀತಗಾರರು, ಸಿನಿಮಾ ಬರಹಗಾರರು ಮತ್ತು ಟೆಕ್ನಿಷಿಯನ್‌ಗಳನ್ನು ಸಂಪೂರ್ಣವಾಗಿ ಭಾರತದಲ್ಲಿ ನಿಷೇಧಿಸಬೇಕು, ಭಾರತದ ಸಿನಿಮಾ ಕಂಪನಿಗಳು ಪಾಕ್‌ ಕಲಾವಿದರೊಂದಿಗೆ, ಗಾಯಕರೊಂದಿಗೆ ಸಹಭಾಗಿತ್ವ ಮಾಡಿಕೊಳ್ಳದಂತೆ ನಿಷೇಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿತ್ತು.

ಇತ್ತೀಚೆಗೆ ಮಹಿರಾ ಖಾನ್‌ ಅವರು ಎರಡನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದರು.

 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.