ರಾಮಮಂದಿರ ನಿರ್ಮಾಣಕ್ಕೆ ಪವನ್ ಕಲ್ಯಾಣ್ ನೀಡಿದ ದೇಣಿಗೆ ಎಷ್ಟು ಗೊತ್ತಾ?
Team Udayavani, Jan 24, 2021, 9:00 PM IST
ಮುಂಬೈ: ಅಯೋಧ್ಯಾ ಶ್ರೀ ರಾಮಮಂದಿರದ ನಿರ್ಮಾಣದ ಹಿನ್ನೆಲೆಯಲ್ಲಿ ಹಲವಾರು ತಾರೆಯರನ್ನು ಒಳಗೊಂಡಂತೆ ರಾಜಕೀಯ ದಿಗ್ಗಜರು ದೇಣಿಗೆ ನೀಡುತ್ತಿದ್ದಾರೆ. ಇದೀಗ ಈ ಸಾಲಿನಲ್ಲಿ ಟಾಲಿವುಡ್ ನ ಖ್ಯಾತ ನಟ ಪವನ್ ಕಲ್ಯಾಣ್ ಕೂಡಾ ಸೇರಿಕೊಂಡಿದ್ದಾರೆ.
ನಟ ಚಿರಂಜೀವಿ ಅವರ ಸಹೋದರ ಪವನ್ ಕಲ್ಯಾಣ್ ಶ್ರೀ ರಾಮಮಂದಿರದ ನಿರ್ಮಾಣ ಕಾರ್ಯಕ್ಕಾಗಿ ಬರೋಬ್ಬರಿ 30 ಲಕ್ಷ ರೂ. ಗಳ ದೇಣಿಗೆ ನೀಡಿದ್ದು, ಆ ಮೂಲಕ ರಾಮಮಂದಿರದ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿಸಬೇಕಿದೆ ಎಂದು ಕೆರೆಕೊಟ್ಟಿದ್ದಾರೆ.
ಶ್ರೀ ರಾಮನು ಧರ್ಮ ಹಾಗೂ ತಾಳ್ಮೆಯ ಪ್ರತೀಕವಾಗಿದ್ದಾನೆ. ಧೈರ್ಯದ ವಿಚಾರದಲ್ಲಿಯೂ ನಮಗೆಲ್ಲರಿಗೂ ಆತ ಸ್ಪೂರ್ತಿಯಾಗಿ ನಿಲ್ಲುತ್ತಾನೆ. ಭಾರತ ಹಿಂದಿನಿಂದಲೂ ಹಲವಾರು ದಾಳಿಗಳನ್ನು ಎದುರಿಸಿ ಗೆದ್ದಿದೆ. ಇದಕ್ಕೆ ಶ್ರೀ ರಾಮ ಹಾಕಿಕೊಟ್ಟ ದಾರಿಯೇ ಕಾರಣ ಎಂದು ನಟ ಪವನ್ ಕಲ್ಯಾಣ್ ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ:2022ಕ್ಕೆ ತೆರೆಮೇಲೆ ಬರಲಿದ್ದಾನೆ ‘ಬಚ್ಚನ್ ಪಾಂಡೆ’
ನಾನು ರಾಮ ಮಂದಿರ ನಿರ್ಮಾಣಕ್ಕಾಗಿ 30 ಲಕ್ಷ ರೂ ಗಳನ್ನು ನೀಡಿದ್ದೇನೆ. ನಾನು ದೇಣಿಗೆ ನೀಡುವುದನ್ನು ಗಮನಿಸಿದ ನನ್ನ ಜೊತೆಗಾರರೂ, ಸಹೋದ್ಯೋಗಿಗಳೂ ಕೂಡ ದೇಣಿಗೆ ನೀಡಿದ್ದು, ಅವರಲ್ಲಿ ಹಿಂದೂಗಳನ್ನು ಒಳಗೊಂಡಂತೆ ಹಲವು ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರೂ ಇದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸದ್ಯ ಶ್ರೀರಾಮ್ ವೇಣು ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವಕೀಲ್ ಸಾಬ್’ ಸಿನಿಮಾ ತೆರೆಮೇಲೆ ಬರಲು ಸಿದ್ಧವಾಗಿದ್ದು, ಈ ಸಿನಿಮಾದಲ್ಲಿ ನಟ ಪವನ್ ಕಲ್ಯಾಣ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಹಿಂದಿಯ ಪಿಂಕ್ ಸಿನಿಮಾದ ರಿಮೇಕ್ ಆಗಿದೆ.
ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ