Pooja Bhatt:‌ ತಂದೆ ಜೊತೆಗಿನ ಲಿಪ್‌ ಲಾಕ್‌ ವಿವಾದ; ಮತ್ತೆ ಮೌನ ಮುರಿದ ಪೂಜಾ ಭಟ್


Team Udayavani, Sep 11, 2023, 1:21 PM IST

Pooja Bhatt:‌ ತಂದೆ ಜೊತೆಗಿನ ಲಿಪ್‌ ಲಾಕ್‌ ವಿವಾದ: ಮತ್ತೆ ಮೌನ ಮುರಿದ ಪೂಜಾ ಭಟ್

ಮುಂಬಯಿ: ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾರಂಗದಲ್ಲಿ ಹಾಟ್‌ & ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದ ನಟಿ ಪೂಜಾ ಭಟ್‌ ಇತ್ತೀಚೆಗೆ ಬಿಗ್‌ ಬಾಸ್‌ ಓಟಿಟಿ-2 ನಲ್ಲಿ ಭಾಗಿಯಾದ ಬಳಿಕ ಮತ್ತೆ ಸುದ್ದಿಯಾಗಿದ್ದಾರೆ.

80 ರ ದಶಕದಲ್ಲಿ ಬಾಲಿವುಡ್‌ ನಲ್ಲಿ ಬಿಕಿನಿ ಧರಿಸಿ ಹಾಟ್‌ & ಬೋಲ್ಡ್‌ ಲುಕ್‌ ನಲ್ಲಿ ಪಡ್ಡೆ ಹುಡುಗರ ಗಮನ ಸೆಳೆದ ನಿರ್ದೇಶಕ ಮಹೇಶ್‌ ಭಟ್‌ ಅವರ ಪುತ್ರಿ ಪೂಜಾ ಭಟ್ ಅವರಿಗೆ 1989 ರಲ್ಲಿ ಬಂದ ‘ಡ್ಯಾಡಿ’ 1991 ರಲ್ಲಿ ಬಂದ  ‘ದಿಲ್ ಹೈ ಕಿ ಮಾಂತಾ ನಹೀನ್’ ಮತ್ತು ‘ಸಡಕ್’ ಸಿನಿಮಾಗಳ ದೊಡ್ಡ ಯಶಸ್ಸನ್ನು ತಂದುಕೊಟ್ಟಿತು. ಈ ಎರಡೂ ಸಿನಿಮಾಗಳನ್ನು ಅವರ ತಂದೆಯೇ ನಿರ್ದೇಶನ ಮಾಡಿದ್ದರು.  ಬೋಲ್ಡ್‌ ಆಗಿ ನಟಿಸುವ ಮೂಲಕ ಸಿನಿಮಾರಂಗದಲ್ಲಿ ಮಿಂಚುತ್ತಿದ್ದ ಸಮಯದಲ್ಲಿ ಅವರ ಒಂದು ಫೋಟೋ ದೊಡ್ಡ ವಿವಾದವನ್ನು ಸೃಷ್ಟಿಸಿತ್ತು.

ಪೂಜಾ ಭಟ್‌ ಅವರು ಹಲವು ವಿವಾದಗಳಿಂದ ಸುದ್ದಿಯಾಗಿದ್ದರು. ಈ ವಿವಾದಗಳಲ್ಲಿ ದೊಡ್ಡ ವಿವಾದವಾಗಿದ್ದು ಅವರ ತಂದೆ ಜೊತೆಗಿನ ಲಿಪ್‌ ಲಾಕ್‌ ಕಿಸ್ ವಿವಾದ.

ನಟಿ ಪೂಜಾ ಭಟ್‌ ʼ ಸ್ಟಾರ್ಡಸ್ಟ್ʼ ಮ್ಯಾಗ್‌ ಜಿನ್‌ ನಲ್ಲಿ ಪ್ರಕಟವಾದ ಒಂದು ಫೋಟೋ ದೊಡ್ಡ ವಿವಾದವನ್ನು ಸೃಷ್ಟಿಸಿತ್ತು.  ತಂದೆ – ಮಗಳಾಗಿರುವ ಪೂಜಾ  ಭಟ್‌ – ಮಹೇಶ್‌ ಭಟ್‌ ಪರಸ್ಪರ ಚುಂಬಿಸುವ ( ಲಿಪ್‌ ಲಾಕ್) ಮಾಡಿಕೊಳ್ಳುವ ಫೋಟೋವನ್ನು ಅಂದು ಮ್ಯಾಗ್‌ ಜಿನ್‌ ಗಾಗಿ ಶೂಟ್‌ ಮಾಡಲಾಗಿತ್ತು. ತಂದೆ ಮಹೇಶ್‌ ಭಟ್ ಮಡಿಲಿನ ಮೇಲೆ ಕೂತುಕೊಂಡು ಪೂಜಾ ಭಟ್‌ ಲಿಪ್‌ ಲಾಕ್‌ ಮಾಡಿರುವ ಫೋಟೋ ಮ್ಯಾಗ್‌ ಜಿನ್‌ ಮುಖಪುಟದಲ್ಲಿ ಪ್ರಕಟಿಸಲಾಗಿತ್ತು.

ಈ ಫೋಟೋಗೆ ಅನೇಕರಿಂದ ವಿರೋಧ ವ್ಯಕ್ತವಾಗಿತ್ತು. ಪೂಜಾ ಭಟ್‌ – ಮಹೇಶ್‌ ಭಟ್‌ ಅವರ ವಿರುದ್ಧ ಜನ ಆಕ್ರೋಶಗೊಂಡಿದ್ದರು.

1990 ರಲ್ಲಿ ಈ ಕಿಸ್‌ ವಿವಾದ ನಡೆದಿತ್ತು. ಈ ಬಗ್ಗೆ ನಟಿ ಪೂಜಾ ಭಟ್‌ ಸಂದರ್ಶನವೊಂದರಲ್ಲಿ ಮತ್ತೆ ಮಾತನಾಡಿದ್ದಾರೆ. ತಂದೆಯೊಂದಿಗೆ ಲಿಪ್‌ ಲಾಕ್‌ ಮಾಡಿ ನೀವು ಪಶ್ಚಾತ್ತಾಪ ಪಟ್ಟಿದ್ದೀರಾ? ಎಂದು ಸಂದರ್ಶನದಲ್ಲಿ ಕೇಳಲಾಗಿದೆ.

“ಇಲ್ಲ, ಏಕೆಂದರೆ ನಾನು ಅದನ್ನು ತುಂಬಾ ಸರಳವಾಗಿ ನೋಡುತ್ತೇನೆ. ನನ್ನ ಪ್ರಕಾರ ದುರದೃಷ್ಟವಶಾತ್ ಏನಾದರೂ ಆದರೂ ಆ  ಕ್ಷಣವನ್ನು ಹೇಗಾದರೂ ಪ್ರತಿನಿಧಿಸಬಹುದು ಮತ್ತು ತಪ್ಪಾಗಿ ನಿರೂಪಿಸಬಹುದು. ನನಗೆ ಈಗಲೂ ನೆನಪಿದೆ ಆಗ ಶಾರುಖ್‌ ಖಾನ್‌ ಅವರು ನನಗೆ ಹೇಳಿದ್ದರು. ನಿಮ್ಮ ಮಕ್ಕಳು ಸಣ್ಣದಿರುವಾಗ ನೀವು ಹೆಣ್ಣು ಮಕ್ಕಳನ್ನು ಹೊಂದಿರುವಾಗ ಮಗು ತುಂಬಾ ಸಲಿ ಅಪ್ಪ- ಅಮ್ಮ ನನಗೊಂದು ಕಿಸ್‌ ಕೊಡಿ ಎಂದು ಹೇಳುತ್ತದೆ. ಆಗ ತಂದೆ – ತಾಯಿ ಈ ರೀತಿ ಮಾಡುತ್ತಾರೆ ಎಂದಿದ್ದರು. ನಾನು ಈಗಲೂ ನನ್ನ ತಂದೆಗೆ 10 ಪೌಂಡ್‌ ನ ಸಣ್ಣ ಮಗುವೇ ಆಗಿದ್ದೇನೆ. ನನಗೆ ಅವರು ಜೀವನವಿಡೀ ಹೀಗೆಯೇ ಇರುತ್ತಾರೆ” ಎಂದು ಹೇಳಿದ್ದಾರೆ.

“ಅದು ಸಂಪೂರ್ಣವಾಗಿ ಮುಗ್ಧವಾಗಿದ್ದ ಕ್ಷಣವನ್ನು ಸೆರೆ ಹಿಡಿಯಲಾಗಿತ್ತು. ಇದರ ಅರ್ಥವನ್ನು ಓದುವವರು ಓದುತ್ತಾರೆ. ಯಾರು ನೋಡಬೇಕೋ ಅವರು ನೋಡುತ್ತಾರೆ. ನಾನಿಲ್ಲಿ ಅದನ್ನು ನಿವಾರಣೆ ಮಾಡಲು ಕೂತಿಲ್ಲ. ಜನ ಒಂದು ತಂದೆ – ಮಗಳ ಸಂಬಂಧವನ್ನು ಬೇರೆ ದೃಷ್ಟಿಯನ್ನು ನೋಡುತ್ತಾರೋ ಅವರು ಬೇರೇನನ್ನೂ ಮಾಡಬಲ್ಲರು. ಇದೆಲ್ಲ ಹೇಳಿ ನಾವು ಕೌಟುಂಬಿಕ ಮೌಲ್ಯಗಳ ಬಗ್ಗೆ ಮಾತನಾಡುತ್ತೇವೆ. ಇದೊಂದು ರೀತಿಯ ತಮಾಷೆಯ ವಿಚಾರ” ಎಂದು ಅವರು ಹೇಳುತ್ತಾರೆ.

 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.