ಮದುವೆ ನಂತ್ರ ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಟಿ ನಯನತಾರಾ ?
Team Udayavani, Sep 8, 2021, 5:59 PM IST
ಚೆನ್ನೈ : ಸೌಥ್ ಸುಂದರಿ ನಯನತಾರಾ ಹಸೆಮಣೆ ಏರಲು ತಯಾರಿ ನಡೆಸಿದ್ದಾರೆ. ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆ ನಂತರ ಈ ಚೆಲುವೆ ಸಿನಿಮಾದಲ್ಲಿ ನಟಿಸುತ್ತಾರಾ ? ಇಲ್ಲವೆ ಬಣ್ಣದ ಲೋಕಕ್ಕೆ ಗುಡ್ ಬೈ ಹೇಳ್ತಾರಾ ? ಈ ಪ್ರಶ್ನೆಗಳಿಗೆ ಅವರೇ ಉತ್ತರಿಸಿದ್ದಾರೆ.
ನಿರ್ದೇಶಕ ವಿಘ್ನೆಶ್ ಶಿವನ್ ಜೊತೆ ನಯನತಾರಾ ಪ್ರೀತಿಯಲ್ಲಿ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚಿಗೆ ಈ ಜೋಡಿ ಸರಳವಾಗಿ ನಿಶ್ಚಿತಾರ್ಥ ಕೂಡ ಮಾಡಿಕೊಂಡಿತು. ಆದರೆ, ಈ ಬಗ್ಗೆ ಎಲ್ಲಿಯೂ ತುಟಿ ಬಿಚ್ಚಿರಲಿಲ್ಲ ಈ ಜೋಡಿ. ಇದೀಗ ಸಿನಿಮಾ ಪ್ರಮೋಷನ್ ವೇಳೆ ತಮ್ಮ ಎಂಗೇಜ್ಮೆಂಟ್ ಹಾಗೂ ಮದುವೆ ಬಗ್ಗೆ ಮಾತನಾಡಿದ್ದಾರೆ ಈ ನಟಿ.
ವಿಘ್ನೆಶ್ ಜೊತೆ ನಿಶ್ಚಿತಾರ್ಥ ನಡೆದಿರುವುದನ್ನು ಒಪ್ಪಿಕೊಂಡಿರುವ ನಯನತಾರಾ, ಆಪ್ತರ ಹಾಜರಾತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆದರೆ, ಇನ್ನೂ ನಾವು ಮದುವೆಯಾಗಿಲ್ಲ. ನಾವು ಮದುವೆ ಆಗುವುದನ್ನು ಖಂಡಿತವಾಗಿಯೂ ಅಭಿಮಾನಿಗಳಿಗೆ ತಿಳಿಸುತ್ತೇನೆ ಎಂದಿದ್ದಾರೆ.
ಇನ್ನು ಇದೇ ವೇಳೆ ಮದುವೆ ಬಳಿಕ ಸಿನಿಮಾಗಳಲ್ಲಿ ಅಭಿನಯಿಸುತ್ತೀರಾ ? ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಅವರು, ಹೌದು, ನಾನು ಚಿತ್ರರಂಗದಲ್ಲಿ ಮುಂದುವರೆಯುತ್ತೇನೆ ಎಂದಿದ್ದಾರೆ.
ಇನ್ನು ನಯನತಾರಾ ಅವರ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಝಿಯಾಗಿದ್ದಾರೆ. ಅವರು ಆಟ್ಲಿ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ಈಕೆ ನಾಯಕಿಯಾಗಿದ್ದಾಳೆ. ಈ ಸಿನಿಮಾದಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರು ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಮೆಗಾಸ್ಟಾರ್ ಚಿರಂಜೀವಿ ಅವರ ಗಾಡ್ ಫಾದರ್ ಚಿತ್ರಕ್ಕೆ ಸೈನ್ ಮಾಡಿದ್ದು, ಶೀಘ್ರದಲ್ಲಿ ಇದು ಸೆಟ್ಟೇರಲಿದೆ. ಇನ್ನುಳಿದಂತೆ ತಮ್ಮ ಮದುವೆಯಾಗುವ ಹುಡುಗ ವಿಘ್ನೆಶ್ ಜೊತೆ ಕಾತುವಕುಲು ರೆಂಡು ಕಾದಲ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ