ಸ್ಟಾರ್ ನಟ ಪ್ರಭಾಸ್ ಮುಂದಿನ ಸಿನಿಮಾ “ಆದಿಪುರುಷ್”, ಕನ್ನಡದಲ್ಲಿಯೂ ತೆರೆ ಕಾಣಲಿದೆ

ಓಂ ರಾವತ್ ಈಗಾಗಲೇ ಹಿಂದಿಯಲ್ಲಿ ತಾನಾಜಿ ಎಂಬ ಐತಿಹಾಸಿಕ ಹಿಟ್ ಸಿನಿಮಾ ನಿರ್ದೇಶಿಸಿದ್ದರು.

Team Udayavani, Aug 18, 2020, 11:12 AM IST

ಸ್ಟಾರ್ ನಟ ಪ್ರಭಾಸ್ ಮುಂದಿನ ಸಿನಿಮಾ “ಆದಿಪುರುಷ್”, ಕನ್ನಡದಲ್ಲಿಯೂ ತೆರೆ ಕಾಣಲಿದೆ

ನವದೆಹಲಿ:ಭಾರತದ ಬಹುಬೇಡಿಕೆಯ ನಟ ಪ್ರಭಾಸ್ ಬಾಹುಬಲಿ ನಂತರ ಇದೀಗ ಬಿಗ್ ಬಜೆಟ್ ನ ಪೌರಾಣಿಕ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಹೇಳುವ ಮೂಲಕ ಅಭಿಮಾನಿಗಳಿಗೆ ತಮ್ಮ 22ನೇ ಸಿನಿಮಾದ ಹೆಸರನ್ನು ಬಹಿರಂಗಪಡಿಸಿದ್ದಾರೆ.

ರಾಧೆ ಶ್ಯಾಮ್ ಸಿನಿಮಾದ ಬಳಿಕ ನಿರ್ದೇಶಕ ಓಂ ರಾವತ್ ನಿರ್ದೇಶನದ “ಆದಿಪುರುಷ್” ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಮಂಗಳವಾರ ಬೆಳಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಘೋಷಿಸಿದ್ದಾರೆ.

ಆದಿಪುರುಷ್ ಪ್ರಭಾಸ್ ಅವರ 22ನೇ ಸಿನಿಮಾವಾಗಿದೆ. ಇದೊಂದು ಸಾಹಸಮಯ ಚಿತ್ರವಾಗಿದ್ದು, “ಇದು ಅಧರ್ಮದ ವಿರುದ್ಧ ಗೆಲುವು ಸಾಧಿಸಿದ್ದರ ಸಂಭ್ರಮ” ಎಂಬ ಟ್ಯಾಗ್ ಲೈನ್ ಕೂಡಾ ನೀಡಲಾಗಿದೆ. ಆದಿಪುರುಷ್ ಸಿನಿಮಾದ ಫಸ್ಟ್ ಲುಕ್ ಅನ್ನು ಪ್ರಭಾಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಓಂ ರಾವತ್ ಈಗಾಗಲೇ ಹಿಂದಿಯಲ್ಲಿ ತಾನಾಜಿ ಎಂಬ ಐತಿಹಾಸಿಕ ಹಿಟ್ ಸಿನಿಮಾ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ಅಜಯ್ ದೇವಗನ್ ನಟಿಸಿದ್ದರು. ಇದೀಗ ಪ್ರಭಾಸ್ ಓಂ ರಾವತ್ ಜತೆಗಿನ ಮೊದಲ ಸಿನಿಮಾವಾಗಿದೆ. ಆದಿಪುರುಷ್ 3ಡಿ ಸಿನಿಮಾವಾಗಿದೆ. ಇದು ಹಿಂದಿ ಮತ್ತು ತೆಲುಗಿನಲ್ಲಿ ಚಿತ್ರೀಕರಣಗೊಳ್ಳಲಿದ್ದು, ನಂತರ ತಮಿಳು, ಕನ್ನಡ, ಮಲಯಾಳಂ ಹಾಗೂ ಇತರ ಅಂತರಾಷ್ಟ್ರೀಯ ಭಾಷೆಗೆ ಡಬ್ ಆಗಲಿದೆ ಎಂದು ತಿಳಿಸಿದ್ದಾರೆ.

2021ಕ್ಕೆ ಆದಿಪುರುಷ್ ಸಿನಿಮಾ ಸೆಟ್ಟೇರಲಿದ್ದು, ನಿಗದಿಯಂತೆ 2022ಕ್ಕೆ ಸಿನಿಮಾ ದೇಶ, ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಈ ಬಗ್ಗೆ ಮಾತನಾಡಿದ್ದು, ಆದಿಪುರುಷ್ ಬಿಗ್ ಸ್ಕ್ರೀನ್ ಸಿನಿಮಾವಾಗಲಿದ್ದು, ಭಾರತೀಯ ಪೌರಾಣಿಕ ಕಥಾ ಹಂದರವನ್ನು ಹೊಂದಿದೆ. ಈ ಸಿನಿಮಾದಲ್ಲಿ ಹೆಸರಾಂತ ನಟರು ಅಭಿನಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಟಿ ಸೀರೀಸ್ ನ ಭೂಷಣ್ ಕುಮಾರ್ ಆದಿಪುರುಷ್ ಸಿನಿಮಾದ ಸಹ ನಿರ್ಮಾಪಕರಾಗಿದ್ದು, ಪ್ರಭಾಸ್ ಜತೆಗಿನ ಮೂರನೇ ಸಿನಿಮಾ ಇದಾಗಿದೆ. ಭೂಷಣ್ ಕುಮಾರ್ ಈಗಾಗಲೇ ಪ್ರಭಾಸ್ ಅವರ ಸಾಹೋ ಹಾಗೂ ರಾಧೆ ಶ್ಯಾಮ್ ಸಿನಿಮಾದಲ್ಲಿ ಜತೆಯಾಗಿ ಕಾರ್ಯನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.