ಆ.15 ಕ್ಕೆ ʼಸಲಾರ್ʼ ಚಿತ್ರದಿಂದ ಬಿಗ್ ಅನೌನ್ಸ್ ಮೆಂಟ್: ಹೆಚ್ಚಾಯಿತು ಫ್ಯಾನ್ಸ್ ಕುತೂಹಲ
Team Udayavani, Aug 13, 2022, 7:58 PM IST
ಹೈದರಾಬಾದ್: ಪ್ರಶಾಂತ್ ನೀಲ್ ನಿರ್ದೇಶನದ ಮುಂದಿನ ಚಿತ್ರ ʼಸಲಾರ್ʼ ಚಿತ್ರೀಕರಣ ಜೋರಾಗಿ ನಡೆಯುತ್ತಿದ್ದು ಚಿತ್ರದ ಬಗ್ಗೆ ಹೊಸ ಅಪ್ ಡೇಟ್ ವೊಂದು ಬರಲಿದೆ ಎಂದು ಚಿತ್ರ ತಂಡ ಹೇಳಿದೆ.
ಟಾಲಿವುಡ್ ಸ್ಟಾರ್ ಪ್ರಭಾಸ್ ʼಬಾಹುಬಲಿʼ ಆದ ಬಳಿಕ ಹೇಳುಕೊಳ್ಳುವಂತಹ ಮಟ್ಟಿಗೆ ಮಿಂಚಿಲ್ಲ. ಅವರ ʼಸಾಹೋʼ ಹಾಗೂ ʼರಾಧೆ ಶ್ಯಾಮ್ʼ ಸದ್ದು ಮಾಡಿತ್ತು ಬಿಟ್ಟರೆ ಗಲ್ಲಾಪೆಟ್ಟಿಗೆಯಲ್ಲಿ ಅಷ್ಟಾಗಿ ಕಮಾಯಿ ಮಾಡಲಿಲ್ಲ.
ಅವರು ಪ್ರಶಾಂತ್ ನೀಲ್ ಅವರೊಂದಿಗೆ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹೊರ ಬಂದಾಗಿನಿಂದ, ಮುಂದೆ ಗೆಲುವು ಖಂಡಿತ ಸಿಗುತ್ತದೆ ಎನ್ನುವ ನಂಬಿಕೆಯಲ್ಲಿ ಪ್ರಭಾಸ್ ಅಭಿಮಾನಿಗಳಿದ್ದಾರೆ.
ʼಕೆಜಿಎಫ್ -2ʼ ಬಳಿಕ ಪ್ರಶಾಂತ್ ನೀಲ್ ʼಸಲಾರ್ʼ ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಪೋಸ್ಟರ್ ನಲ್ಲಿ ಪ್ರಭಾಸ್ ರಗಡ್ ಲುಕ್ ನಲ್ಲಿ ಮಿಂಚಿದ್ದು, ಇದೊಂದು ಪಕ್ಕಾ ಮಾಸ್ ಮೂವಿ ಎನ್ನಲಾಗಿದೆ. ಪ್ರಶಾಂತ್ ನೀಲ್ ನಿರ್ದೇಶನ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಚಿತ್ರಕ್ಕಿರುವುದರಿಂದ ಸಿನಿಮಾದ ಮೇಲೆ ದೊಡ್ಡ ನಿರೀಕ್ಷೆಯೇ ಇದೆ.
ಇದನ್ನೂ ಓದಿ: ಹಾಲಿವುಡ್ನ ಆಸ್ಕರ್ನಿಂದ ಹೊಗಳಿಕೆ ಪಡೆದ “ಲಾಲ್ ಸಿಂಗ್ ಛಡ್ಡಾ’ಸಿನಿಮಾ
ಬಹುದಿನಗಳಿಂದ ಚಿತ್ರದ ಬಗ್ಗೆ ಯಾವುದೇ ಅಪ್ ಡೇಟ್ ಗಳಿರಲಿಲ್ಲ. ಈಗ ಚಿತ್ರ ತಂಡ ಆ.15 ರಂದು ಹೊಸ ಮಾಹಿತಿ ನೀಡಲಾಗಿದೆ. ಆಗಸ್ಟ್ 15 ರಂದು ಮಧ್ಯಾಹ್ನ 12:58 ದೊಡ್ಡ ಅನೌನ್ಸ್ ಮೆಂಟ್ ಮಾಡಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಸೋಶಿಯಲ್ ಮೀಡಿಯಾದಲ್ಲಿ ಘೋಷಿಸಿದೆ. ಅದೇನಿರಬಹುದು ಎನ್ನುವುದು ಈಗ ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.
ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬಹುತೇಕ ಕೆಜಿಎಫ್ ತಂತ್ರಜ್ಞರೇ ಈ ಚಿತ್ರದಲ್ಲಿ ತಮ್ಮ ಕೈ ಚಳಕವನ್ನು ತೋರಿಸಲಿದ್ದಾರೆ. ಮ್ಯೂಸಿಕ್ ನಲ್ಲಿ ರವಿ ಬಸ್ರೂರು, ಭುವನ್ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ.
??? ????? ??? #??????. ???? ?????.#Prabhas @prashanth_neel @VKiragandur @hombalefilms @shrutihaasan @IamJagguBhai @bhuvangowda84 @RaviBasrur @shivakumarart @SalaarTheSaga pic.twitter.com/m7GFPsGo0D
— Hombale Films (@hombalefilms) August 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ