ರಜನಿಕಾಂತ್ ರನ್ನು ಬಾಲಿವುಡ್ ಗೆ ಪರಿಚಯಿಸಿದ್ದ ಟಿ.ರಾಮ ರಾವ್ ಇನ್ನಿಲ್ಲ
70 ಚಿತ್ರಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ
Team Udayavani, Apr 20, 2022, 3:03 PM IST
ಚೆನ್ನೈ: ಪ್ರಖ್ಯಾತ ಸಿನಿಮಾ ನಿರ್ಮಾಪಕ-ನಿರ್ದೇಶಕ ತಾತಿನೇನಿ ರಾಮರಾವ್ ಬುಧವಾರ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
ಅಮಿತಾಭ್ ಬಚ್ಚನ್ ಮತ್ತು ರಜನಿಕಾಂತ್ ಸೇರಿದಂತೆ ಭಾರತೀಯ ಚಿತ್ರರಂಗದ ಟಾಪ್ ಸ್ಟಾರ್ಗಳೊಂದಿಗೆ ಕೆಲಸ ಮಾಡಿದ್ದ 84 ವರ್ಷದ ಹಿರಿಯ ನಿರ್ದೇಶಕ ಸ್ವರ್ಗಸ್ಥರಾಗಿದ್ದಾರೆ . ಅವರು ವಯೋ ಸಹಜ ಸಮಸ್ಯೆಗಳಿಂದ ನಿಧನ ಹೊಂದಿದ್ದಾರೆ. ರಾವ್ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ರಾವ್ ಅವರು 1966 ಮತ್ತು 2000 ರ ನಡುವೆ 70 ಹಿಂದಿ ಮತ್ತು ತೆಲುಗು ಚಲನಚಿತ್ರಗಳನ್ನು ನಿರ್ದೇಶಿಸಿ ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ್ದರು.
1983 ರಲ್ಲಿ ‘ಅಂಧಾ ಕಾನೂನ್’ ಎಂಬ ಚಿತ್ರದ ಮೂಲಕ ತಮಿಳು ಸೂಪರ್ ಸ್ಟಾರ್ ರಜನಿ ಕಾಂತ್ ಅವರನ್ನು ಬಾಲಿವುಡ್ ಪ್ರವೇಶ ಮಾಡಿಸಿದ್ದರು.
ರಾವ್ ಅವರ ನಿಧನದ ವಾರ್ತೆಯನ್ನು ಹಂಚಿಕೊಂಡಿರುವ ನಟ ಅನುಪಮ್ ಖೇರ್, ಸಂತಾಪ ವ್ಯಕ್ತಪಡಿಸಿದ್ದಾರೆ. “ಹಿರಿಯ ಚಲನಚಿತ್ರ ನಿರ್ಮಾಪಕ ಮತ್ತು ಆತ್ಮೀಯ ಸ್ನೇಹಿತ ಶ್ರೀ ಟಿ ರಾಮರಾವ್ ಜಿ ಅವರ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಯಿತು. ಅವರೊಂದಿಗೆ ‘ಆಖ್ರಿರಾಸ್ತಾ’ ಮತ್ತು ‘ಸಂಸಾರ್’ ನಲ್ಲಿ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿತು!! ಅವರು ಸಹಾನುಭೂತಿ, ಕಮಾಂಡಿಂಗ್ ಮತ್ತು ಉತ್ತಮ ಹಾಸ್ಯಪ್ರಜ್ಞೆಯನ್ನು ಹೊಂದಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು! ಓಂ ಶಾಂತಿ!,” ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ