ಚೆನ್ನೈ ನ ಬೇಕರಿಯಲ್ಲಿ ರೂಪುಗೊಂಡ ಗಾನ ಗಂಧರ್ವ ಬಾಲಸುಬ್ರಹ್ಮಣ್ಯಂ ಚಾಕೊಲೇಟ್ ಪ್ರತಿಮೆ
Team Udayavani, Dec 24, 2020, 9:00 PM IST
ಪುದುಚೇರಿ: ಗಾನ ಗಂಧರ್ವ ಎಸ್ ಪಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸವಿನೆನಪಿಗಾಗಿ ಪುದುಚೇರಿಯಲ್ಲಿ ಚಾಕೊಲೇಟ್ ಪ್ರತಿಮೆಯೊಂದನ್ನು ನಿರ್ಮಿಸಲಾಗಿದ್ದು, ಇದೀಗ ಈ ಪ್ರತಿಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಚೆನ್ನೈ ನ ಪದುಚೇರಿಯಲ್ಲಿರುವ ಮಿಷನ್ ಸ್ಟ್ರೀಟ್ ನ ಬೇಕರಿಯೊಂದರಲ್ಲಿ ಈ ಪ್ರತಿಮೆಯನ್ನು ತಯಾರಿಸಿ ಪ್ರದರ್ಶನಗೊಳಿಸಲಾಗಿದೆ. ಈ ಪ್ರತಿಮೆಯು ಬರೋಬ್ಬರಿ 330 ಕೆ.ಜಿ ತೂಕವನ್ನು ಹೊಂದಿದ್ದು ಒಟ್ಟು 5.8 ಅಡಿ ಎತ್ತರವನ್ನು ಹೊಂದಿದೆ.
ಈ ಚಾಕಲೇಟ್ ಪ್ರತಿಮೆಯನ್ನು ರಾಜೇಂದ್ರನ್ ಎಂಬುವವರು ತಯಾರಿಸಿದ್ದು, ಒಟ್ಟು 161 ಗಂಟೆಗಳ ಸತತ ಪರಿಶ್ರಮದಿಂದ ಈ ಪ್ರತಿಮೆ ರೂಪುಗೊಂಡಿದೆ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಈ ಪ್ರತಿಮೆಯನ್ನು ಜನವರಿ 3 ರವರೆಗೆ ಪ್ರದರ್ಶನಕ್ಕೆ ಇಡಲಾಗುವುದು ರಾಜೇಂದ್ರನ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಕ್ರಿಸ್ಮಸ್ ಸಂಭ್ರಮಕ್ಕೆ ಅಡ್ಡಿಯಾದ ಕೋವಿಡ್
ಇದೇ ಬೇಕರಿಯಲ್ಲಿ ಈ ಹಿಂದೆ ಎ.ಪಿ.ಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಮುಂತಾದ ಪ್ರಸಿದ್ದ ವ್ಯಕ್ತಿಗಳು ಸೇರಿದಂತೆ ಹಲವಾರು ಕ್ರಿಕೆಟಿಗರ ಚಾಕೊಲೇಟ್ ಪ್ರತಿಮೆಗಳನ್ನು ತಯಾರಿಸಿ ಪ್ರದರ್ಶನಗೊಳಿಸಲಾಗಿತ್ತು ಎಂದು ವರದಿಯಾಗಿದೆ.
ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಕಳೆದ ಆಗಸ್ಟ್ 5ರಂದು ಕೋವಿಡ್ ಸೋಂಕಿಗೆ ಒಳಗಾಗಿ. ತದನಂತರ ಸೆಪ್ಟೆಂಬರ್ 25 ರಂದು ಶ್ವಾಸಕೋಶದ ವೈಫಲ್ಯದಿಂದ ಇಹಲೋಕ ತ್ಯೆಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ