ಬಂಧನದಿಂದ ಬಚಾವ್ ಆಗಲು ಪೊಲೀಸರಿಗೆ 25 ಲಕ್ಷ ರೂ.ಲಂಚ ನೀಡಿದ್ದರಾ ರಾಜ್ ಕುಂದ್ರಾ ?
Team Udayavani, Jul 22, 2021, 3:17 PM IST
ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಉಧ್ಯಮಿ ರಾಜ್ ಕುಂದ್ರಾ ಕುರಿತು ಮತ್ತೊಂದು ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
ಬಂಧನದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ 25 ಲಕ್ಷ ರೂ. ಲಂಚ ನೀಡಿದ್ದರು ಎನ್ನುವ ಮಾಹಿತಿ ಇದೀಗ ಬಹಿರಂಗವಾಗಿದೆ. ಈ ಪ್ರಕರಣದ ಆರೋಪಿಗಳಲ್ಲಿa ಒಬ್ಬರಾದ ಅರವಿಂದ ಶ್ರೀವಾಸ್ತವ ಅಲಿಯಾಸ್ ರಾಶ್ ಠಾಕೂರ್ ಅಮೆರಿಕ ಮೂಲದ ಕಂಪನಿ ಹಾಗೂ ಪೊಲೀಸ್ ನಡುವೆ ಹಣ ವರ್ಗಾವಣೆ ಆಗಿರುವ ಕುರಿತು ಮಾರ್ಚ್ ನಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಇಮೇಲ್ ಮೂಲಕ ದೂರು ನೀಡಿದ್ದರು. ಈ ಮೇಲ್ ನಲ್ಲಿ ಲಂಚದ ಕುರಿತಾದ ವಾಟ್ಸಾಪ್ ನ ಸ್ಕ್ರೀನ್ ಶಾಟ್ ಗಳಿದ್ದವು ಎಂದು ವರದಿಗಳು ತಿಳಿಸಿವೆ.
ಶ್ರೀವಾಸ್ತವ್ ಅಮೆರಿಕ ಮೂಲದ ಕಂಪನಿಯ ಹೊಂದಿದ್ದು, ಕಳೆದ ಮಾರ್ಚ್ ನಲ್ಲಿ ಸ್ಕ್ಯಾಂಡಲ್ ಹೊರ ಬಿದ್ದ ಮೇಲೆ ಪೊಲೀಸ್ ಇಲಾಖೆ ಈತನ ಹೆಸರಿನಲ್ಲಿ ಎರಡು ಬ್ಯಾಂಕ್ ಅಕೌಂಟ್ ಗಳಲ್ಲಿ ಸರಿಸುಮಾರು 4.50 ಕೋಟಿ ರೂ. ಹಣವನ್ನು ಜಪ್ತು ಮಾಡಿತ್ತು.
ಲಂಚದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸ್ ಅಧಿಕೃತ ವಕ್ತಾರ ಡಿಸಿಪಿ ಚೈತನ್ಯ ಎಸ್ ಅವರು ಈ ಬಗ್ಗೆ ನನಗೆ ತಿಳಿದಿಲ್ಲ ಎಂದಿದ್ದಾರೆ.
ಇನ್ನು ಅಶ್ಲೀಲ ಚಿತ್ರಗಳನ್ನು ರಚಿಸಿ ಕೆಲವು ಆ್ಯಪ್ಗಳ ಮೂಲಕ ಪ್ರಕಟಿಸಿದ ಆರೋಪದ ಮೇಲೆ ಕುಂದ್ರಾ ಅವರನ್ನು ಜುಲೈ 19 ರಂದು ಮುಂಬೈ ಅಪರಾಧ ಶಾಖೆ ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ