ನಾ ರಾಜಕಾರಣಿ ಅಲ್ಲ, ಕಲಾವಿದ!; ರಜನಿಕಾಂತ್ ಶ್ರೀಲಂಕಾ ಭೇಟಿ ರದ್ದು


Team Udayavani, Mar 25, 2017, 6:00 PM IST

Rajanikanth.jpg

ಚೆನ್ನೈ:ತಮಿಳು ರಾಜಕೀಯ ಹಾಗೂ ವಿವಿಧ ಸಂಘಟನೆಗಳ ಒತ್ತಡಕ್ಕೆ ಮಣಿದ ಸೂಪರ್ ಸ್ಟಾರ್ ರಜನಿಕಾಂತ್ ಶ್ರೀಲಂಕಾ ಭೇಟಿಯನ್ನು ಕೊನೆಗೂ ರದ್ದುಪಡಿಸಿರುವುದಾಗಿ ಶನಿವಾರ ತಿಳಿಸಿದ್ದಾರೆ. ನಿಗದಿಯಂತೆ ಏ.9ಕ್ಕೆ ರಜನಿಕಾಂತ್ ಶ್ರೀಲಂಕಾದ ಜಾಫ್ನಾಕ್ಕೆ ತೆರಳುವ ಕಾರ್ಯಕ್ರಮವಿತ್ತು.

ಆದರೆ ತಮಿಳರನ್ನು ಕಡೆಗಣಿಸುವ ಶ್ರೀಲಂಕಾಕ್ಕೆ ನಟ ರಜನಿಕಾಂತ್ ಅವರು ಭೇಟಿ ನೀಡಬಾರದು ಎಂದು ತಿರುಮಾವಲಾವನ್ ನೇತೃತ್ವದ ವಿಸಿಕೆ ಮತ್ತು ವೈಕೋ ನೇತೃತ್ವದ ಎಂಡಿಎಂಕೆ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು.
ಈ ಹಿನ್ನೆಲೆಯಲ್ಲಿ ತಾನು ಏ.9ರಂದು ಜಾಫ್ನಾಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಪಡಿಸಿರುವುದಾಗಿ ನಟ ರಜನಿಕಾಂತ್ ಬರೆದಿರುವ ಪತ್ರವನ್ನು ರಮೇಶ್ ಬಾಲಾ ಅವರು ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ.

ನಾನು ಶ್ರೀಲಂಕಾಕ್ಕೆ ಭೇಟಿ ನೀಡುವುದನ್ನು ರದ್ದುಪಡಿಸಿದ್ದೇನೆ. ಅದೇ ರೀತಿ ತಿರುಮಾವಲಾವನ್ ಮತ್ತು ವೈಕೋ ಅವರ ಕಾರಣವನ್ನು ನಾನು ಒಪ್ಪೋದಿಲ್ಲ ಎಂದು ರಜನಿ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಶ್ರೀಲಂಕಾದಲ್ಲಿ ತಮಿಳರು ಯಾವ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂಬುದನ್ನು ನೋಡಬೇಕೆಂದು ಇಚ್ಛಿಸಿದ್ದೆ. ಅಷ್ಟೇ ಅಲ್ಲ ಮೀನುಗಾರರ ಸಮಸ್ಯೆಗೊಂದು ಪರಿಹಾರ ಕಂಡುಹಿಡಿಯುವ ನೆಲೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರನ್ನು ಭೇಟಿಯಾಗಿ ಚರ್ಚಿಸಬೇಕೆಂದಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ರಜನಿಕಾಂತ್, ನಾನು ರಾಜಕಾರಣಿಯಲ್ಲ, ಆದರೆ ನಾನೊಬ್ಬ ನಟ ಎಂದು ತಮ್ಮ ಭೇಟಿ ವಿರುದ್ಧದ ರಾಜಕೀಯಕ್ಕೆ ತಿರುಗೇಟು ನೀಡಿದ್ದಾರೆ.

ಜ್ಞಾನಂ ಫೌಂಡೇಶನ್ ಜಾಫ್ನಾದಲ್ಲಿ ತಮಿಳಿರಿಗಾಗಿ 22 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ 150 ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು(ಏ.9) ಜಾಫ್ನಾಕ್ಕೆ ಆಹ್ವಾನಿಸಿತ್ತು. 

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.