ಮದುವೆ,ಅಕ್ರಮ ಸಂಬಂಧ,ಮೋಸ..ರಾಖಿ ಸಾವಂತ್ ದಾಂಪತ್ಯ ಬೀದಿಗೆ; ವಿಚ್ಛೇದನಕ್ಕೆ ಮುಂದಾದ ನಟಿ
ರಾಖಿ ಮೇಲೆ ಹಲ್ಲೆಗೆ ಯತ್ನಿಸಿದ ಆದಿಲ್ ಬಂಧನ
Team Udayavani, Feb 7, 2023, 4:45 PM IST
ಮುಂಬಯಿ: ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ರಾಖಿ ಸಾವಂತ್ ಹಾಗೂ ಪತಿ ಆದಿಲ್ ದುರಾನಿ ನಡುವಿನ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದ್ದು, ಹಲ್ಲೆಗೆ ಯತ್ನಿಸಿದ ಆರೋಪದಡಿ ಆದಿಲ್ ದುರಾನಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ .
ಮನೆಗೆ ಬಂದು ಆತ ಹಲ್ಲೆಗೆ ಮುಂದಾಗಿದ್ದ, ಈ ವೇಳೆ ನಾನು ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ಹೇಳಿದೆ ಎಂದು ನಟಿ ರಾಖಿ ದೂರು ಕೊಟ್ಟ ಬಗ್ಗೆ ಮಾಧ್ಯಮದವರಿಗೆ ತಿಳಿಸಿದ್ದಾರೆ. ರಾಖಿ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಓಶಿವಾರಾ ಪೊಲೀಸರು ಆದಿಲ್ ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ರಾತ್ರಿ ( ಫೆ. 6 ರಂದು) ಆದಿಲ್ ಮನೆಗೆ ಬಂದು ನನ್ನಿಂದ ತಪ್ಪಾಯಿತು ಎಂದು ಹೇಳಿ ನನ್ನನ್ನು ಊಟಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆತ ನನಗೆ ಊಟ ಕೊಡಿಸಿದ್ದಾನೆ. ಆದರೆ ನಾನು ಅವನೊಂದಿಗೆ ಎಲ್ಲೂ ಮಾತನಾಡಿಲ್ಲ. ಆತ ನನ್ನ ಚಿನ್ನವನ್ನು ತೆಗೆದುಕೊಂಡಿದ್ದಾನೆ. ಆತ ತುಂಬಾ ಜನರೊಂದಿಗೆ ಮೈ ಹಂಚಿಕೊಂಡಿದ್ದಾನೆ. ನಾನು ಅವನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆಯನ್ನು ಮಾಡಿಕೊಳ್ಳುವುದಿಲ್ಲ. ಇನ್ನು ನಾನು ಅವನಿಂದ ವಿಚ್ಛೇದನ ಪಡೆಯಲು ನಿರ್ಧರಿಸಿದ್ದೇನೆ ಎಂದು ರಾಖಿ ಹೇಳಿದ್ದಾರೆ.
ರಾಖಿ – ಆದಿಲ್ ಇತ್ತೀಚೆಗಷ್ಟೇ ಕೋರ್ಟ್ ಮ್ಯಾರೇಜ್ ಆಗಿದ್ದರು. ಮೊದಲು ಮದುವೆಯ ವಿಚಾರವನ್ನು ನಿರಾಕರಿಸಿದ್ದ ಆದಿಲ್ ಆ ಬಳಿಕ ಮಾಧ್ಯಮದ ಮುಂದೆ ಒಪ್ಪಿಕೊಂಡಿದ್ದರು. ರಾಖಿ ತನ್ನ ತಾಯಿಯ ನಿಧನದ ಬಳಿಕ ಆದಿಲ್ ಅವರು ಅಕ್ರಮ ಸಂಬಂಧವನ್ನು ಹೊಂದಿದ್ದಾರೆ ಎನ್ನುವ ಆರೋಪವನ್ನು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?