ರಾಮಾಯಣದ “ಸುಗ್ರೀವ” ಪಾತ್ರಧಾರಿ ಶ್ಯಾಮ್ ಸುಂದರ್ ಕಾಲಾನಿ ವಿಧಿವಶ, ಗಣ್ಯರ ಸಂತಾಪ
ರಾಮಾಯಣ ಧಾರವಾಹಿಯಲ್ಲಿ ಸುಗ್ರೀವ ಹಾಗೂ ಬಲಿ ಪಾತ್ರವನ್ನು ನಿರ್ವಹಿಸಿದ್ದರು.
Team Udayavani, Apr 9, 2020, 3:13 PM IST
ನವದೆಹಲಿ:ದೂರದರ್ಶನದಲ್ಲಿ ಅಪಾರ ಜನಪ್ರಿಯತೆ ಪಡೆದಿದ್ದ ರಮಾನಂದ್ ಸಾಗರ್ ಅವರ ರಾಮಾಯಣ ಧಾರವಾಹಿಯಲ್ಲಿ ಸುಗ್ರೀವನ ಪಾತ್ರದಲ್ಲಿ ನಟಿಸಿದ್ದ ಶ್ಯಾಮಸುಂದರ್ ಕಾಲಾನಿ ವಿಧಿವಶರಾಗಿದ್ದಾರೆ ಎಂದು ಸಹ ನಟ, ರಾಮಾಯಣದ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ಸುಗ್ರೀವನ ಪಾತ್ರ ನಿರ್ವಹಿಸಿದ್ದ ಮಿ.ಶ್ಯಾಮ್ ಸುಂದರ್ ನಿಧನರಾಗಿದ್ದಾರೆಂದು ತಿಳಿದು ತುಂಬಾ ನೋವಾಯಿತು. ಅವರೊಬ್ಬ ಉತ್ತಮ ಹಾಗೂ ಅದ್ಭುತ ವ್ಯಕ್ತಿತ್ವ ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗೋವಿಲ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ರಾಮಾಯಣ ಧಾರವಾಹಿಯಲ್ಲಿ ಸುಗ್ರೀವ ಹಾಗೂ ಬಲಿ ಪಾತ್ರವನ್ನು ನಿರ್ವಹಿಸಿದ್ದರು. ವರದಿಗಳ ಪ್ರಕಾರ, ಶ್ಯಾಮ್ ಸುಂದರ್ ಅವರು ಏಪ್ರಿಲ್ 7ರಂದು ಹರ್ಯಾಣದ ಕಾಲ್ಕಾದಲ್ಲಿ ನಿಧನರಾಗಿದ್ದರು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ವಿವರಿಸಿದೆ.
1980-90ರ ದಶಕದಲ್ಲಿ ದೂರದರ್ಶನದಲ್ಲಿ ಅತೀ ಹೆಚ್ಚು ವೀಕ್ಷಿಸಲ್ಪಟ್ಟಿದ್ದ ಹೆಗ್ಗಳಿಕೆಗೆ ಪಾತ್ರವಾಗಿದ್ದ ಧಾರವಾಹಿ ಇದೀಗ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಡಿಡಿಯಲ್ಲಿ ರಾಮಾಯಣ ಮತ್ತು ಮಹಾಭಾರತ ಮರು ಪ್ರಸಾರವಾಗುತ್ತಿದೆ. ಶ್ಯಾಮ್ ಸುಂದರ್ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !