Ramayana: ರಾಮನ ಪಾತ್ರಕ್ಕಾಗಿ ಮದ್ಯ, ಮಾಂಸಾಹಾರವನ್ನು ತ್ಯಜಿಸಲಿದ್ದಾರೆ ನಟ ರಣ್ಬೀರ್
Team Udayavani, Oct 10, 2023, 6:11 PM IST
ಮುಂಬಯಿ: ಬಾಲಿವುಡ್ ಸಿನಿರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼರಾಮಾಯಣʼ ಸಿನಿಮಾ ಅನೌನ್ಸ್ ಆದ ದಿನದಿಂದ ಸದ್ದು ಮಾಡುತ್ತಿದೆ. ಇತ್ತೀಚೆಗೆ ಸಿನಿಮಾ ಸಟ್ಟೇರುವ ವಿಚಾರದಲ್ಲಿ ಸುದ್ದಿಯಾಗಿತ್ತು. ಇದೀಗ ಸಿನಿಮಾದ ಬಗ್ಗೆ ಮತ್ತೊಂದು ಅಪ್ಡೇಟ್ ವೊಂದು ಹೊರಬಂದಿದೆ.
ನಿತೇಶ್ ತಿವಾರಿ ನಿರ್ದೇಶನದ ಬಹುಕೋಟಿ ವೆಚ್ಚದ ʼರಾಮಾಯಣʼ ಬಹು ತಾರಾಂಗಣದಿಂದ ಗಮನ ಸೆಳೆದಿದೆ. ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಕನ್ನಡದ ಯಶ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.
2024 ರ ಆರಂಭದಲ್ಲಿ ಸಿನಿಮಾ ಸಟ್ಟೇರಲಿದೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಯಶ್ ಸಿನಿಮಾದಲ್ಲಿ ರಾವಣನಾಗಿ ಕಾಣಿಸಿಕೊಳ್ಳಲಿದ್ದು, ಇದಕ್ಕಾಗಿ ಯಶ್ 15 ದಿನದ ಕಾಲ್ ಶೀಟ್ ನೀಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಇದೀಗ ಸಿನಿಮಾದಲ್ಲಿ ರಾಮನಾಗಿ ಕಾಣಿಸಿಕೊಳ್ಳಲಿರುವ ನಟ ರಣಬೀರ್ಕಪೂರ್ ಅವರು, ಸಿನಿಮಾಕ್ಕಾಗಿ ಸಾಕಷ್ಟು ತಯಾರಿಯನ್ನು ನಡೆಸುತ್ತಿದ್ದಾರೆ.
ರಣಬೀರ್ ಮದ್ಯ ಮತ್ತು ಮಾಂಸವನ್ನು ತ್ಯಜಿಸುವ ಮೂಲಕ ಭಗವಾನ್ ರಾಮನ ಪರಿಶುದ್ಧತೆಗೆ ಹೊಂದಿಕೆಯಾಗುವಂತೆ ತಯಾರಿ ನಡೆಸಿಕೊಳ್ಳಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ರಣಬೀರ್ ರಾಮನ ಪಾತ್ರಕ್ಕಾಗಿ ರಣಬೀರ್ ಸಿನಿಮಾ ಆಗುವವರೆಗೆ ಮದ್ಯ ಹಾಗೂ ಮಾಂಸಾಹಾರವನ್ನು ತ್ಯಜಿಸಲಿದ್ದಾರೆ ಎನ್ನಲಾಗಿದೆ.
2024ರ ಫೆಬ್ರವರಿ- ಆಗಸ್ಟ್ ವರೆಗೆ ರಾಮ – ಸೀತಾ ಪಾತ್ರದ ಶೂಟಿಂಗ್ ನಡೆಯಲಿದೆ. ಎರಡು ಭಾಗಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ