Animal Teaser: ಸಿರಿವಂತನ ರಗಡ್ ಕಹಾನಿ; ಮಾಸ್ ಲುಕ್ ನಲ್ಲಿ ಮಿಂಚಿದ ʼರಾಕ್ ಸ್ಟಾರ್ʼ
Team Udayavani, Sep 28, 2023, 10:26 AM IST
ಮುಂಬಯಿ: ರಣ್ಬೀರ್ ಕಪೂರ್ ಅಭಿನಯದ ಬಹು ನಿರೀಕ್ಷಿತ ʼಅನಿಮಲ್ʼ ಚಿತ್ರದ ಟೀಸರ್ ಗುರುವಾರ(ಸೆ.28 ರಂದು) ರಿಲೀಸ್ ಆಗಿದೆ.
ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ʼಅನಿಮಲ್ʼ ಸಿನಿಮಾದಲ್ಲಿ ʼರಾಕ್ ಸ್ಟಾರ್ʼ ರಣ್ಬೀರ್ ಕಪೂರ್ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಪೋಸ್ಟರ್ ಇತ್ತೀಚೆಗೆ ರಿವೀಲ್ ಆಗಿತ್ತು. ಮೇಲ್ನೋಟಕ್ಕೆ ಇದೊಂದು ಮಾಸ್ ಕಂಟೆಂಟ್ ವುಳ್ಳ ಸಿನಿಮಾವೆನ್ನುವುದು ಅದರ ಪೋಸ್ಟರ್ ನೋಡಿದರೆ ತಿಳಿಯುತ್ತದೆ.
ಇದಲ್ಲದೆ ಈ ಸಿನಿಮಾದಲ್ಲಿ ಸೌತ್ ಬೆಡಗಿ ರಶ್ಮಿಕಾ ಮಂದಣ್ಣ ಅವರು ʼಗೀತಾಂಜಲಿʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಇತ್ತೀಚೆಗೆ ಪೋಸ್ಟರ್ ರಿಲೀಸ್ ಮಾಡುವ ಚಿತ್ರತಂಡ ಹೇಳಿತ್ತು. ನಟ ಬಾಬಿ ಡಿಯೋಲ್ ನೆಗೆಟಿವ್ ಶೆಡ್ ನಲ್ಲಿ ಕಾಣಿಸಿಕೊಳ್ಳಲಿರುವ ಬಗೆಗಿನ ಪೋಸ್ಟರ್ ರಿಲೀಸ್ ಮಾಡಿ ಸಿನಿಮಾದ ಹೈಪ್ ಹೆಚ್ಚಿಸಿದೆ.
ಇದೀಗ ʼಅನಿಮಲ್ʼ ಟೀಸರ್ ರಿಲೀಸ್ ಮಾಡಲಾಗಿದೆ. ಶ್ರೀಮಂತ ಮನೆತನದ ಹುಡುಗನೊಬ್ಬನ ಗ್ಯಾಂಗ್ ಸ್ಟರ್ ಕಥೆಯ ಎಳೆಯನ್ನು ಟೀಸರ್ ನಲ್ಲಿ ತೋರಿಸಲಾಗಿದೆ. ರಣ್ಬೀರ್ ಕಪೂರ್ ಇಲ್ಲಿ ಅಪ್ಪನ ಮಾತನ್ನು ಈಡೇರಿಸಲು ಪಾತಕಲೋಕದಲ್ಲಿ ನೆತ್ತರು ಹರಿಸುವ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ʼಗೀತಾಂಜಲಿʼ ಅವರಿಗೆ ತನ್ನ ಅಪ್ಪ ಜಗತ್ತಿನ ಬೆಸ್ಟ್ ಅಪ್ಪವೆಂದು ಹೇಳುವ ಮೂಲಕ ಟೀಸರ್ ಝಲಕ್ ಆರಂಭಿಸಲಾಗಿದೆ. ಕೊನೆಯಲ್ಲಿ ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ಬಾಬಿ ಡಿಯೋಲ್ ಅವರ ಒಂದು ಲುಕ್ ನ್ನು ತೋರಿಸಲಾಗಿದೆ.
ಚಾಕ್ಲೇಟ್ ಬಾಯ್ ರಣ್ಬೀರ್ ಹುಟ್ಟುಹಬ್ಬಕ್ಕೆ ʼಅನಿಮಲ್ʼ ಟೀಸರ್ ರಿಲೀಸ್ ಆಗಿದ್ದು, ಮಾಸ್ ಟೀಸರ್ ನೋಡಿ ಅಭಿಮಾನಿಗಳ ಥ್ರಿಲ್ ಆಗಿದ್ದಾರೆ.
ರಣ್ಬೀರ್ ಕಪೂರ್ ಅವರೊಂದಿಗೆ ಬಾಬಿ ಡಿಯೋಲ್, ಅನಿಲ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ʼಅನಿಮಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 1 ರಂದು ಪ್ಯಾನ್ ಇಂಡಿಯಾ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್