Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

ಭಾರತೀಯ ಸಿನಿರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ

Team Udayavani, May 14, 2024, 8:49 AM IST

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

ಮುಂಬಯಿ: ನಿತೇಶ್‌ ತಿವಾರಿ ಅವರ ʼರಾಮಾಯಣʼ ಸಿನಿಮಾದ ಮೇಲಿನ ಕುತೂಹಲ ಹೆಚ್ಚಾಗಿದೆ. ಬಜೆಟ್‌, ಕಲಾವಿದರು.. ಹೀಗೆ ನಾನಾ ವಿಚಾರದಲ್ಲಿ ಪ್ಯಾನ್‌ ಇಂಡಿಯಾ ʼರಾಮಾಯಣʼ ದೊಡ್ಡಮಟ್ಟದಲ್ಲೇ ಸುದ್ದಿ ಆಗುತ್ತಿದೆ.

ಭಾರತೀಯ ಸಿನಿಮಾದಲ್ಲಿ ಹೊಸ ರೀತಿಯಲ್ಲಿ ದಾಖಲೆ ಬರೆಯಲು ʼರಾಮಾಯಣʼ ಸಿದ್ದವಾಗಿದೆ. ಇತ್ತೀಚೆಗಷ್ಟೇ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ ಎನ್ನಲಾಗಿದೆ. ಚಿತ್ರೀಕರಣದ ಸಂದರ್ಭದಲ್ಲಿ ʼರಾಮ – ಸೀತೆʼಯಾಗಿ ಕಾಣಿಸಿಕೊಂಡಿದ್ದ ರಣ್ಬೀರ್‌ – ಸಾಯಿಪಲ್ಲವಿ ಅವರ ಫೋಟೋಗಳು ಲೀಕ್‌ ಆಗಿದ್ದವು.

ಸಿನಿಮಾವನ್ನು ಬಾಲಿವುಡ್ ನಿರ್ಮಾಪಕ ನಮಿತ್ ಮಲ್ಹೋತ್ರಾ – ನಟ ಯಶ್ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ದೊಡ್ಡಮಟ್ಟದ ಸಿನಿಮಾವಾಗಿರಲಿದೆ. ಮೂಲಗಳ ಪ್ರಕಾರ ʼರಾಮಾಯಣʼ ಮೂರು ಭಾಗಗಳಲ್ಲಿ ಬರಲಿದೆ. ಮೊದಲ ಭಾಗ ರಿಲೀಸ್‌ ಆಗಲು ಎರಡು ವರ್ಷಗಳು ಬೇಕಿದೆ. ಅಂದರೆ 2026 ರಲ್ಲಿ ʼರಾಮಾಯಣʼ ದೊಡ್ಡ ಪರದೆಗೆ ಅಪ್ಪಳಿಸಲಿದೆ.

ಮೊದಲೇ ಹೇಳಿದಾಗೆ ಇದೊಂದು ಬಿಗ್‌ ಬಜೆಟ್‌ ಸಿನಿಮಾ. ಆದರೆ ಇದೀಗ ಬಂದಿರುವ ಲೇಟೆಸ್ಟ್‌ ವರದಿಗಳ ಪ್ರಕಾರ ಇದು ಬರೀ ಬಿಗ್‌ ಬಜೆಟ್‌ ಸಿನಿಮಾ ಮಾತ್ರವಲ್ಲದೆ ಭಾರತೀಯ ಸಿನಿಮಾರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ.

ʼರಾಮಾಯಣ: ಭಾಗ -1ʼ ಕ್ಕಾಗಿ ನಿರ್ಮಾಪಕರು ಬರೋಬ್ಬರಿ 835 ಕೋಟಿ ರೂಪಾಯಿಯ ಬಂಡವಾಳವನ್ನು ಹಾಕಲಿದ್ದಾರೆ. ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ಗಾಗಿ 600 ದಿನ ಮೀಸಲಿಡಲು ಮುಂದಾಗಿದ್ದಾರೆ ಎಂದು ʼಬಾಲಿವುಡ್‌ ಹಂಗಾಮʼ ಮೂಲಗಳನ್ನು ಆಧಾರಿಸಿ ವರದಿ ಮಾಡಿದೆ.

“ರಾಮಾಯಣವು ಕೇವಲ ಚಲನಚಿತ್ರವಲ್ಲ. ಅದೊಂದು ಭಾವನೆಯಾಗಿದೆ. ಅದನ್ನು ಜಾಗತಿಕ ಚಮತ್ಕಾರವನ್ನಾಗಿಸಲು ತಯಾರಕರು ಯಾವುದೇ ರೀತಿಯಲ್ಲಿ ಹಿಂದೇಟು ಹಾಕುತ್ತಿಲ್ಲ” ಎಂದು ಮೂಲಗಳು ತಿಳಿಸಿವೆ ಎಂದು ವರದಿ ಮಾಡಿದೆ.

ಸಿನಿಮಾದ ಫ್ರಾಂಚೈಸ್ ಮುಂದೆ ಹೋಗುತ್ತಿದ್ದಂತೆ ಈ ಬಜೆಟ್‌ ನ್ನು ವಿಸ್ತರಣೆ ಮಾಡಲು ಅವರು ಯೋಜಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲಗಳ ಪ್ರಕಾರ ನಮಿತ್ ಮಲ್ಹೋತ್ರಾ  ಹಾಗೂ ಯಶ್‌ ಬಜೆಟ್‌ ನಲ್ಲಿ 50-50 ಬಂಡವಾಳ ಹಾಕಲಿದ್ದಾರೆ. ಆ ಮೂಲಕ ಯಶ್‌ ʼರಾಮಾಯಣʼ ಕ್ಕಾಗಿ 400 ಕೋಟಿ ಬಂಡವಾಳ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಪಾತ್ರವರ್ಗದತ್ತ ಗಮನ ಹರಿಸಿದರೆ ರಣ್ಬೀರ್‌ ಕಪೂರ್‌, ಸಾಯಿಪಲ್ಲವಿ ಜೊತೆಗೆ ರಾವಣನಾಗಿ ಯಶ್, ಕೈಕೇಯಿ ಆಗಿ ಲಾರಾ ದತ್ತಾ, ಹನುಮಂತನಾಗಿ ಸನ್ನಿ ಡಿಯೋಲ್, ವಿಭೀಷಣ ಆಗಿ ವಿಜಯ್ ಸೇತುಪತಿ, ಶೂರ್ಪನಕಿಯಾಗಿ ರಕುಲ್ ಪ್ರೀತ್ ಸಿಂಗ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜೊತೆ ಹಲವು ಖ್ಯಾತ ನಟರ ಹೆಸರು ಕೂಡ ಕೇಳಿ ಬರುತ್ತಿದೆ.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ

ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Mahesh Babu: ರಿಯಲ್ ಎಸ್ಟೇಟ್ ಕಂಪನಿ ವಂಚನೆ; ನಟ ಮಹೇಶ್ ಬಾಬುಗೆ ಲೀಗಲ್ ನೋಟಿಸ್

Mahesh Babu: ರಿಯಲ್ ಎಸ್ಟೇಟ್ ಕಂಪನಿ ವಂಚನೆ; ನಟ ಮಹೇಶ್ ಬಾಬುಗೆ ಲೀಗಲ್ ನೋಟಿಸ್

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಈ ಖ್ಯಾತ ಸಂಗೀತ ಸಂಯೋಜಕ ಎಂಟ್ರಿ?

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಈ ಖ್ಯಾತ ಸಂಗೀತ ಸಂಯೋಜಕ ಎಂಟ್ರಿ?

Prabhas: ʼಫೌಜಿʼ, ʼಸ್ಪಿರಿಟ್‌ʼ ಬಳಿಕ ಮತ್ತೊಂದು ಚಿತ್ರದಲ್ಲಿ ಪ್ರಭಾಸ್‌ ಪೊಲೀಸ್‌ ಲುಕ್?

Prabhas: ʼಫೌಜಿʼ, ʼಸ್ಪಿರಿಟ್‌ʼ ಬಳಿಕ ಮತ್ತೊಂದು ಚಿತ್ರದಲ್ಲಿ ಪ್ರಭಾಸ್‌ ಪೊಲೀಸ್‌ ಲುಕ್?

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.