ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
Team Udayavani, Mar 16, 2024, 12:53 PM IST
ಮುಂಬಯಿ: ನಿತೇಶ್ ತಿವಾರಿ ಅವರ ʼರಾಮಾಯಣʼ ಭಾರತ ಸಿನಿರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಅನೌನ್ಸ್ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ ಇದೀಗ ಸಿನಿಮಾ ಮತ್ತೊಂದು ವಿಚಾರದಲ್ಲಿ ಸುದ್ದಿಯಾಗಿದೆ.
ರಣಬೀರ್ ಕಪೂರ್ ʼರಾಮʼನಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅವರು ಸಾಕಷ್ಟು ತಯಾರಿ ನಡೆಸಿಕೊಂಡಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ, ದಕ್ಷಿಣದ ಖ್ಯಾತ ಕಲಾವಿದರು ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ನಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಆದರೆ ಸಿನಿಮಾ ಸಟ್ಟೇರುವ ಮುನ್ನವೇ ಚಿತ್ರತಂಡಕ್ಕೆ ಸಂಕಷ್ಟವೊಂದು ಎದುರಾಗಿದೆ. ಸಿನಿಮಾಕ್ಕೆ ಅಲ್ಲು ಅರವಿಂದ್ ಮತ್ತು ಮಧು ಮಂಟೇನಾ ಸಹ ನಿರ್ಮಾಪಕರಾಗಿದ್ದರು. ಆದರೆ ಇದೀಗ ಮಧು ಮಂಟೇನಾ ನಿರ್ಮಾಣದಿಂದ ಹಿಂದೆ ಸರಿದಿದ್ದಾರೆ ಎಂದು ʼ ಸಿಯಾಸತ್ʼ ವರದಿ ಮಾಡಿದೆ.
ಸದ್ಯ ಮಧು ಅವರು ನಿರ್ಮಾಣದಿಂದ ಹಿಂದೆ ಸರಿದಿರುವ ಹಿಂದಿನ ಕಾರಣಗಳು ಇನ್ನು ಕೂಡ ಸ್ಪಷ್ಟವಾಗಿಲ್ಲ. ಇನ್ನೊಂದೆಡೆ ಈ ಬಗ್ಗೆ ಚಿತ್ರತಂಡ ಕೂಡ ಅಧಿಕೃತವಾಗಿ ಎಲ್ಲೂ ಕೂಡ ಹೇಳಿಲ್ಲ.
ಮತ್ತೊಂದೆಡೆ, ಆಸ್ಕರ್ ವಿಜೇತ ವಿಎಫ್ಎಕ್ಸ್ ಕಂಪನಿ ಡಿಎನ್ಇಜಿಯ ಸಿಇಒ ನಮಿತ್ ಮಲ್ಹೋತ್ರಾ ಈಗ ರಾಮಾಯಣದ ನಿರ್ಮಾಣದ ಭಾಗವಾಗಲಿದ್ದಾರೆ. ಈ ವಿಎಫ್ ಎಕ್ಸ್ ಕಂಪನಿಯು ಓಪನ್ಹೈಮರ್, ಇ ಮಚಿನಾ, ಇಂಟರ್ಸ್ಟೆಲ್ಲಾರ್, ಡ್ಯೂನ್ ಮತ್ತು ಫಸ್ಟ್ ಮ್ಯಾನ್ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಕೆಲಸ ಮಾಡಿದೆ.
ಸಿನಿಮಾದಲ್ಲಿ ರಾಮನಾಗಿ ರಣ್ಬೀರ್, ಸೀತೆಯಾಗಿ ಸಾಯಿಪಲ್ಲವಿ, ರಾವಣನಾಗಿ ನಟ ಯಶ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹನುಮಾನ್ ಪಾತ್ರದಲ್ಲಿ ಸನ್ನಿ ಡಿಯೋಲ್ , ಬಾಬಿ ಡಿಯೋಲ್ ಕುಂಭಕರ್ಣನಾಗಿ, ವಿಭೂಷಣನಾಗಿ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನು ರಾಜ ದಶರಥನ ಪಾತ್ರದಲ್ಲಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ ಆದರೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್