ಮುಸ್ಲಿಮರಿಗೆ ಭಾರತ ಸುರಕ್ಷಿತವಲ್ಲ ಎನಿಸುತ್ತದೆ…: ಹೂಡಾ ಪೋಸ್ಟ್
Team Udayavani, May 28, 2017, 4:15 PM IST
ಹೊಸದಿಲ್ಲಿ: ಕೇಂದ್ರ ಸರ್ಕಾರ ಗೋಹತ್ಯೆಗೆ ಸಂಬಂಧಿಸಿದ ಕಾಯ್ದೆಯಲ್ಲಿ ಮಹತ್ವದ ತಿದ್ದುಪಡಿ ಮಾಡಿ ಆದೇಶಿಸಿರುವ ಕುರಿತಾಗಿ ದೇಶಾದ್ಯಂತ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ರಣ್ದೀಪ್ ಹೂಡಾ ಫೇಸ್ಬುಕ್ನಲ್ಲಿ ಅರ್ಥಪೂರ್ಣವೆನಿಸುವಂತಹ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ.
40 ರ ಹರೆಯದ ಹೂಡಾ ಮಾಡಿರುವ ಪೋಸ್ಟ್ನಲ್ಲಿ ಜನರು ಸಾಮಾಜಿಕ ತಾಣಗಳಿಂದ ದೂರ ಇರುವಂತೆ ಕರೆ ನೀಡಿದ್ದಾರೆ. ಮಾತ್ರವಲ್ಲದೆ ಧಾರ್ಮಿಕ ವಿಚಾರಗಳ ಕುರಿತಾಗಿ ಚರ್ಚೆಗಳ ಸುದ್ದಿಗಳನ್ನು ವೀಕ್ಷಿಸದೇ ಇರುವಂತೆ ಮನವಿ ಮಾಡಿದ್ದಾರೆ.
ಪೋಸ್ಟ್ನಲ್ಲೇನಿದೆ?
‘ನೀವು ಮುಸ್ಲಿಮರಾಗಿದ್ದರೆ ನೀವು ಸಾವಿರಾರು ವರ್ಷಗಳಿಂದ ಬದುಕಿರುವ ಈ ದೇಶ ಅಸುರಕ್ಷಿತ ಎನಿಸುತ್ತದೆ.ನೀವು ದಲಿತರೆ, ಪ್ರತೀ ಕ್ಷಣವೂ ಅವಮಾನ ಅನುಭವಿಸಬೇಕಾಗುತ್ತದೆ.ನೀವು ಹಿಂದೂಗಳೇ, ಪ್ರತೀ ಕ್ಷಣ ದೇಶದ ಎಲ್ಲೆಡೆ ಗೋವುಗಳನ್ನು ವಧಿಸಲಾಗುತ್ತಿದೆ ಎಂದು ಯೋಚಿಸಬೇಕಾಗುತ್ತದೆ.ನೀವು ಜೈನರೇ,ನಿಮ್ಮ ಧರ್ಮನಿಷ್ಠೆಯೊಂದಿಗೆ ರಾಜಿ ಮಾಡಿಕೊಂಡಿದ್ದೀರಿ ಎನಿಸುತ್ತದೆ.ನೀವು ಪಂಜಾಬಿಗಳೇ ಪ್ರತೀ ಯುವಕನೂ ಮಾದಕ ದೃವ್ಯ ವ್ಯಸನಿ ಎನಿಸುತ್ತದೆ.ಅದಕ್ಕಾಗಿ ನೀವು ಒಂದು ಕೆಲಸಮಾಡಿ,ಸಾಮಾಜಿಕ ತಾಣಗಳಿಂದ ದೂರವಿರಿ, ನ್ಯೂಸ್ ನೋಡಬೇಡಿ, ಧಾರ್ಮಿಕ ವಿಚಾರಗಳ ಚರ್ಚೆಗಳಿಂದ ದೂರವಿರಿ.ಆವಾಗ ನಿಮಗೆ ವಿಶ್ವದ ಅತ್ಯುತ್ತಮ ದೇಶದಲ್ಲಿ ವಾಸಿಸುತ್ತಿದ್ದೀರಿ ಎನ್ನುವುದು ಅರಿವಾಗುತ್ತದೆ’ ಎಂದು ಬರೆದಿದ್ದಾರೆ.
ಹೂಡಾ ಮಾಡಿರುವ ಈ ಪೋಸ್ಟ್ ಭಾರೀ ಪ್ರಮಾಣದಲ್ಲಿ ಹಂಚಿಕೊಂಡಿದ್ದು ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ