ಬಾಲಿವುಡ್ ನಲ್ಲಿ ಫುಲ್ ಬ್ಯುಸಿಯಾದ ಕೊಡಗಿನ ಕುವರಿ: ರಣಬೀರ್ ಗೆ ಜೋಡಿ
Team Udayavani, Apr 3, 2022, 10:00 AM IST
ಮುಂಬಯಿ :ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದ ನಾಯಕಿಯಾಗಿ ನಟಿ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ ಎಂದು ಚಿತ್ರ ತಂಡ ಶನಿವಾರ ಘೋಷಿಸಿದೆ.
ಅಪರಾಧ ಹಿನ್ನಲೆಯ ಕಥೆ ಹೊಂದಿರುವ ಚಿತ್ರವನ್ನು ಕಬೀರ್ ಸಿಂಗ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸುತ್ತಿದ್ದಾರೆ.
ಟಿ-ಸೀರೀಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಶ್ಮಿಕಾ ಪಾತ್ರದ ಕುರಿತು ಘೋಷಿಸಿದ್ದು, ಯುಗಾದಿ ಮತ್ತು ಗುಡಿ ಪಾಡ್ವದ ಶುಭ ಸಂದರ್ಭದಲ್ಲಿ, ನಾವು ರಶ್ಮಿಕಾ ಮಂದಣ್ಣ ಅವರನ್ನು ‘ಅನಿಮಲ್’ ತಂಡಕ್ಕೆ ಸ್ವಾಗತಿಸುತ್ತೇವೆ! ಈ ಬೇಸಿಗೆಯಲ್ಲಿ ಶೂಟಿಂಗ್ ಆರಂಭವಾಗಲಿದೆ ಎಂದು ಬರೆದಿದೆ.
ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಮಾಡುವ ಮಂದಣ್ಣ, ಕಿರಿಕ್ ಪಾರ್ಟಿ, ಗೀತ ಗೋವಿಂದಂ, ದೇವದಾಸ್, ಯಜಮಾನ, ಮತ್ತು ಡಿಯರ್ ಕಾಮ್ರೇಡ್ ಮುಂತಾದ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಜನ ಮೆಚ್ಚುಗೆ ಪಡೆದಿದ್ದಾರೆ. ಬಿಡುಗಡೆಯಾದ ಅವರ ಕೊನೆಯ ಚಿತ್ರ ಅಲ್ಲು ಅರ್ಜುನ್ ನಾಯಕನಾಗಿದ್ದ”ಪುಷ್ಪಾ” ಭಾರಿ ಯಶಸ್ಸು ಕಂಡಿತ್ತು.
ಸ್ಪೈ ಥ್ರಿಲ್ಲರ್ ‘ಮಿಷನ್ ಮಜ್ನು’ ಜತೆಗೆ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಬಾಲಿವುಡ್ಗೆ ಪಾದಾರ್ಪಣೆ ಮಾಡಲು ರಶ್ಮಿಕಾ ಸಿದ್ಧರಾಗಿದ್ದು, ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಜೊತೆಗೆ ಮತ್ತೊಂದು ಹಿಂದಿ ಚಲನಚಿತ್ರ ಗುಡ್ ಬೈ ನಲ್ಲಿ ಸಹ ಕಾಣಿಸಿಕೊಳ್ಳಲಿದ್ದಾರೆ.
ಈ ಬೇಸಿಗೆಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿರುವ “ಅನಿಮಲ್” ನಲ್ಲಿ ನಟರಾದ ಅನಿಲ್ ಕಪೂರ್ ಮತ್ತು ಬಾಬ್ಲಿ ಡಿಯೋಲ್ ಕೂಡ ನಟಿಸುತ್ತಿದ್ದಾರೆ. ಚಿತ್ರವು ಆಗಸ್ಟ್ 11, 2023 ರಂದು ಬಿಡುಗಡೆಯಾಗಲಿದೆ.
‘ಅನಿಮಲ್’ ಚಿತ್ರವನ್ನು ಭೂಷಣ್ ಕುಮಾರ್ ಮತ್ತು ಕ್ರಿಶನ್ ಕುಮಾರ್ ಅವರ ಟಿ-ಸೀರೀಸ್, ಮುರಾದ್ ಖೇತಾನಿಯ ಸಿನಿ1 ಸ್ಟುಡಿಯೋಸ್ ಮತ್ತು ಪ್ರಣಯ್ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್ ನಿರ್ಮಿಸಿದೆ.
ಈ ಹಿಂದೆ, ನಟಿ ಪರಿಣಿತಿ ಚೋಪ್ರಾ ಅವರು ಚಿತ್ರದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು, ಆದರೆ ಅವರು ವೇಳಾಪಟ್ಟಿಯ ಸಂಘರ್ಷದಿಂದಾಗಿ ಚಿತ್ರದಿಂದ ಹೊರಗುಳಿಯಬೇಕಾಯಿತು ಎಂದು ಮಾಧ್ಯಮ ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ