ಸಾರ್ವಜನಿಕರೇ ಇಲ್ಲಿ ಕೇಳಿ.. ವಿಶೇಷ ಪೋಸ್ಟ್ ಹಾಕಿ ಕಾಳಜಿ ತೋರಿಸಿದ ರಶ್ಮಿಕಾ ಮಂದಣ್ಣ
ಆಗಾಗ ಟ್ವೀಟ್ ನಲ್ಲಿ ಏನಿದ್ದರೂ ತಮ್ಮ ಚಿತ್ರದ ಬಗ್ಗೆ ಹಂಚಿಕೊಳ್ಳುತ್ತಾರೆ.
Team Udayavani, Aug 8, 2022, 3:42 PM IST
ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಸೀತಾ ರಾಮಂʼ ಚಿತ್ರಕ್ಕೆ ಕೇಳಿ ಬರುತ್ತಿರುವ ಪಾಸಿಟಿವ್ ರೆಸ್ಪಾನ್ಸ್ ನಿಂದ ಖುಷಿಯಾಗಿದ್ದಾರೆ. ಕೊಡಗಿನ ಚೆಲುವೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿದ್ದು,ಯಾವುದೇ ವಿಷಯದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರೂ ಅದು ಸುದ್ದಿಯಾಗುತ್ತದೆ. ಇದೀಗ ರಶ್ಮಿಕಾ ಅವರು ಸಾರ್ವಜನಿಕರ ಸುರಕ್ಷತೆಗೆ ಟ್ವೀಟ್ ವೊಂದನ್ನು ಮಾಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.
ಸಾಮಾನ್ಯವಾಗಿ ಸೆಲೆಬ್ರಿಟಿಗಳು ಬ್ಯುಸಿಯಾಗಿರುತ್ತಾರೆ. ಆಗಾಗ ಟ್ವೀಟ್ ನಲ್ಲಿ ಏನಿದ್ದರೂ ತಮ್ಮ ಚಿತ್ರದ ಬಗ್ಗೆ ಹಂಚಿಕೊಳ್ಳುತ್ತಾರೆ. ಆದರೆ ನಟಿ ರಶ್ಮಿಕಾ ಸಾರ್ವಜನಿಕರಿಗಾಗಿ ಟ್ವೀಟ್ ಮಾಡಿ ಕಾಳಜಿ ತೋರಿಸಿದ್ದಾರೆ.
ಎಲ್ಲೆಡೆ ವಿಪರೀತ ಮಳೆಯಾಗುತ್ತಿದೆ. ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಿಟ್ಟಿನಲ್ಲಿ ಕಿರಿಕ್ ಪಾರ್ಟಿ ಸುಂದರಿ ರಶ್ಮಿಕಾ “ಎಲ್ಲರೂ ಕೇಳಿ ನಾನೀಗ ಹೇಳುತ್ತಿರುವುದು ಸಹಜ ವಿಷಯ ಅನ್ನಿಸಬಹುದು ಆದರೆ ಹೇಳಲೇ ಬೇಕು ಅನ್ನಿಸಿತು. ಕೆಲಸಕ್ಕೆ ಹೋಗುವವರು ರಾತ್ರಿ ಹೊತ್ತು ಮಳೆಯ ಸಮಯದಲ್ಲಿ ಮನೆಗೆ ವಾಪಾಸ್ ಬರುವಾಗ ಬಹಳ ಎಚ್ಚರವಹಿಸಿ” ಎಂದು ಮನವಿ ಮಾಡಿದ್ದಾರೆ.
ದುಲ್ಕರ್ ಸಲ್ಮಾನ್ ನಟನೆಯ ʼಸೀತಾ ರಾಮಂʼ ಚಿತ್ರದಲ್ಲಿ ನಟಿ ರಶ್ಮಿಕಾ ವಿಶೇಷವಾದ ಪಾತ್ರವನ್ನು ಮಾಡಿದ್ದಾರೆ. ಬಾಲಿವುಡ್ ನ ‘ಗುಡ್ ಬೈʼ ಸಿನಿಮಾದಲ್ಲೂ ಅವರು ಬ್ಯುಸಿಯಾಗಿದ್ದಾರೆ. ಅವರ ʼಪುಷ್ಪ-2ʼ ಚಿತ್ರ ಕೂಡ ನಿರೀಕ್ಷೆ ಹೆಚ್ಚಿಸಿದೆ.
Guys listen.
This is a very random note but just felt like saying –
Those of you who are going to work or getting back from work on bikes in the night, in this rain..
please please be careful .. ?— Rashmika Mandanna (@iamRashmika) August 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ