“ಆ ಹುಡುಗನ ಭವಿಷ್ಯದ ಜೊತೆ ಆಟವಾಡುತ್ತಿರುವುದು ಖೇದಕರ” : ನಟಿ ರವೀನಾ ಟಂಡನ್
Team Udayavani, Oct 8, 2021, 1:46 PM IST
ಮುಂಬೈ:ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನಕ್ಕೆ ನಟಿ ರವೀನಾ ಟಂಡನ್ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲಿಯೂ ಕೂಡ ಆರ್ಯನ್ ಖಾನ್ ಹೆಸರು ಉಲ್ಲೇಖಿಸದೆ ಟ್ವೀಟ್ ಮಾಡಿದ್ದಾರೆ.
ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳು ಶಾರುಖ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದ್ದಾರೆ. ಗುರುವಾರಷ್ಟೇ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈನ ಕಿಲ್ಲಾ ಕೋರ್ಟ್ ಆದೇಶ ಹೊರಡಿಸಿತು. ಇದರ ಬೆನ್ನಲ್ಲೆ ಟ್ವೀಟ್ ಮಾಡಿರುವ ರವೀನಾ, ಈ ವಿಷಯದಲ್ಲಿ ನಡೆಯುತ್ತಿರುವ ರಾಜಕೀಯ ನೋಡಿದರೆ ಅಸಹ್ಯವಾಗುತ್ತಿದೆ. ಆ ಯುವಕನ ಜೀವನ ಮತ್ತು ಭವಿಷ್ಯದ ಜೊತೆ ಆಟವಾಡುತ್ತಿರುವುದು ಖೇದರಕರ ಎಂದಿದ್ದಾರೆ.
ಮುಂಬೈನ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ವೇಳೆ ದಾಳಿ ನಡೆಸಿದ ಎನ್ಸಿಬಿ ಅಧಿಕಾರಿಗಳು, ಆರ್ಯನ್ ಖಾನ್ ಸೇರಿ 8 ಜನರನ್ನು ಬಂಧಿಸಿದ್ದಾರೆ. ಈತನ ಬಂಧನವನ್ನು ಬಾಲಿವುಡ್ನ ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಸುನಿಲ್ ಶೆಟ್ಟಿ, ಸುಸ್ಸೇನ್ ಖಾನ್ ಹಾಗೂ ಹೃತಿಕ್ ರೋಷನ್ ಅವರು ಆರ್ಯನ್ ಖಾನ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಅವರು ಶಾರುಖ್ ಖಾನ್ ಮನೆಗೆ ತೆರಳಿ ಧೈರ್ಯ ತುಂಬಿ ಬಂದಿದ್ದಾರೆ.
ಇನ್ನು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ನಂತರ ಬಾಲಿವುಡ್ ಜೊತೆ ಡ್ರಗ್ಸ್ ಪ್ರಕರಣ ತಳುಕು ಹಾಕಿಕೊಂಡಿತು. ಈ ಪ್ರಕರಣದಲ್ಲಿ ಇದುವರೆಗೆ ಹಲವು ಜನರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು