ಟ್ರೆಂಡಿಂಗ್-#BoycottNetflix: ಟ್ವೀಟಿಗರ ಆಕ್ರೋಶಕ್ಕೆ ಕಾರಣವಾದ ವೆಬ್ ಸರಣಿಯ ಚುಂಬನ ದೃಶ್ಯ


Team Udayavani, Nov 22, 2020, 7:48 PM IST

Wsuitable-boy

ಮುಂಬೈ: ಜನಪ್ರಿಯ ಓಟಿಟಿ ಫ್ಲ್ಯಾಟ್ ಪಾರ್ಮ್ ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರವಾಗುತ್ತಿರುವ  “ಏ ಸೂಟೆಬಲ್ ಬಾಯ್” ವೆಬ್ ಸೀರೀಸ್ ಇದೀಗ ವಿವಾದದ ಕೇಂದ್ರಬಿಂದುವಾಗಿದೆ.  ಈ ವೆಬ್ ಸರಣಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಹಲವು ಟ್ವೀಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ಈ ಕೂಡಲೇ ಮೀರಾ ನಾಯರ್ ನಿರ್ದೇಶನದ ವೆಬ್ ಸರಣಿಯನ್ನು ಪರಿಶೀಲನೆಗೆ ಒಳಪಡಿಸಬೇಕು. ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾದ ‘ಏ ಸೂಟೆಬಲ್ ಬಾಯ್’ ಎಂಬ ವೆಬ್ ಸರಣಿಯಲ್ಲಿ ಆಕ್ಷೇಪ ವ್ಯಕ್ತಪಡಿಸುವಂತಹ ದೃಶ್ಯಗಳಿದ್ದು,  ನಿರ್ದಿಷ್ಟ ಧರ್ಮದ ಧಾರ್ಮಿಕ ಭಾವನೆಗೆಳಿಗೆ ಧಕ್ಕೆ ತರುತ್ತಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.

ಏತನ್ಮಧ್ಯೆ ಬಿಜೆಪಿ ಪಕ್ಷದ ಯುವನಾಯಕ ಗೌರವ್ ತಿವಾರಿ, ರೇವಾ ಎಸ್ ಪಿ ರಾಕೇಶ್ ಕುಮಾರ್ ಸಿಂಗ್ ಅವರಿಗೆ ವೆಬ್ ಸರಣಿಯ ಮೇಲೆ ಎಫ್ ಐಆರ್ ದಾಖಲಿಸುವಂತೆ ಅಗ್ರಹಿಸಿದ್ದಾರೆ. ಇದರ ಬೆನ್ನಲ್ಲೆ ಮಧ್ಯಪ್ರದೇಶ ಗೃಹಸಚಿವರೂ ವೆಬ್ ಸರಣಿಯನ್ನು ಪರಿಶೀಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ಟ್ವೀಟ್ಟರ್ ಟ್ರೆಂಡಿಂಗ್ ಗೆ ಕಾರಣವಾಗಿದೆ.

 

ಘಟನೆಯ ಹಿನ್ನಲೆ: ವೆಬ್ ಸರಣಿಯಲ್ಲಿ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕ ದೇವಸ್ಥಾನವೊಂದರಲ್ಲಿ ಚುಂಬಿಸುವ ದೃಶ್ಯವನ್ನು ತೋರ್ಪಡಿಸಲಾಗಿತ್ತು. ಇದು ಧಾರ್ಮಿಕ ಭಾವನೆಗೆ ಧಕ್ಕೆ ತರುವ ದೃಶ್ಯ, ನೆಟ್ ಫ್ಲಿಕ್ಸ್ ಲವ್ ಜಿಹಾದ್ ಗೆ ಪ್ರಚೋದನೆ ನೀಡುತ್ತಿದೆ ಎಂದು ಗೌರವ್ ತಿವಾರಿ ಸಾಮಾಜಿಕ ಜಾಲತಾಣದಲ್ಲಿ, ನೆಟ್ ಫ್ಲಿಕ್ಸ್ ಅನ್ನು ಅನ್ ಇನ್ ಸ್ಟಾಲ್ ಮಾಡುವಂತೆ ಕರೆ ನೀಡಿದ್ದರು.

ನಂತರದಲ್ಲಿ ಈ ಘಟನೆ  ಟ್ವೀಟಿಗರ ಆಕ್ರೋಶಕ್ಕೂ ಕಾರಣವಾಗಿತ್ತು ಮಾತ್ರವಲ್ಲದೆ  #boycottnetflix  ಎಂಬ ಹ್ಯಾಷ್ ಟ್ಯಾಗ್ ಟ್ರೆಂಡ್ ಸೃಷ್ಟಿಸಿತ್ತು.

ಕೆಲ ಟ್ವೀಟಿಗರು ನೆಟ್ ಫ್ಲಿಕ್ಸ್ ಪರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ತಮ್ಮದೇ ರೀತಿಯಲ್ಲಿ ವೆಬ್ ಸರಣಿಯನ್ನು ಸಮರ್ಥಿಸಿಕೊಂಡಿದ್ದಾರೆ.

1947ರಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳು ಅನುಭವಿಸಿದ ತಲ್ಲಣದ ಸುತ್ತ ‘ ಏ ಸೂಟೆಬಲ್ ಬಾಯ್’ ಕಥೆಯನ್ನು ಹಣೆಯಲಾಗಿದೆ. ಇದು ವಿಕ್ರಮ್ ಸೇಠ್ ಅವರ ಜನಪ್ರಿಯ ಕಾದಂಬರಿಯಾಗಿದ್ದು ಮೀರಾ ನಾಯರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಇಶಾನ್ ‘ಸೂಟೆಬಲ್ ಬಾಯ್’ ಆಗಿ ಕಾಣಿಸಿಕೊಂಡರೇ, ಇವರ ಜೊತೆಗೆ ಟಬು, ರಸಿಕಾ ದುಗ್ಗಲ್, ತಾನ್ಯ, ರಾಮ್ ಕಪೂರ್ ಮೊದಲಾದವರು ನಟಿಸಿದ್ದಾರೆ.

ಬಿಜೆಪಿ ವಕ್ತಾರರಾಗಿರುವ ಗೌರವ್ ಗೋಯಲ್, ಸೂಟೇಬಲ್ ಬಾಯ್ ಚಿತ್ರವನ್ನು ಹೆಸರಿಸದೆ, ಓಟಿಟಿ ವೇದಿಕೆ ಇತ್ತೀಚಿಗೆ ನಿರಂತರವಾಗಿ ಹಿಂದೂ ದೇವ-ದೇವತೆಯರನ್ನು ಅಪಮಾನಕ್ಕೆ ಒಳಪಡಿಸುತ್ತಿದೆ. ಯಾರಾದರೂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಐಪಿಸಿ ಸೆಕ್ಷನ್ 295 ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಕಾನೂನು ಈ ಕುರಿತು ನ್ಯಾಯಯುತ ನಿರ್ಧಾರ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.