ಅದ್ಧೂರಿ ಸೆಟ್‌ನಲ್ಲಿ RRR ಪ್ರಿ- ಈವೆಂಟ್; ಅಪ್ಪು ನೆನೆದು ಭಾವುಕರಾದ ತೆಲುಗು ಚಿತ್ರನಟರು


Team Udayavani, Mar 20, 2022, 3:18 PM IST

RRR Pre Release Event at Chikkaballapur

ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ನೀರಿಕ್ಷಿತ ಚಿತ್ರ ‘ಆರ್‌.ಆರ್‌.ಆರ್‌’ ಇದೇ 25ಕ್ಕೆ ಬಿಡುಗಡೆಗೆ ಸಿದ್ಧವಾಗಿದ್ದು, ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಶನಿವಾರ ಅದ್ಧೂರಿ ಸೆಟ್‌ನಲ್ಲಿ ಪ್ರಿ-ರಿಲೀಸ್‌ ಈವೆಂಟ್‌ ನಡೆಯಿತು.

ಕೆ.ವಿ.ಎನ್‌ ಪ್ರೋಡಕ್ಷನ್‌ನಿಂದ ನಡೆದ ಚಿತ್ರ ಪ್ರಿ- ಈವೆಂಟ್‌ಗೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್‌, ನಟ ಶಿವರಾಜ್‌ಕುಮಾರ್‌ ಆಗಮಿಸಿದ್ದು, ಚಿತ್ರದ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ, ಚಿತ್ರದಲ್ಲಿ ನಟಿಸಿರುವ ಜೂನಿಯರ್‌ ಎನ್‌ಟಿಆರ್‌, ರಾಮಚರಣ್‌ ವೇದಿಕೆಯನ್ನು ಹಂಚಿಕೊಂಡರು. ಇನ್ನು ಅನೇಕ ಗಣ್ಯರು ಕಾರ್ಯಕ್ರಮಕ್ಕೆ ಭಾಗಿಯಾದರು.

ಚಿಕ್ಕಬಳ್ಳಾಪುರದ ಕೆಲವು ಭಾಗದಲ್ಲಿ ತೆಲುಗು ಭಾಷೆಯನ್ನು ಹೆಚ್ಚು ಬಳಸುವುದರಿಂದ ರಾಮ್‌ಚರಣ್‌, ಜೂ. ಎನ್‌ಟಿಆರ್‌ ಅಭಿಮಾನಿಗಳು ಮತ್ತು ಡಾ.  ಪುನೀತ್‌ ರಾಜ್‌ಕುಮಾರ್‌ ಅವರ ಅಭಿಮಾನಿಗಳು ಹೆಚ್ಚು ಸೇರುತ್ತಾರೆ ಎಂಬ ಉದ್ದೇಶದಿಂದ 100 ಎಕರೆ ಜಮೀನಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇದನ್ನೂ ಓದಿ:ಸೋಮವಾರ ಅಪ್ಪಳಿಸಲಿದೆ ರಾಕಿಂಗ್ ‘ತೂಫಾನ್’; ಕೆಜಿಎಫ್ 2 ಹಾಡು ಬಿಡುಗಡೆ

ಅಗಲಗುರ್ಕಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ರಾಮ್‌ಚರಣ್‌, ಜೂ. ಎನ್‌ಟಿಆರ್‌ ಅವರ ಅದ್ಧೂರಿ ಎಂಟ್ರಿ ಜನರಲ್ಲಿ ರೋಮಾಂಚನ ಮೂಡಿಸಿತು. ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ತಂಡದಿಂದ ಸಂಗೀತ ಮತ್ತು ಚಿತ್ರದ ಗೀತೆಗಳನ್ನು ಪ್ರಸ್ತುತಪಡಿಸಿದರು. ನೃತ್ಯಗಾರರು ಆರ್‌ಆರ್‌ಆರ್‌ ಚಿತ್ರಗಳಿಗೆ ಹೆಜ್ಜೆಹಾಕಿದರು.

ಬಾಲಿವುಡ್‌ ನಟಿ ಆಲಿಯಾ ಭಟ್‌, ಅಜಯ್‌ ದೇವಗನ್‌, ಒಲಿವಿಯಾ ಮೋರಿಸ್‌ ಅಭಿನಯದ ಆರ್‌.ಆರ್‌.ಆರ್‌ ಚಿತ್ರವು ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ತೆರೆಗೆ ಕಾಣಲಿದ್ದು, ಇದು 1920ರಲ್ಲಿ ಸ್ವಾತಂತ್ರ್ಯ ಹೋರಾಟಗಾರಾದ ಅಲ್ಲೂರಿ ಸೀತಾರಾಮರಾಜು, ಕೋಮರಮಂ ಭೀಮ್‌ರವರ ಕಾಲ್ಪನಿಕ ಘಟನೆಗಳ ಕಥಾಹಂದರವನ್ನು ಒಳಗೊಂಡಿದೆ.

ಚಿತ್ರದ ನಿರ್ದೇಶಕ ರಾಜಮೌಳಿ ಅವರು ಚಿತ್ರದಲ್ಲಿ ನಟರು ತಮ್ಮ ಪಾತ್ರಗಳಿಗಾಗಿ ಶ್ರಮವಹಿಸಿದ್ದನ್ನು ವಿವರಿಸಿದರು. ಆರೋಗ್ಯ ಸಚಿವ ಕೆ.ಸುಧಾಕರ್‌, ನಟ ಶಿವರಾಜ್‌ ಕುಮಾರ್‌ ನವರು ಭಾಷಣ ನೀಡಿ ಅಪ್ಪು ಸ್ಮರಣೆ ಮಾಡಿದರು. ಆರ್‌.ಆರ್‌.ಆರ್‌ ತಂಡಕ್ಕೆ ಶುಭ ಕೋರಿದರು. ಈ ವೇಳೆ ನಟರು ಚರಣ್‌, ತಾರಕ್‌, ಶಿವರಾಜ್‌ ಕುಮಾರ್‌ ಸ್ಟೇಜ್‌ ಮೇಲೆ ಬಂದಾಗ ಅಭಿಮಾನಿಗಳ ಗುಂಪು ವೇದಿಕೆ ಕಡೆಗೆ ನುಗ್ಗಿತು. ಅದನ್ನು ತಡೆಯಲು ರಾಜಮೌಳಿ ಮುಂದಾದರು. ಕಾರ್ಯಕ್ರಮಕ್ಕೆ 2 ಲಕ್ಷ ಅಭಿಮಾನಿಗಳು ಸೇರಿದ್ದರು.

ವಿದೇಶದಲ್ಲೂ ಪ್ರಚಾರ

ಜ. 7ರಿಂದಲೇ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗಿತ್ತು. ಆದರೆ ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಹಿಂದಿನ ವರ್ಷ ಮುಂಬೈ, ಚೆನ್ನೈ, ಬೆಂಗಳೂರಿನಲ್ಲಿ ಪ್ರಿ-ಈವೆಂಟ್‌ ಆಯೋಜಿಸಲಾಗಿತ್ತು. ಉಳಿದ ಈವೆಂಟ್‌ಗಳು ದುಬೈ, ಅಮೆರಿಕ ಸೇರಿದಂತೆ ವಿದೇಶಗಳಲ್ಲಿ ಆಯೋಜಿಸಲಾಗಿತ್ತು. ಬರೋಡಾ, ದೆಹಲಿ, ಜೈಪುರ, ಕಲ್ಕೋತಾ, ವಾರಾಣಸಿ, ಹೈದರಾಬಾದ್‌ ಸೇರಿದಂತೆ ದೇಶದ ವಿವಿಧೆಡೆ ಮಾ. 18ರಿಂದ 23ರವರಗೆ ಪ್ರಿ ಈವೆಂಟ್‌ಗಳನ್ನು ಆಯೋಜಿಸಲಾಗಿದೆ. 23ಕ್ಕೆ ಹೈದರಾಬಾದ್‌ನಲ್ಲಿ ಕೊನೆ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.