ಬೆಂಗಳೂರಿನಲ್ಲಿ ನಡೆಯಲಿದೆ ‘ಆರ್ಆರ್ಆರ್’ ಪ್ರೀ ರಿಲೀಸ್ ಇವೆಂಟ್
Team Udayavani, Nov 27, 2021, 4:49 PM IST
ರಾಜಮೌಳಿ ನಿರ್ದೇಶನದ “ಆರ್ಆರ್ಆರ್’ ಸಿನಿಮಾದ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಹಾಡು, ಫಸ್ಟ್ಲುಕ್ ಚಿತ್ರದ ಕುತೂಹಲ ಹೆಚ್ಚಿಸಿದೆ.
ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗಿದೆ. ಅದು ಬೆಂಗಳೂರಿನಲ್ಲಿ. ನಿರ್ದೇಶಕ ರಾಜಮೌಳಿ ಚಿತ್ರದ “ಜನನಿ’ ಹಾಡಿನ ಬಿಡುಗಡೆಗಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನನಗೆ ಸರಿಯಾಗಿ ಕನ್ನಡ ಬರುವುದಿಲ್ಲ. ನನ್ನ ಕನ್ನಡದ ಬಗ್ಗೆ ಕ್ಷಮೆ ಇರಲಿ’ ಎಂದರು.
ಇದನ್ನೂ ಓದಿ:‘ಗೋವಿಂದ ಗೋವಿಂದ’ ಚಿತ್ರವಿಮರ್ಶೆ: ಕಾಮಿಡಿ ಕಿಲಾಡಿಗಳ ಗೋವಿಂದ ಸ್ಮರಣೆ
ಜೊತೆಗೆ ಮುಂದಿನ ತಿಂಗಳು “ಆರ್ಆರ್ಆರ್’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲಿದ್ದು, ಅಂದು ಚಿತ್ರದ ಕಲಾವಿದರಾದ ಜೂ.ಎನ್ಟಿಆರ್, ರಾಮ್ ಚರಣ್ ತೇಜಾ, ಅಜಯ್ ದೇವಗನ್, ಅಲಿಯಾ ಭಟ್ ಕೂಡಾ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
“ಜನನಿ’ ಹಾಡಿನ ಬಗ್ಗೆ ಮಾತನಾಡಿದ ರಾಜಮೌಳಿ, “ಜನನಿ ಕೇವಲ ಹಾಡಲ್ಲ. ಇದು ನಮ್ಮ ಸಿನಿಮಾದ ಆ್ಯಂಥಮ್. ಈ ಹಾಡಿನಲ್ಲಿ ಒಂದು ಭಾವನೆ ಇದೆ. ಚಿತ್ರದ ಅದ್ಭುತವಾದ ಹಾಡು, ಫೈಟ್, ಡ್ಯಾನ್ಸ್ ನೋಡಿದ್ದೀರಿ. ಅದರ ಹಿಂದೆಯೂ ಒಂದು ಭಾವನೆ ಇದೆ’ ಎಂದು ಚಿತ್ರದ ಬಗ್ಗೆ ಹೇಳಿದರು ರಾಜಮೌಳಿ. ಚಿತ್ರ ಜನವರಿ 07ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಬೆಂಗಳೂರಿಗೆ ಆಗಮಿಸಿದ್ದ ರಾಜಮೌಳಿ “ಆರ್ಆರ್ಆರ್’ ಹಾಡು ಬಿಡುಗಡೆ ಬಳಿಕ ನಟ ಪುನೀತ್ರಾಜ್ಕುಮಾರ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಪುನೀತ್ ಭೇಟಿಯನ್ನು ನೆನಪಿಸಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ