‘ಸಾಹೋ’ : ಆಗಸ್ಟ್ 15ಕ್ಕಲ್ಲ ; 30ಕ್ಕೆ ಬಿಡುಗಡೆ

ಬಾಹುಬಲಿಯ ಪ್ರಭಾಸ್‌ ರ ಹೊಸ ಥ್ರಿಲ್ಲರ್ ಚಿತ್ರ ಸಾಹೋ ಮೇಲೆ ಹೆಚ್ಚಿದ ನಿರೀಕ್ಷೆ

Team Udayavani, Aug 11, 2019, 8:20 PM IST

Saho-726

ಇಂಥದೊಂದು ಕುತೂಹಲ ಸಿನಿಮಾ ವೀಕ್ಷಕರಲ್ಲಿ ಹುಟ್ಟು ಹಾಕಿರುವುದಂತೂ ಸತ್ಯ. ಅದರಲ್ಲೂ ಪ್ರಭಾಸ್‌ ನ ಅಭಿಮಾನಿಗಳಲ್ಲಂತೂ ತವಕ ಹೆಚ್ಚಾಗತೊಡಗಿದೆ. ಶನಿವಾರವಷ್ಟೇ ಈ ಬಹುಭಾಷೆಯ ಚಿತ್ರದ ಟ್ರೇಲರ್‌ ಗಳನ್ನು ಮುಂಬಯಿಯಲ್ಲಿ ಬಿಡುಗಡೆ ಮಾಡಲಾಯಿತು. ಬಿಡುಗಡೆಗೊಂಡ ಒಂದೇ ದಿನದಲ್ಲಿ ‘ಸಾಹೋ’ ಟ್ರೇಲರನ್ನು ಮೂರೂ ಕಾಲು ಲಕ್ಷ ಜನ ವೀಕ್ಷಿಸಿದ್ದಾರೆ.

ಸುಜಿತ್‌ ನಿರ್ದೇಶಿಸಿರುವ ಈ ಚಿತ್ರ ಬಾಹುಬಲಿಗಿಂತ ಭಿನ್ನ. ಅದನ್ನು ಸ್ವತಃ ಪ್ರಭಾಸ್ ಅವರೇ ಟ್ರೇಲರ್‌ ಬಿಡುಗಡೆ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ. ಬಾಹುಬಲಿಯ ಬಳಿಕ ಪ್ರಭಾಸ್ ಮತ್ತೆ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಮುಗಿಲು ಮುಟ್ಟಿದೆ. ಇಷ್ಟು ಮಾತ್ರವಲ್ಲದೇ ಈ ಚಿತ್ರ ಹಿಂದಿ, ಮಲಯಾಳಂ, ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಗೊಳ್ಳುತ್ತಿದೆ. ಒಟ್ಟೂ ಬಜೆಟ್‌ ಲೆಕ್ಕಾಚಾರ ಮಾಡಿದರೆ 300 ಕೋಟಿಯ ಆಸುಪಾಸು.

ನನಗೂ ಕುತೂಹಲ
‘ಬಾಹುಬಲಿಯಿಂದ ಹೊರಬರುವುದೆಂದರೆ ಬಹಳ ಕಷ್ಟ. ಅಂದುಕೊಂಡಷ್ಟು ಸುಲಭವಲ್ಲ. ಆದರೂ ಪ್ರಯತ್ನಿಸಿದ್ದೇನೆ. ಸುಜಿತ್‌ ಈ ಸಿನಿಮಾವನ್ನು ತಮ್ಮ ಚಿತ್ರಕಥೆಯಿಂದಲೇ ಕಟ್ಟಿಕೊಡುತ್ತಿದ್ದಾರೆ. ನಿಜಕ್ಕೂ ಇದು ಚಿತ್ರಕಥೆಯ ಮೇಲೆಯೇ ನಿಂತ ಸಿನಿಮಾ. ಹಲವು ತಿರುವುಗಳನ್ನು ಒಳಗೊಂಡಿರುವ ಕಥೆಯಿದು. ನನ್ನ ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ನನ್ನಲ್ಲೂ ಇದೆ. ಸಾಹೋ ಚಿತ್ರದಲ್ಲಿ ನನ್ನ ಪಾತ್ರವನ್ನು ಪ್ರೇಕ್ಷಕರು ಸ್ವೀಕರಿಸಬಹುದು ಎಂಬ ನಂಬಿಕೆಯಿದೆ’ ಎಂದವರು ಪ್ರಭಾಸ್‌.

ಬಾಹುಬಲಿಯೇ ಬೇರೆ, ಸಾಹೋವೇ ಬೇರೆ ಎರಡನ್ನೂ ಒಟ್ಟಿಗೆ ಇಟ್ಟು ಹೋಲಿಸಬೇಡಿ. ಬಾಹುಬಲಿ ಇತಿಹಾಸ ನಿರ್ಮಿಸಲೆಂದು ಮಾಡಿದ್ದು. ಸಾಹೋ ಸಂಪೂರ್ಣವಾಗಿ ಸಿನಿ ಪ್ರೇಕ್ಷಕರನ್ನು ಮತ್ತು ಅಭಿಮಾನಿಗಳನ್ನು ರಂಜಿಸಲು, ಖುಷಿಕೊಡಲು ಮಾಡಿದ್ದು ಎಂದು ಹೇಳಿದರು ಪ್ರಭಾಸ್.

ಸುಮಾರು ಎರಡು ವರ್ಷ ಈ ಚಿತ್ರದಲ್ಲಿ ಪ್ರಭಾಸ್ ತೊಡಗಿಸಿಕೊಂಡಿದ್ದಾರೆ. ಆಸ್ಟ್ರಿಯಾ, ದುಬಾಯಿ, ಹೈದರಾಬಾದ್‌, ಮುಂಬಯಿ, ಅಬುಧಾಬಿ ಮತ್ತಿತರ ಕಡೆ ಚಿತ್ರೀಕರಣ ನಡೆದಿದೆ. ಪ್ರಭಾಸ್ ಜತೆ ಶ್ರದ್ಧಾ ಕಪೂರ್‌, ಜಾಕಿಶ್ರಾಫ್, ನೀಲ್‌ ನಿತಿನ್ ಮುಕೇಶ್, ಚುಂಕಿಪಾಂಡೆ, ಪ್ರಕಾಶ್‌ ಬೆಳವಾಡಿ, ಅರುಣ್‌ ವಿಜಯ್‌, ಜಾಕ್ವೆಲಿನ್‌ ಫೆರ್ನಾಂಡಿಸ್‌ ಎಲ್ಲರೂ ನಟಿಸಿದ್ದಾರೆ.

ಆಗಸ್ಟ್‌ 30 ಕ್ಕೆ ಬಿಡುಗಡೆ
ಮೊದಲ ಲೆಕ್ಕಾಚಾರದಂತೆ ಆಗಸ್ಟ್‌ 15 ರಂದು ಈ ಚಿತ್ರ ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಅದೇ ದಿನ ಅಕ್ಷಯ್‌ ಕುಮಾರ್‌ ರ ‘ಮಿಶನ್‌ ಮಂಗಲ್’ ಹಾಗೂ ಜಾನ್‌ ಅಬ್ರಹಾಂರ ‘ಬಾಟ್ಲಾ ಹೌಸ್‌’ ಬಿಡುಗಡೆಯಾಗುತ್ತಿದೆ. ಇದರ ಮಧ್ಯೆ ತಮ್ಮ ಚಿತ್ರ ಬೇಡ ಎಂದು ‘ಸಾಹೋ’ ನಿರ್ಮಾಪಕರು ಆಗಸ್ಟ್‌ 30 ಕ್ಕೆ ದಿನಾಂಕ ನಿಗದಿಪಡಿಸಿದ್ದಾರೆ.

ಪ್ರಭಾಸ್‌ ಅಭಿಮಾನಿಗಳು ಬಾಹುಬಲಿ ಗುಂಗಿನಿಂದ ಹೊರಬಂದು ಈ ಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ಎಲ್ಲೆಡೆ ಇದೆ. ಹಾಗೆಯೇ ಪ್ರಭಾಸ್‌ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ.

– ಅಮೃತಾ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.