Tollywood: ‘ಸಲಾರ್ʼ ಕಂಟೆಂಟ್ ಲೀಕ್ ಮಾಡಿದ ಇಬ್ಬರ ಬಂಧನ; ಎಚ್ಚರಿಕೆ ಕೊಟ್ಟ ಚಿತ್ರತಂಡ
Team Udayavani, Nov 18, 2023, 1:08 PM IST
ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್ ಅವರ ʼಸಲಾರ್ʼ ಸಿನಿಮಾ ರಿಲೀಸ್ ಗೆ ಪ್ರೇಕ್ಷಕರು ಕಾಯುತ್ತಿದ್ದಾರೆ. ವರ್ಷದ ಕೊನೆಯಲ್ಲಿ ಬಹುದೊಡ್ಡ ಸಿನಿಮಾವೊಂದು ಬಿಗ್ ಹಿಟ್ ಕೊಡುವ ಸಾಧ್ಯತೆಯಿದೆ.
ಸಿನಿಮಾ ಸಟ್ಟೇರಿದ ದಿನದಿಂದ ಇಂದಿನವರೆಗೂ ಒಂದಲ್ಲ ಒಂದು ಕಾರಣದಿಂದ ಸುದ್ದಿಯಾಗುತ್ತಲೇ ಕುತೂಹಲವನ್ನು ಹೆಚ್ಚಿಸಿದೆ. ಇತ್ತೀಚೆಗೆ ಯಾವ ರಾಜ್ಯದಲ್ಲಿ ಯಾವ ಸಂಸ್ಥೆ ಸಿನಿಮಾ ವಿತರಣೆ ಮಾಡುತ್ತದೆ ಎನ್ನುವ ಅಪ್ಡೇಟ್ ನ್ನು ಚಿತ್ರತಂಡ ನೀಡಿತ್ತು. ಇದರೊಂದಿಗೆ ಬಹು ನಿರೀಕ್ಷಿತ ಟ್ರೇಲರ್ ಯಾವಾಗ ರಿಲೀಸ್ ಎನ್ನುವ ದಿನಾಂಕವನ್ನು ರಿವೀಲ್ ಮಾಡಿತ್ತು.
ʼಸಲಾರ್ʼ ಸಟ್ಟೇರಿದ ದಿನದಿಂದ ಚಿತ್ರತಂಡ ಸಿನಿಮಾದ ಚಿತ್ರೀಕರಣದ ಫೋಟೋ, ವಿಡಿಯೋ ಯಾವುದನ್ನು ಲೀಕ್ ಆಗದಂತೆ ನೋಡಿಕೊಂಡಿದೆ. ಆದರೆ ಸಿನಿಮಾದ ಕಂಟೆಂಟ್ ನ್ನು ಲೀಕ್ ಮಾಡಿದ್ದಕ್ಕಾಗಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ: Tiger 3: ವೇದಿಕೆಯಲ್ಲೇ ಇಮ್ರಾನ್ ಹಶ್ಮಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್.!
ಟಾಲಿವುಡ್ ಸಿನಿರಂಗದ ಪಿಆರ್ ಒ ಆಗಿರುವ ವಂಶಿ ಶೇಖರ್ ಅವರು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ʼಸಲಾರ್ʼ ಸಿನಿಮಾದ ಕಂಟೆಂಟ್ ಲೀಕ್ ಮಾಡಿದ್ದಕ್ಕಾಗಿ ಇಬ್ಬರನ್ನು ಹೈದರಾಬಾದ್ ಸೈಬರ್ ಪೊಲೀಸರು ಬಂಧಿಸಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.
ಸಿನಿಮಾದ ಕುರಿತಾದ ಅನಧಿಕೃತ ವಿಷಯವನ್ನು ಪ್ರಚಾರ ಮಾಡುವವರ ವಿರುದ್ಧವೂ ಇದೇ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರತಂಡ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.
ಡಿ.1 ರ ಸಂಜೆ ʼಸಲಾರ್ʼ ಟ್ರೇಲರ್ ರಿಲೀಸ್ ಆಗಲಿದೆ. ಡಿ.22 ರಂದು 5000 ಕ್ಕೂ ಹೆಚ್ಚಿನ ಸ್ಕ್ರೀನ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.
ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಬ್ರಹ್ಮಾಜಿ, ತಿನ್ನು ಆನಂದ್, ಜಗಪತಿ ಬಾಬು, ಈಶ್ವರಿ ರಾವ್ ಮತ್ತು ಇನ್ನೂ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.
Two individuals have been caught by Cybercrime Police for spreading unauthorised content of #Salaar on social media platforms.
Word of Caution: 🚫 Strict action will be taken against those involved in unauthorised leaks related to @SalaarTheSaga.
— 𝐕𝐚𝐦𝐬𝐢𝐒𝐡𝐞𝐤𝐚𝐫 (@UrsVamsiShekar) November 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!