ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಶಾಂತ್ ನೀಲ್: ʼSalaarʼ ನಿಂದ ಬಂತು ಸ್ಪೆಷೆಲ್ ಗಿಫ್ಟ್
Team Udayavani, Jun 4, 2023, 12:49 PM IST
ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗಿಂದು 43ನೇ ಹುಟ್ಟುಹಬ್ಬದ ಸಂಭ್ರಮ. ಹಿಟ್ ನಿರ್ದೇಶಕನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ʼಉಗ್ರಂʼ ನಿಂದ ಅಂಡರ್ ವರ್ಲ್ಡ್ ಲೋಕದ ಕಥೆಯನ್ನು ಹೇಳಿ ಆ ಬಳಿಕ ʼಕೆಜಿಎಫ್ʼ ಮೂಲಕ ಚಿನ್ನದ ಗಣಿಯ ಕಹಾನಿಯನ್ನು ಹೇಳಿ ಇಡೀ ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ಪ್ರಶಾಂತ್ ನೀಲ್, ಇದೀಗ ಮತ್ತೊಂದು ಬಿಗ್ ಬಜೆಟ್ ಮೂವಿಯಲ್ಲಿ ಬ್ಯುಸಿಯಾಗಿದ್ದಾರೆ.
ಡಾರ್ಲಿಂಗ್ ಪ್ರಭಾಸ್ ಅವರ ʼಸಲಾರ್ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು, ಚಿತ್ರತಂಡ ತನ್ನ ನಿರ್ದೇಶಕನ ಹುಟ್ಟುಹಬ್ಬಕ್ಕೆ ಸ್ಪೆಷೆಲ್ ವಿಡಿಯೋ ಮೂಲಕ ವಿಶ್ ಮಾಡಿದೆ. ಶೂಟಿಂಗ್ ಸಮಯದಲ್ಲಿ ಪ್ರಶಾಂತ್ ನೀಲ್ ಅವರ ಶಿಸ್ತು, ಸಂಯಮ ಮತ್ತು ಶೂಟಿಂಗ್ ನ ಬಿಡುವಿನ ವೇಳೆಯ ನಗುವಿನ ಮುಖಭಾವವನ್ನು, ತಂಡದೊಂದಿಗೆ ಕ್ರಿಕೆಟ್ ಆಡಿದ ಕ್ಷಣವನ್ನು ವಿಡಿಯೋದಲ್ಲಿ ತೋರಿಸಲಾಗಿದೆ.
ಇದನ್ನೂ ಓದಿ: Dr BR Ambedkar ಜಯಂತಿ ಆಚರಿಸಿದ ದಲಿತ ಯುವಕನ ದಾರುಣ ಹತ್ಯೆ: ಏಳು ಮಂದಿ ಆರೋಪಿಗಳ ಬಂಧನ
ಇನ್ನು ʼಸಲಾರ್ʼ ತಂಡದೊಂದಿಗೆ ಪ್ರಶಾಂತ್ ನೀಲ್ ಅವರು ತಮ್ಮ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಬರ್ತ್ ಡೇ ಆಚರಿಸಿದ್ದಾರೆ. ಈ ಸಂಭ್ರಮದಲ್ಲಿ ಪ್ರಭಾಸ್, ನಿರ್ಮಾಪಕ ವಿಜಯ್ ಕಿರಗಂದೂರು ಅವರು ಭಾಗಿಯಾಗಿದ್ದಾರೆ.
ಕನ್ನಡ ಬಿಟ್ಟು ಮೊದಲ ಬಾರಿ ತೆಲುಗು ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ , ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಶ್ರೀಯಾ ರೆಡ್ಡಿ, ಈಶ್ವರಿ ರಾವ್, ಮಧು ಗುರುಸ್ವಾಮಿ ಮತ್ತು ಜಗಪತಿ ಬಾಬು ಮುಂತಾದವರು ʼಸಲಾರ್ʼ ನಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಿದ್ದಾರೆ. ಸೆ. 28 ರಂದು ಸಿನಿಮಾ ತೆರೆಗೆ ಬರಲಿದೆ.
ಇದಾದ ಬಳಿಕ ಪ್ರಶಾಂತ್ ನೀಲ್ ಜೂ.ಎನ್ ಟಿಆರ್ ಅವರೊಂದಿಗೆ ಸಿನಿಮಾ ಮಾಡಲಿದ್ದು, ಈ ಸಿನಿಮಾವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿದೆ.
Warmest birthday wishes to the incredibly talented director #PrashanthNeel.
From the sets of @Salaarthesaga: https://t.co/ngbTEv593L#HBDPrashanthNeel #Prabhas #Salaar pic.twitter.com/XIQEiF5RkS
— Salaar (@SalaarTheSaga) June 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ