ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಶಾಂತ್ ನೀಲ್: ʼSalaarʼ ನಿಂದ ಬಂತು ಸ್ಪೆಷೆಲ್ ಗಿಫ್ಟ್
Team Udayavani, Jun 4, 2023, 12:49 PM IST
ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗಿಂದು 43ನೇ ಹುಟ್ಟುಹಬ್ಬದ ಸಂಭ್ರಮ. ಹಿಟ್ ನಿರ್ದೇಶಕನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ʼಉಗ್ರಂʼ ನಿಂದ ಅಂಡರ್ ವರ್ಲ್ಡ್ ಲೋಕದ ಕಥೆಯನ್ನು ಹೇಳಿ ಆ ಬಳಿಕ ʼಕೆಜಿಎಫ್ʼ ಮೂಲಕ ಚಿನ್ನದ ಗಣಿಯ ಕಹಾನಿಯನ್ನು ಹೇಳಿ ಇಡೀ ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ಪ್ರಶಾಂತ್ ನೀಲ್, ಇದೀಗ ಮತ್ತೊಂದು ಬಿಗ್ ಬಜೆಟ್ ಮೂವಿಯಲ್ಲಿ ಬ್ಯುಸಿಯಾಗಿದ್ದಾರೆ.
ಡಾರ್ಲಿಂಗ್ ಪ್ರಭಾಸ್ ಅವರ ʼಸಲಾರ್ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು, ಚಿತ್ರತಂಡ ತನ್ನ ನಿರ್ದೇಶಕನ ಹುಟ್ಟುಹಬ್ಬಕ್ಕೆ ಸ್ಪೆಷೆಲ್ ವಿಡಿಯೋ ಮೂಲಕ ವಿಶ್ ಮಾಡಿದೆ. ಶೂಟಿಂಗ್ ಸಮಯದಲ್ಲಿ ಪ್ರಶಾಂತ್ ನೀಲ್ ಅವರ ಶಿಸ್ತು, ಸಂಯಮ ಮತ್ತು ಶೂಟಿಂಗ್ ನ ಬಿಡುವಿನ ವೇಳೆಯ ನಗುವಿನ ಮುಖಭಾವವನ್ನು, ತಂಡದೊಂದಿಗೆ ಕ್ರಿಕೆಟ್ ಆಡಿದ ಕ್ಷಣವನ್ನು ವಿಡಿಯೋದಲ್ಲಿ ತೋರಿಸಲಾಗಿದೆ.
ಇದನ್ನೂ ಓದಿ: Dr BR Ambedkar ಜಯಂತಿ ಆಚರಿಸಿದ ದಲಿತ ಯುವಕನ ದಾರುಣ ಹತ್ಯೆ: ಏಳು ಮಂದಿ ಆರೋಪಿಗಳ ಬಂಧನ
ಇನ್ನು ʼಸಲಾರ್ʼ ತಂಡದೊಂದಿಗೆ ಪ್ರಶಾಂತ್ ನೀಲ್ ಅವರು ತಮ್ಮ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಬರ್ತ್ ಡೇ ಆಚರಿಸಿದ್ದಾರೆ. ಈ ಸಂಭ್ರಮದಲ್ಲಿ ಪ್ರಭಾಸ್, ನಿರ್ಮಾಪಕ ವಿಜಯ್ ಕಿರಗಂದೂರು ಅವರು ಭಾಗಿಯಾಗಿದ್ದಾರೆ.
ಕನ್ನಡ ಬಿಟ್ಟು ಮೊದಲ ಬಾರಿ ತೆಲುಗು ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್ , ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಶ್ರೀಯಾ ರೆಡ್ಡಿ, ಈಶ್ವರಿ ರಾವ್, ಮಧು ಗುರುಸ್ವಾಮಿ ಮತ್ತು ಜಗಪತಿ ಬಾಬು ಮುಂತಾದವರು ʼಸಲಾರ್ʼ ನಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಿದ್ದಾರೆ. ಸೆ. 28 ರಂದು ಸಿನಿಮಾ ತೆರೆಗೆ ಬರಲಿದೆ.
ಇದಾದ ಬಳಿಕ ಪ್ರಶಾಂತ್ ನೀಲ್ ಜೂ.ಎನ್ ಟಿಆರ್ ಅವರೊಂದಿಗೆ ಸಿನಿಮಾ ಮಾಡಲಿದ್ದು, ಈ ಸಿನಿಮಾವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿದೆ.
Warmest birthday wishes to the incredibly talented director #PrashanthNeel.
From the sets of @Salaarthesaga: https://t.co/ngbTEv593L#HBDPrashanthNeel #Prabhas #Salaar pic.twitter.com/XIQEiF5RkS
— Salaar (@SalaarTheSaga) June 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ