Salaar: ಸೆ.28 ಕ್ಕೆ ರಿಲೀಸ್ ಆಗಲ್ಲ ʼಸಲಾರ್ʼ: ಶೀಘ್ರ ಹೊಸ ಡೇಟ್ ಅನೌನ್ಸ್ ಎಂದ ಹೊಂಬಾಳೆ
Team Udayavani, Sep 13, 2023, 9:59 AM IST
ಬೆಂಗಳೂರು: ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ʼಸಲಾರ್ʼ ಅಂದುಕೊಂಡಂತೆ ಆಗಿದ್ದರೆ ಇದೇ ಸೆ.28 ರಂದು ರಿಲೀಸ್ ಆಗಬೇಕಿತ್ತು. ಆದರೆ ರಿಲೀಸ್ ಡೇಟ್ ಮುಂದೂಡಿಕೆ ಬಗ್ಗೆ ಕಳೆದ ಕೆಲ ದಿನಗಳಿಂದ ಸುದ್ದಿ ಹಬ್ಬಿತ್ತು. ಇದೀಗ ಈ ಕುರಿತು ಹೊಂಬಾಳೆ ಫಿಲ್ಮ್ಸ್ಬುಧವಾರ (ಸೆ.13 ರಂದು) ಅಧಿಕೃತವಾಗಿ ಟ್ವೀಟ್ ಮಾಡಿ ಹೇಳಿದೆ.
ಪ್ರಶಾಂತ್ ನೀಲ್ ನಿರ್ದೇಶನದ ʼಸಲಾರ್ʼ ಅನೌನ್ಸ್ ಆದ ದಿನದಿಂದಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಟೀಸರ್ ಬಿಗ್ ಹಿಟ್ ಆಗಿದೆ. ಪ್ರಭಾಸ್ ವೃತ್ತಿ ಜೀವನದಲ್ಲಿ ಮತ್ತೊಂದು ಬಹು ನಿರೀಕ್ಷಿತ ಸಿನಮಾವಾಗಿರುವ ʼಸಲಾರ್ʼ ರಿಲೀಸ್ ಗೆ ಹತ್ತಿರವಾಗುತ್ತಿದ್ದಂತೆ ಮುಂದೂಡಿಕೆ ಆಗಿರುವುದು ಅವರ ಅಭಿಮಾನಿಗಳಿಗೆ ನಿರಾಶಯನ್ನುಂಟು ಮಾಡಿದೆ.
ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ. ʼಸಲಾರ್ʼ ಸಿನಿಮಾಕ್ಕೆ ನೀವು ನೀಡುತ್ತಿರುವ ಬೆಂಬಲವನ್ನು ನಾವು ಶ್ಲಾಘಿಸುತ್ತೇವೆ. ಅನಿವಾರ್ಯ ಕಾರಣಗಳಿಂದಾಗಿ ಸಾವು ʼಸಲಾರ್ʼ ಸಿನಿಮಾವನ್ನು ಸೆ.28 ಕ್ಕೆ ರಿಲೀಸ್ ಮಾಡಲು ಆಗುತ್ತಿಲ್ಲ. ನಿಮ್ಮ ನಿರೀಕ್ಷೆಗೆ ತಕ್ಕ ಸಿನಿಮಾವನ್ನು ನಾವು ನೀಡಲು ಸಿದ್ದರಿದ್ದೇವೆ. ನಮ್ಮ ಈ ನಿರ್ಧಾರವನ್ನು ನೀವು ಗೌರವಿಸಿ, ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸುತ್ತೇವೆ. ಸಿನಿಮಾವನ್ನು ಅತ್ಯುತ್ತಮ ರೀತಿಯಲ್ಲಿ ತೆರೆಗೆ ತರಲು ನಮ್ಮ ತಂಡ ಪ್ರಯತ್ನಿಸುತ್ತಿದೆ. ಹೊಸ ರಿಲೀಸ್ ಡೇಟ್ ಶೀಘ್ರದಲ್ಲಿ ಹೇಳಲಾಗುವುದೆಂದು ಹೊಂಬಾಳೆ ಟ್ವೀಟ್ ಮಾಡಿದೆ.
ʼಸಲಾರ್ʼ ಸಿನಿಮಾ ದೀಪಾವಳಿ ಹಬ್ಬಕಕ್ಕೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಬೇಕಿದೆ.
ʼಸಲಾರ್ʼ ನಲ್ಲಿ ಪೃಥ್ವಿರಾಜ್ ಸುಕುಮಾರನ್ ಶ್ರುತಿ ಹಾಸನ್, ಜಗಪತಿ ಬಾಬು, ತಿನ್ನು ಆನಂದ್ ಮತ್ತು ಶ್ರೀಯಾ ರೆಡ್ಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
We deeply appreciate your unwavering support for #Salaar. With consideration, we must delay the original September 28 release due to unforeseen circumstances.
Please understand this decision is made with care, as we’re committed to delivering an exceptional cinematic experience.… pic.twitter.com/LPf5N2roh7— Salaar (@SalaarTheSaga) September 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ