ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ
Team Udayavani, Oct 19, 2021, 8:11 AM IST
ಇತ್ತೀಚೆಗಷ್ಟೇ ತೆರೆಕಂಡಿರುವ ನಟ ದುನಿಯಾ ವಿಜಯ್ ಅಭಿನಯದ ಮತ್ತು ನಿರ್ದೇಶನದ ಚೊಚ್ಚಲ ಚಿತ್ರ “ಸಲಗ’ ಭರ್ಜರಿಯಾಗಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ “ಸಲಗ’ ಚಿತ್ರ ಶೀಘ್ರದಲ್ಲಿಯೇ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾ ಸೇರಿದಂತೆ, ಅಲ್ಲಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಮಾತನಾಡಿರುವ ನಟ ಕಂ ನಿರ್ದೇಶಕ ದುನಿಯಾ ವಿಜಯ್ ಓಟಿಟಿಯಲ್ಲಿ “ಸಲಗ’ ಬಿಡುಗಡೆಯಾಗಲಿದೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ದುನಿಯಾ ವಿಜಯ್, “”ಸಲಗ ಸಿನಿಮಾಕ್ಕೆ ದೊಡ್ಡಮಟ್ಟದ ಯಶಸ್ಸು ಪ್ರೇಕ್ಷಕರಿಂದ ಸಿಕ್ಕಿದೆ. ನಮ್ಮ ಪ್ರೇಕ್ಷಕರ ಈ ಪ್ರೀತಿ-ಬೆಂಬಲಕ್ಕೆ ಇಡೀ ತಂಡ ಚಿರಋಣಿ ಆಗಿರುತ್ತೇವೆ.
ಆದರೆ, ಈ ಸಿನಿಮಾ ಓಟಿಟಿಯಲ್ಲಿ ಬರುತ್ತದೆ ಎಂಬ ವಿಚಾರವೊಂದು ಎಲ್ಲ ಕಡೆ ಓಡಾಡುತ್ತಿದೆ. ನಮ್ಮ ಯಶಸ್ಸನ್ನು ಸಹಿಸೋಕೆ ಆಗದವರು ಯಾರೋ ಕೆಲವರು, ಈ ರೀತಿ ನಮ್ಮ ಸಿನಿಮಾ ಓಟಿಟಿಯಲ್ಲಿ ಬರುತ್ತೆ ಅಂತ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹೇಗಾದರೂ ಸರಿ, ನಮ್ಮ ಸಿನಿಮಾಕ್ಕೆ ಡ್ಯಾಮೇಜ್ ಮಾಡೋಣ ಅಂತ ಏನೇನೋ ಮಾಡ್ತಾ ಇದ್ದಾರೆ.
ಹಾಗಾಗಿ, ಇದು ಓಟಿಟಿಯಲ್ಲಿ ಬರುತ್ತೆ ಅಂತ ಸುದ್ದಿ ಹಬ್ಬಿಸುತ್ತಿದ್ದಾರೆ. ಆದ್ರೆ ಓಟಿಟಿಯಲ್ಲಿ ಈ ಸಿನಿಮಾ ಬರಲ್ಲ. ಇದು ಥಿಯೇಟರ್ನಲ್ಲೇ ಇರುತ್ತದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿಯೇ ಜನರು ನೋಡಬೇಕು ಎಂದು ನಾವು ಎರಡು ವರ್ಷಗಳಿಂದ ಕಾದಿದ್ದೆವು. ಆಗಲೇ ನಮಗೆ ಓಟಿಟಿ ಆಫರ್ ಬಂದಿತ್ತು.
ಆದರೂ ನಾವೂ ಕೊಟ್ಟಿರಲಿಲ್ಲ. ಸಿನಿಮಾ ಪ್ರೇಮಿಗಳು “ಸಲಗ’ ಓಟಿಟಿಗೆ ಬರುತ್ತದೆ ಎಂದುಕೊಂಡು ಚಿತ್ರವನ್ನು ಮಿಸ್ ಮಾಡಿಕೊಳ್ಳಬೇಡಿ. ಚಿತ್ರಮಂದಿರಕ್ಕೆ ಬಂದು ನೋಡಿ. ಇಂತಹ ಸುಳ್ಳು ಸುದ್ದಿ ಹಬ್ಬಿಸುವವರು ಇದ್ದೇ ಇರುತ್ತಾರೆ. ಅವರ ಬಗ್ಗೆ ನಾವು ಕೇರ್ ಮಾಡುವುದಿಲ್ಲ’ ಎಂದಿದ್ದಾರೆ. ಒಟ್ಟಾರೆ “ಸಲಗ’ ಓಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂಬ ಊಹಾಪೋಹ ಸುದ್ದಿಗಳಿಗೆ ದುನಿಯಾ ವಿಜಯ್ ತಮ್ಮ ವಿಡಿಯೋ ಮೂಲಕ ಫುಲ್ ಸ್ಟಾಪ್ ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !