ಕೋವಿಡ್ ಸಂಕಷ್ಟ : ಬಡ ರೋಗಿಗಳ ನೆರವಿಗೆ ನಿಂತ ನಟ ಸಲ್ಮಾನ್ ಖಾನ್
Team Udayavani, May 22, 2021, 8:30 PM IST
ಬಾಲಿವುಡ್ ಭಾಯ್ ಜಾನ್ ಸಲ್ಮಾನ್ ಖಾನ್ ಕೋವಿಡ್ ರೋಗಿಗಳ ಪಾಲಿಗೆ ಆಪತ್ಬಾಂಧವ ಆಗಿದ್ದಾರೆ. ಬಡರೋಗಿಗಳ ಚಿಕಿತ್ಸೆಗಾಗಿ 500 ಆಮ್ಲಜನಕದ ಸಾಂದ್ರಕಗಳನ್ನು ನೀಡಿದ್ದಾರೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆ ಶುರುವಾದಾಗಿನಿಂದ ಪರೋಪಕಾರಿ ಕೆಲಸ ಮಾಡುತ್ತಿರುವ ಸಲ್ಲು ಭಾಯ್, ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರಿಗಾಗಿ ಅನ್ನ ದಾಸೋಹ ಮಾಡುತ್ತಿದ್ದಾರೆ. ನಿತ್ಯ 5000 ಕ್ಕೂ ಹೆಚ್ಚು ಜನರ ಹಸಿವು ನೀಗಿಸುತ್ತಿದ್ದಾರೆ. ಇದೀಗ ಕೋವಿಡ್ ರೋಗದಿಂದ ಬಳಲುತ್ತಿರುವ ಬಡವರ ಚಿಕಿತ್ಸೆಗೆ ನೆರವಾಗಿದ್ದಾರೆ.
ಶಾಸಕ ಬಾಬಾ ಸಿದ್ದಿಕ್ ಹಾಗೂ ಅವರ ಮಗ ಜೀಶಾನ್ ಸಿದ್ದಿಕ್ ಜೊತೆ ಸೇರಿ 500 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ. ಬುಧವಾರ ಇವು ಮುಂಬೈ ತಲುಪಿವೆ . ಈ ಎಲ್ಲಾ ಆಕ್ಸಿಜನ್ ಸಾಂದ್ರಕಗಳನ್ನು ಪೋಲ್ಯಾಂಡ್, ದುಬೈ, ಯುಕೆಯಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಮೊದಲು ತೀರಾ ಅವಶ್ಯಕತೆ ಇರುವ ಮುಂಬೈನ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ತಲುಪಿಸುತ್ತೇವೆ. ಜೊತೆಗೆ ಮಹಾರಾಷ್ಟ್ರದ ವಿವಿಧ ಭಾಗಗಳಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಜೊತೆಗೆ ಅಕಸ್ಮಾತ್ ಇನ್ನಿತರ ರಾಜ್ಯಗಳಾದ ಗೋವಾ, ಬಿಹಾರ ರಾಜ್ಯಗಳಿಗೆ ಆಕ್ಸಿಜನ್ ಅವಶ್ಯಕತೆ ಇದ್ದರೆ ಯಾವುದೇ ಹಣವಿಲ್ಲದೇ ಉಚಿತವಾಗಿ ಕಳುಹಿಸಿಕೊಡುತ್ತೇವೆ ಎಂದು ಎಂದು ಬಾಬಾ ಸಿದ್ದಿಕ್ ಮಾಹಿತಿ ನೀಡಿದ್ದಾರೆ.
ಆಮ್ಲಜನಕ ಸಾಂದ್ರಕಗಳ ಬಗ್ಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಸಲ್ಮಾನ್ ಅವರು ಅವಶ್ಯಕತೆ ಇದ್ದವರು ಈ ಮೊಬೈಲ್ ನಂಬರ್ಗೆ 8451869785 ಸಂಪರ್ಕಿಸಲು ತಿಳಿಸಿದ್ದು, ಉಚಿತವಾಗಿ ನೀಡಲಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಸಾಂದ್ರಕಗಳನ್ನು ತರಿಸಿರುವ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ