ಸುದೀಪ್‌ಗೆ ಬಿಎಂಡಬ್ಲು ಕಾರ್‌ ಗಿಫ್ಟ್ ಕೊಟ್ಟ ಸಲ್ಲು


Team Udayavani, Jan 8, 2020, 10:07 AM IST

CINEMA-TDY-1

“ನೀವು ಒಳ್ಳೆಯದು ಮಾಡಿದರೆ ನಿಮಗೆ ಖಂಡಿತ ಒಳ್ಳೆಯದೇ ಆಗುತ್ತೆ…’ – ಇದು ಸುದೀಪ್‌ ಹೇಳಿಕೊಂಡಿರುವ ಮಾತು. ಹೌದು, ಸುದೀಪ್‌ ಹೀಗೆ ಹೇಳ್ಳೋಕೆ ಕಾರಣ, ಸಲ್ಮಾನ್‌ಖಾನ್‌ ಅವರು ಸುದೀಪ್‌ ಅವರ ಮನೆಗೆ ಸರ್‌ಪ್ರೈಸ್‌ ಗಿಫ್ಟ್ನೊಂದಿಗೆ ಬಂದಿದ್ದು. ಅಂದಹಾಗೆ, ಆ ಸರ್‌ಪ್ರೈಸ್‌ ಗಿಫ್ಟ್ ಬೇರೇನೂ ಅಲ್ಲ, ಬೆಲೆ ಬಾಳುವ ಬಿಎಂಡಬ್ಲ್ಯು ಕಾರು. ಈ ಕುರಿತು ಸ್ವತಃ ಸುದೀಪ್‌ ಟ್ವೀಟ್‌ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದು, ಅವರ ಟ್ವೀಟ್‌ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

“ದಬಾಂಗ್‌ 3′ ಚಿತ್ರದಲ್ಲಿ ಸುದೀಪ್‌ ಅವರು ಸಲ್ಮಾನ್‌ಖಾನ್‌ ಜೊತೆ ನಟಿಸಿದ್ದರು. ಸಲ್ಮಾನ್‌ ಖಾನ್‌ ಅವರು ಸುದೀಪ್‌ ನನ್ನ ಸಹೋದರ ಇದ್ದಂತೆ ಎಂದು ಸಲ್ಮಾನ್‌ಖಾನ್‌ ಕೂಡ ಹೇಳಿಕೊಂಡಿದ್ದರು. ಅವರ ಸ್ನೇಹ ಕೂಡ ಅಷ್ಟೇ ಗಟ್ಟಿಯಾಗಿದೆ. ಚಿತ್ರ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡದಿದ್ದರೂ, ಸುದೀಪ್‌ ಹಾಗು ಸಲ್ಲು ಸ್ನೇಹ ಜೋರಾದ ಸದ್ದು ಮಾಡುತ್ತಿದೆ ಎನ್ನುವುದಕ್ಕೆ ಸುದೀಪ್‌ ಅವರಿಗೆ ಸಲ್ಲು ಗಿಫ್ಟ್ ಮಾಡಿದ ಬಿಎಂಡಬ್ಲ್ಯು ಕಾರು ಸಾಕ್ಷಿ. ಸುದೀಪ್‌ ಮನೆಗೆ ಸಲ್ಲು ತಮ್ಮ ಸಹೋದರರಾದ ಅರ್ಬಾಜ್‌ ಖಾನ್‌ ಹಾಗು ಸೊಹೈಲ್‌ ಖಾನ್‌ ಜೊತೆ ಆಗಮಿಸಿ ಬಿಎಂಡಬ್ಲ್ಯು ಕಾರನ್ನು ಗಿಫ್ಟ್ ಮಾಡಿದ್ದಾರೆ. ಮೂವರು ಸಹೋದರರು ಸುದೀಪ್‌ ಜೊತೆ ಕುಳಿತಿರುವ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ಬಗ್ಗೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಸುದೀಪ್‌, “ನೀವು ಒಳ್ಳೆಯದು ಮಾಡಿದರೆ ನಿಮಗೆ ಖಂಡಿತ ಒಳ್ಳೆಯದೆ ಆಗುತ್ತೆ. ನಟ ಸಲ್ಮಾನ್‌ ಖಾನ್‌ ಬಿಎಂಡಬ್ಲ್ಯು ಜೊತೆಗೆ ಮನೆಗೆ ಬಂದಿರುವುದು ಈ ಸಾಲನ್ನು ಮತ್ತಷ್ಟು ನಂಬುವಂತೆ ಮಾಡಿದ್ದಾರೆ. ನನ್ನ ಮತ್ತು ನನ್ನ ಕುಟುಂಬದ ಮೇಲೆ ಪ್ರೀತಿ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಸರ್‌. ನಿಮ್ಮ ಜೊತೆ ಕೆಲಸ ಮಾಡಿರುವುದು ನನ್ನ ಭಾಗ್ಯ’ ಎಂದು ಬರೆದುಕೊಂಡಿದ್ದಾರೆ ಸುದೀಪ್‌. ಈ ಹಿಂದೆ “ದಬಾಂಗ್‌ 3′ ಚಿತ್ರೀಕರಣ ಸಂದರ್ಭದಲ್ಲೂ ಸಲ್ಮಾನ್‌ಖಾನ್‌ ಅವರು ಸುದೀಪ್‌ಗೆ ಒಂದಷ್ಟು ಟೀ ಶರ್ಟ್‌ ಗಿಫ್ಟ್ ಕೊಟ್ಟಿದ್ದರು. ಇತ್ತೀಚೆಗೆ ಸಲ್ಮಾನ್‌ಗೆ ಇಷ್ಟವಾದ ಜಾಕೆಟ್‌ ಕೂಡ ಸುದೀಪ್‌ ಅವರಿಗೆ ಉಡುಗೊರೆಯಾಗಿಯೇ ನೀಡಿದ್ದರು. ಆ ಜಾಕೆಟ್‌ನಲ್ಲಿ ಸಲ್ಲುಗೆ ಇಷ್ಟವಾದ ಶ್ವಾನದ ಫೋಟೋ ಇದ್ದದ್ದು ವಿಶೇಷ. ಅದನ್ನು ಸುದೀಪ್‌ ಸಾಮಾಜಿಕ ತಾಣದಲ್ಲಿ ಶೇರ್‌ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.