ಕೆಜಿಎಫ್-2 ಶೂಟಿಂಗ್ ಸೆಟ್ ಗೆ ‘ಅಧೀರನ’ ಎಂಟ್ರಿ: ಪ್ರಶಾಂತ್ ನೀಲ್ ಹೇಳಿದ್ದೇನು ?
Team Udayavani, Nov 29, 2020, 1:40 PM IST
ಹೈದರಾಬಾದ್: ಇತ್ತೀಚಿಗಷ್ಟೇ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ಹೋರಾಡಿ ವಿಜಯ ಸಾಧಿಸಿರುವ ಬಾಲಿವುಡ್ ಖ್ಯಾತ ನಟ ಸಂಜಯ್ ದತ್, ಇದೀಗ ಕನ್ನಡದ ಬಹುನೀರೀಕ್ಷಿತ ಸಿನಿಮಾ ಕೆ.ಜಿ.ಎಫ್- 2 ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್ ಗೆ ಬಂದಿಳಿದಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿಬಂದ ಕೆ.ಜಿ.ಎಫ್ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನೇ ಎಬ್ಬಿಸಿತ್ತು. ಇದೀಗ ಕೆ.ಜಿ.ಎಫ್-2 ಚಿತ್ರೀಕರಣ ಕೂಡಾ ಬಹುಪಾಲು ಮುಗಿದಿದ್ದು, ಈ ಚಿತ್ರದಲ್ಲಿ ನಟ ಯಶ್ ಗೆ ಎದುರಾಳಿಯಾಗಿ ಸಂಜಯ್ ದತ್ ಅಧೀರನ ಪಾತ್ರದಲ್ಲಿ ಮಿಂಚಲಿದ್ದಾರೆ.
ಇದನ್ನೂ ಓದಿ:2024ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ
ಸಂಜಯ್ ದತ್ ಪಾತ್ರಕ್ಕೆ ಸಂಬಂಧಿಸಿದಂತೆ ಬಹುಪಾಲು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಕೇವಲ ಹತ್ತು ದಿನಗಳ ಶೂಟಿಂಗ್ ಮಾತ್ರ ಬಾಕಿ ಇದೆ. ಮುಂದಿನ ಸೋಮವಾರ (ನವೆಂಬರ್ -30) ದಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ.
ಸಂಜಯ್ ದತ್ ಅವರ ಪಾತ್ರವು ‘ವೈಕಿಂಗ್ಸ್ ಸೀರೀಸ್’ ನ ಭಯಾನಕ ಪಾತ್ರಗಳಿಂದ ಪ್ರೇರಿತವಾಗಿದೆ ಎಂದು ನಿರ್ದೇಶಕ ಪ್ರಶಾಂತ್ ನೀಲ್ ತಿಳಿಸಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿಯೇ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳಬೇಕಾಗಿತ್ತು. ಆದರೇ ಕೋವಿಡ್ ಕಾರಣದಿಂದ ಚಿತ್ರೀಕರಣ ವಿಳಂಬವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್