ಗುಡ್ ನ್ಯೂಸ್: ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕೆಜಿಎಫ್-2 ಅಧೀರ “ಸಂಜಯ್ ದತ್”
ಈ ಖುಷಿಯ ವಿಚಾರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.
Team Udayavani, Oct 21, 2020, 6:24 PM IST
ಮುಂಬೈ: ಕಳೆದ ಎರಡು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಬಾಲಿವುಡ್ ನಟ, ಕೆಜಿಎಫ್ 2 ಚಾಪ್ಟರ್ ನ ಅಧೀರ ಪಾತ್ರಧಾರಿ ಸಂಜಯ್ ದತ್ ಬುಧವಾರ (ಅಕ್ಟೋಬರ್ 21, 2020)ಸಾಮಾಜಿಕ ಜಾಲತಾಣದಲ್ಲಿ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದು, ತಾನು ಆರೋಗ್ಯವಂತನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿಯೇ ತನಗೆ ದೇವರು ಆರೋಗ್ಯ ಕರುಣಿಸಿದ್ದಾನೆ ಎಂದು ದತ್ ಪ್ರತಿಕ್ರಿಯೆ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಈ ಖುಷಿಯ ವಿಚಾರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.
“ ಕಳೆದ ಕೆಲವು ವಾರಗಳು ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾ ಕಠಿಣ ದಿನಗಳಾಗಿದ್ದವು. ಆದರೆ ದೇವರು ನನಗೆ ಕಠಿಣ ಹೋರಾಟದ ಸವಾಲನ್ನು ಒಡ್ಡಿದ್ದು, ಇಂದು ನಾನು ಅದನ್ನು ಜಯಿಸಿದ್ದೇನೆ. ಅದು ನನ್ನ ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ. ನಾನು ಗುಣಮುಖನಾಗಿರುವುದೇ ಮಕ್ಕಳಿಗೆ ನೀಡಿರುವ ಉತ್ತಮ ಕೊಡುಗೆಯಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಾಕಿಸ್ತಾನದಲ್ಲಿ ಗೆಲ್ಲಬೇಕಷ್ಟೆ!ಕೈ ಮುಖಂಡರಿಗೆ ಮತ್ತೆ ಸಿಎಂ ಹುದ್ದೆ ಕನಸು
ಇದು ಸಾಧ್ಯವಾಗಿದ್ದು ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ. ನಾನು ನನ್ನ ಕುಟುಂಬಕ್ಕೆ, ಗೆಳೆಯರಿಗೆ ಮತ್ತು ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಅಪರಿಮಿತವಾದ ಪ್ರೀತಿ ಮತ್ತು ಅಭಿಮಾನಕ್ಕೆ ಅಭಾರಿಯಾಗಿದ್ದಾನೆ.
ನಾನು ಮುಖ್ಯವಾಗಿ ಕೋಕಿಲಾಬೆನ್ ಆಸ್ಪತ್ರೆಯ ಡಾ.ಸೇವಂತಿ ಹಾಗೂ ಅವರ ವೈದ್ಯರ ತಂಡಕ್ಕೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ ಕೆಲವು ವಾರಗಳಿಂದ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಟ್ವೀಟ್ ನಲ್ಲಿ ಶೇರ್ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.
My heart is filled with gratitude as I share this news with all of you today. Thank you ?? pic.twitter.com/81sGvWWpoe
— Sanjay Dutt (@duttsanjay) October 21, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ