ಸಂಜಯ್ ಲೀಲಾ “ಪದ್ಮಾವತಿ’ ಸೆಟ್ಗೆ ಮತ್ತೆ ದುಷ್ಕರ್ಮಿಗಳಿಂದ ಬೆಂಕಿ
Team Udayavani, Mar 15, 2017, 12:21 PM IST
ಹೊಸದಿಲ್ಲಿ : ತಿಂಗಳ ಹಿಂದೆ ಜೈಪುರದ ಜಯಗಢ ಕೋಟೆಯಲ್ಲಿ ಸ್ಥಳೀಯ ಕರಣಿ ಸೇನಾ ಕಾರ್ಯಕರ್ತರು ಬಾಲಿವುಡ್ ಚಿತ್ರ ನಿರ್ಮಾಪಕ, ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ “ಪದ್ಮಾವತಿ’ ಚಿತ್ರದ ಸೆಟ್ ಮೇಲೆ ದಾಳಿಗೈದು ಅದನ್ನು ಧ್ವಂಸಗೈದ ಹಿಂಸಾತ್ಮಕ ಘಟನೆ ನೆನಪಿನ ಪಟಲದಿಂದ ಮಾಸುವ ಮುನ್ನವೇ ಇದೀಗ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಅದೇ ರೀತಿಯ ಹಿಂಸಾತ್ಮಕ ಘಟನೆ ಮರುಕಳಿಸಿದೆ.
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಜಯ್ ಲೀಲಾ ಭನ್ಸಾಲಿ ಅವರ “ಪದ್ಮಾವತಿ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದಾಗ ಯಾವುದೋ ಅನಾಮಿಕ ಕ್ಷುದ್ರ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿ ಸೆಟ್ಗೆ ಬೆಂಕಿ ಹಾಕಿದೆ.
ಘಟನೆಯ ಮಾಹಿತಿಯನ್ನು ಪಡೆದು ಧಾವಿಸಿ ಬಂದಿರುವ ಪೊಲೀಸರು ಈ ಅಪರಿಚಿತ ದುಷ್ಕರ್ಮಿಗಳನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಟಿವಿ ವರದಿ ತಿಳಿಸಿದೆ.
ಆರಂಭಿಕ ಟಿವಿ ವರದಿಗಳ ಪ್ರಕಾರ ಅಪರಿಚಿತ ದುಷ್ಕರ್ಮಿಗಳ ಗುಂಪು ನಿನ್ನೆ ತಡ ರಾತ್ರಿ ಪದ್ಮಾವತಿ ಸೆಟ್ಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಪೊಲೀಸರಿಗೆ ದೂರು ನೀಡಲಾಗಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
MUST WATCH
ಹೊಸ ಸೇರ್ಪಡೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್
Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ