
ʼಪಠಾಣ್ʼ ಮೋಡಿ: 32 ವರ್ಷದ ಬಳಿಕ ಹೌಸ್ ಫುಲ್ ಆದ ಕಾಶ್ಮೀರದ ಥಿಯೇಟರ್
Team Udayavani, Jan 27, 2023, 2:25 PM IST

ಶ್ರೀನಗರ: ಶಾರುಖ್ ಖಾನ್ ʼಪಠಾಣ್ʼ ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಬಾಲಿವುಡ್ ಇಸ್ ಬ್ಯಾಕ್ ಎನ್ನುವುದನ್ನು ʼಪಠಾಣ್ʼ ತೋರಿಸಿಕೊಟ್ಟಿದೆ.
ಎರಡನೇ ದಿನ ʼಪಠಾಣ್ʼ ಸಿನಿಮಾ 70 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಶಾರುಖ್ ಖಾನ್ ರನ್ನು ಬಿಗ್ ಸ್ಕ್ರೀನ್ ಮೇಲೆ ಬಹು ಸಮಯದ ಬಳಿಕ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಿಲೀಸ್ ಗೂ ಮುನ್ನ ಒಂದಷ್ಟು ವಿಚಾರಗಳಿಂದ ವಿವಾದಕ್ಕೆ ಕಾರಣವಾಗಿದ್ದ ಸಿನಿಮಾ ರಿಲೀಸ್ ಆದ ಬಳಿ ಕಂಟೆಂಟ್ ನಿಂದ ಸೌಂಡ್ ಮಾಡುತ್ತಿದೆ.
ಬಾಕ್ಸ್ ಆಫೀಸ್ ನಲ್ಲಿ ಕೋಟಿಗಳಿಸಿರುವ ʼಪಠಾಣ್ʼ ಕಾಶ್ಮೀರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ಬಗ್ಗೆ ಐನಾಕ್ಸ್ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 32 ವರ್ಷದ ಬಳಿಕ ಕಾಶ್ಮೀರದ ಥಿಯೇಟರ್ ವೊಂದು ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ರೀತಿ ಥಿಯೇಟರ್ ಗೆ ಹರಿದು ಬರುತ್ತಿರುವ ಜನರನ್ನು ಕರೆತಂದ ʼಪಠಾಣ್ʼ ಸಿನಿಮಾ ಹಾಗೂ ಶಾರುಖ್ ಅವರನ್ನು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಟ್ವೀಟ್ ಮಾಡಿದೆ.
32 ವರ್ಷದ ಬಳಿಕ ಕಾಶ್ಮೀರದಲ್ಲಿ ಸಿನಿಮಾಕ್ಕಾಗಿ ಥಿಯೇಟರ್ ಹೌಸ್ ಫುಲ್ ಆಗಿದೆ. ಸದ್ಯ ʼಪಠಾಣ್ʼ ಸಿನಿಮಾಕ್ಕಾಗಿ ಕಾಶ್ಮೀರದಲ್ಲಿ ಮಾತ್ರವಲ್ಲದೇ ಇತರ ಕಡೆಗಳಲ್ಲೂ ಟಿಕೆಟ್ ಖರೀದಿಸಿ ಪ್ರೇಕ್ಷಕರು ಕಾದು ನಿಂತಿದ್ದಾರೆ.
ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿ ʼಪಠಾಣ್ʼ ಸ್ಪೈ ಥ್ರಿಲ್ಲರ್ ಕಥೆಯನ್ನು ಒಳಗೊಂಡಿದೆ.
Today, with #Pathaan frenzy gripping the nation, we are grateful to KING KHAN for bringing the treasured #HOUSEFULL sign back to the Kashmir Valley after 32 long years! Thank you #ShahRukhKhan𓀠 @iamsrk @thejohnabraham @deepikapadukone @YRF @PathaanTheFilm #YRF50 pic.twitter.com/bkOvyjMrOh
— INOX Leisure Ltd. (@INOXMovies) January 26, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್ ವಿರುದ್ದ ನೆಟ್ಟಿಗರು ಗರಂ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಐಟಂ ಡ್ಯಾನ್ಸ್ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್ʼ ಹೊಸ ಪೋಸ್ಟರ್ ಹಂಚಿಕೊಂಡ ಪ್ರಭಾಸ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್