ರಾಕೇಶ್ ರೋಷನ್ ಮೇಲೆ ಶೂಟೌಟ್ ಪ್ರಕರಣ: ಪರಾರಿಯಾಗಿದ್ದ ಶಾರ್ಪ್ ಶೂಟರ್ ಬಂಧನ

ಗಾಯಕ್ವಾಡ್ ವಿರುದ್ಧ 11 ಕೊಲೆ ಪ್ರಕರಣ, ಏಳು ಕೊಲೆ ಯತ್ನದ ಪ್ರಕರಣಗಳು ದಾಖಲಾಗಿದ್ದವು.

Team Udayavani, Oct 10, 2020, 3:26 PM IST

ರಾಕೇಶ್ ರೋಷನ್ ಮೇಲೆ ಶೂಟೌಟ್ ಯತ್ನ: ಪರಾರಿಯಾಗಿದ್ದ ಶಾರ್ಪ್ ಶೂಟರ್ ಬಂಧನ

ಮಹಾರಾಷ್ಟ್ರ/ಥಾಣೆ:ಬಾಲಿವುಡ್ ಖ್ಯಾತ ನಿರ್ದೇಶಕ ರಾಕೇಶ್ ರೋಷನ್ ಅವರ ಮೇಲೆ 2000ನೇ ಇಸವಿಯಲ್ಲಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ನಟೋರಿಯಸ್ ಕ್ರಿಮಿನಲ್, ಶಾರ್ಪ್ ಶೂಟರ್ ನನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕುಖ್ಯಾತ ಕ್ರಿಮಿನಲ್ ಸುನೀಲ್ ವಿ ಗಾಯಕ್ವಾಡ್ ನನ್ನು ಶುಕ್ರವಾರ 9ಗಂಟೆ ರಾತ್ರಿ ಕಲ್ವಾದ ಪಾರ್ಸಿಕ್ ಸರ್ಕಲ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಗಾಯಕ್ವಾಡ್ ಪಾರ್ಸಿಕ್ ಸರ್ಕಲ್ ಪ್ರದೇಶಕ್ಕೆ ಬರುತ್ತಾನೆ ಎಂಬ ಖಚಿತ ಮಾಹಿತಿ ಪಡೆದ ನಂತರ ಆತನನ್ನು ಬಂಧಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಹೊನ್ರಾವ್ ತಿಳಿಸಿದ್ದಾರೆ.

ಗಾಯಕ್ವಾಡ್ ವಿರುದ್ಧ 11 ಕೊಲೆ ಪ್ರಕರಣ, ಏಳು ಕೊಲೆ ಯತ್ನದ ಪ್ರಕರಣಗಳು ದಾಖಲಾಗಿದ್ದವು. 2000ನೇ ಇಸವಿಯಲ್ಲಿ ರಾಕೇಶ್ ರೋಷನ್ ಮೇಲೆ ನಡೆಸಿದ ದಾಳಿಯೂ ಸೇರಿದೆ ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

2000ನೇ ಇಸವಿ ಜನವರಿಯಲ್ಲಿ ಮುಂಬೈನ ಪಶ್ಚಿಮ ವಲಯದಲ್ಲಿನ ಸಾಂತಾ ಕ್ರೂಝ್ ಕಚೇರಿಯ ಹೊರಭಾಗದಲ್ಲಿ ರಾಕೇಶ್ ರೋಷನ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಆರೋಪಿ ಆರು ಸುತ್ತು ಗುಂಡಿನ ದಾಳಿ ನಡೆಸಿದ್ದ, ಇದರಲ್ಲಿ ಎರಡು ಗುಂಡು ರಾಕೇಶ್ ರೋಷನ್ ಗೆ ತಗುಲಿತ್ತು ಎಂದು ವರದಿ ಹೇಳಿದೆ.

ಕೊಲೆ ಪ್ರಕರಣದ ಆರೋಪದಲ್ಲಿ ಗಾಯಕ್ವಾಡ್ ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಾಸಿಕ್ ಸೆಂಟ್ರಲ್ ಜೈಲಿನಲ್ಲಿದ್ದ ಈತ ಜೂನ್ 26ರಂದು 28 ದಿನಗಳ ಕಾಲದ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪೆರೋಲ್ ಅವಧಿ ಮುಗಿದ ನಂತರ ಗಾಯಕ್ವಾಡ್ ಜೈಲಿಗೆ ವಾಪಸ್ ಆಗಲಿದ್ದಾನೆ ಎಂದು ಅಧಿಕಾರಿಗಳು ನಿರೀಕ್ಷಿಸಿದ್ದರು. ಆದರೆ ಆತ ಹಾಗೆ ಮಾಡದೆ ಅಡಗಿಕೊಂಡಿದ್ದ. ಕೊನೆಗೂ ಕಳೆದ ರಾತ್ರಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, 1999 ಮತ್ತು 2000ನೇ ಇಸವಿ ವೇಳೆ ಈ ಕ್ರಿಮಿನಲ್ ಸಕ್ರಿಯನಾಗಿದ್ದ. ಅಲ್ಲದೇ ಹಲವಾರು ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ಗಾಯಕ್ವಾಡ್ ಕುಖ್ಯಾತ ಗ್ಯಾಂಗ್ ಗಳಾದ ಅಲಿ ಬುಡೇಶ್ ಮತ್ತು ಸುಭಾಶ್ ಸಿಂಗ್ ಠಾಕೂರ್ ನೇತೃತ್ವದ ಗ್ಯಾಂಗ್ ಜತೆ ಸಂಪರ್ಕ ಹೊಂದಿದ್ದ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.