ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ
Team Udayavani, Oct 16, 2021, 4:57 PM IST
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ, ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಇತ್ತೀಚೆಗಷ್ಟೆ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಈ ದಂಪತಿಗಳ ವಿರುದ್ದ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ.
ರಾಜ್ ಕುಂದ್ರಾ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಶೆರ್ಲಿನ್ ಅ. 14ರಂದು ಜುಹು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ರಾಜ್ ಕುಂದ್ರಾ ಮಾತ್ರವಲ್ಲದೆ ನಟಿ ಶಿಲ್ಪಾ ಶೆಟ್ಟಿ ವಿರುದ್ದವೂ ದೂರು ದಾಖಲಿಸಿದ್ದು, ಶಿಲ್ಪಾ ಶೆಟ್ಟಿ ಅವರಿಂದ ನಿರಂತರವಾಗಿ ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!
2019ರಲ್ಲಿ ರಾಜ್ ಕುಂದ್ರಾ ನನ್ನ ಮ್ಯಾನೇಜರ್ ರನ್ನು ಸಂಪರ್ಕಿಸಿ ಆ್ಯಪ್ ಬ್ಯುಸಿನೆಸ್ ಮಾಡುವ ಪ್ರಸ್ತಾಪ ಮಾಡಿದ್ದರು. ನನಗೆ ಆ ವ್ಯವಹಾರದ ಬಗ್ಗೆ ಇಷ್ಟವಿರಲಿಲ್ಲ. ಹಾಗಾಗಿ ಅದನ್ನು ತಿರಸ್ಕರಿಸಿದ್ದೆ. ಒಂದು ದಿನ ರಾಜ್ ಕುಂದ್ರಾ ನನ್ನ ಅನುಮತಿ ಇಲ್ಲದೆ ಮನೆಗೆ ಬಂದಿದ್ದರು. ಆ ವ್ಯವಹಾರದ ಬಗ್ಗೆ ಮತ್ತೆ ಪ್ರಸ್ತಾಪ ಮಾಡಿದರು. ಈ ವೇಳೆ ನಮ್ಮ ಮಾತು ಬೆಳೆದಿತ್ತು. ನಂತರ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ನಾನು ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡಿದ ನಂತರ, ಶಿಲ್ಪಾ ಶೆಟ್ಟಿ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅರೋಪಿಸಿದ್ದಾರೆ.
ಶೆರ್ಲಿನ್ ಈ ಹಿಂದೆಯೂ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗಳ ವಿರುದ್ದ ಮಾಧ್ಯಮಗಳಿಗೆ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಈ ಬಾರಿ ಪೋಲಿಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ಅಶ್ಲೀಲ ಚಿತ್ರ ಪ್ರಕರಣದಲ್ಲಿ ಶೆರ್ಲಿನ್ ಚೋಪ್ರಾ ಹೆಸರಿದ್ದು, ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !