ಶ್ರದ್ಧಾ ವಾಕರ್ ಪ್ರಕರಣದ ಪರಿಣಾಮದಿಂದ ತುನಿಶಾಳಿಂದ ಬ್ರೇಕಪ್ ಮಾಡಿಕೊಂಡೆ; ಸಹ ನಟ ಶೀಜನ್
ಕೆಲ ದಿನಗಳ ಹಿಂದೆಯೂ ತುನಿಶಾ ಆತ್ಮಹತ್ಯೆಗೆ ಯತ್ನಿಸಿದ್ದಳು
Team Udayavani, Dec 26, 2022, 4:07 PM IST
ಮುಂಬಯಿ: ಕಿರುತೆರೆ ನಟಿ ತುನಿಶಾ ಪ್ರಕರಣಕ್ಕೆ ಸಂಬಂಧಿಸಿ, ಬಂಧಿತನಾಗಿರುವ ಸಹ ನಟ ಶೀಜನ್ ಮೊಹಮ್ಮದ್ ಖಾನ್ ಘಟನೆ ಸಂಬಂಧ ಪೊಲೀಸರ ತನಿಖೆಗೆ ಸಹಕರಿಸಿ, ಹಲವಾರು ವಿಷಯಗಳನ್ನು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಮಹಾರಾಷ್ಟ್ರ ಪೊಲೀಸ್ ಕಸ್ಟಡಿಯಲ್ಲಿ ಶೀಜನ್ ವಿಚಾರಣೆಯಲ್ಲಿ ತುನಿಶಾಳೊಂದಿಗೆ ಬ್ರೇಕಪ್ ಮಾಡಿಕೊಂಡ ಹಿಂದೆ ಶ್ರದ್ಧಾ ವಾಕರ್ ಘಟನೆ ಕಾರಣ. ಆ ಭೀಕರ ಘಟನೆ ನನ್ನ ಮೇಲೆ ಪರಿಣಾಮ ಬೀರಿತ್ತು. ನಾನು ತುನಿಶಾಳ ಬಳಿ ಶ್ರದ್ಧಾ ಪ್ರಕರಣದ ಬಗ್ಗೆ ಮಾತಾನಾಡಿ, ನಾನು ಬೇರೆ ಸಮುದಾಯಕ್ಕೆ ಸೇರಿದವ. ನಮ್ಮ ನಡುವೆ ವಯಸ್ಸಿನ ಅಂತರವೂ ಇದೆ ಎಂದು ಹೇಳಿದ್ದೆ. ಇದಲ್ಲದೆ ಕೆಲ ದಿನಗಳ ಹಿಂದೆಯೂ ತುನಿಶಾ ಆತ್ಮಹತ್ಯೆಗೆ ಯತ್ನಿಸಿದ್ದಳು, ಆಗ ನಾನು ಆಕೆಯನ್ನು ರಕ್ಷಿಸಿ, ಅವಳ ಅಮ್ಮನ ಬಳಿ ಆರೋಗ್ಯ ನೋಡಿಕೊಳ್ಳುವಂತೆ ಹೇಳಿದ್ದೆ ಎಂದು ಪೊಲೀಸರಿಗೆ ಶೀಜನ್ ಹೇಳಿದ್ದಾರೆ.
ಇದನ್ನೂ ಓದಿ: ಕೋವಿಡ್ ಭೀತಿ: ಶಾಲಾ -ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ; ಇಲ್ಲಿದೆ ಹೊಸ ಗೈಡ್ ಲೈನ್ಸ್
ತುನಿಶಾಳ ತಾಯಿ ಶೀಜನ್ ನನ್ನ ಮಗಳಿಗೆ ಮೋಸ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ತುನಿಶಾ ಹಾಗೂ ಶೀಜನ್ ಅವರ ಮೊಬೈಲ್ ಕಳುಹಿಸಲಾಗಿದ್ದು, ಇಬ್ಬರು ಏನೆಲ್ಲಾ ಚಾಟ್ ಮಾಡಿದ್ದರು ಎನ್ನುವುದು ಇದರಿಂದ ತಿಳಿದು ಬರಲಿದೆ.
ತುನಿಶಾ ಡಿ.24 ರಂದು ಟಿವಿ ಧಾರಾವಾಹಿಯ ಸೆಟ್ನಲ್ಲಿ ನೇಣು ಬಿಗಿದುಕೊಂಡಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ