ಹನಿ ಸಿಂಗ್ – ಶಾಲಿನಿ ತಲ್ವಾರ್ ವಿಚ್ಚೇದನ: ಒಂದು ಕೋಟಿ ರೂ ಜೀವನಾಂಶ ನೀಡಿದ ಸಿಂಗರ್
Team Udayavani, Sep 9, 2022, 5:06 PM IST
ಹೊಸದಿಲ್ಲಿ: ಪಂಜಾಬಿ ಗಾಯಕ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ವಿಚ್ಛೇದನ ಪರಿಹಾರಕ್ಕಾಗಿ ಹನಿ ಸಿಂಗ್ ಒಂದು ಕೋಟಿ ರೂಪಾಯಿ ಜೀವನಾಂಶ ಪಾವತಿಸಿದ್ದಾರೆ.
2021 ರಲ್ಲಿ, ಶಾಲಿನಿ ತಲ್ವಾರ್ ಅವರು ಪತಿ ಹನಿ ಸಿಂಗ್ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪ ಮಾಡಿದ್ದರು.
ಗುರುವಾರ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ಅವರು ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಜೀವನಾಂಶದ ಕುರಿತಾಗಿ ಇತ್ಯರ್ಥಕ್ಕೆ ಬಂದರು.
ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಧೀಶ ವಿನೋದ್ ಕುಮಾರ್ ಅವರ ಸಮ್ಮುಖದಲ್ಲಿ, ಹನಿ ಸಿಂಗ್ ಅವರು ಶಾಲಿನಿ ತಲ್ವಾರ್ ಅವರಿಗೆ ಮುಚ್ಚಿದ ಕವರ್ ನಲ್ಲಿ ಒಂದು ಕೋಟಿ ರೂ.ಗಳ ಜೀವನಾಂಶವನ್ನು ನೀಡಿದರು. ಪ್ರಕರಣದ ಮುಂದಿನ ವಿಚಾರಣೆಯು 2023ರ ಮಾರ್ಚ್ 20ರಂದು ನಡೆಯಲಿದೆ.
ಇದಕ್ಕೂ ಮುನ್ನ ಹನಿ ಸಿಂಗ್ ಕೌಟುಂಬಿಕ ದೌರ್ಜನ್ಯ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದರು. ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಆರೋಪಗಳನ್ನು ‘ಸುಳ್ಳು ಮತ್ತು ದುರುದ್ದೇಶಪೂರಿತ’ ಎಂದರು.
ಇದನ್ನೂ ಓದಿ:ನೂಪುರ್ ಶರ್ಮಾ ಬಂಧನಕ್ಕೆ ಕೋರಿ ಮನವಿ: ಪರಿಗಣಿಸಲು ನಿರಾಕರಿಸಿದ ಸುಪ್ರೀಂ
“ನನ್ನ ಸಾಹಿತ್ಯ, ನನ್ನ ಆರೋಗ್ಯದ ಬಗ್ಗೆ ಊಹಾಪೋಹಗಳು ಮತ್ತು ನೆಗೆಟಿವ್ ಪಬ್ಲಿಸಿಟಿಗಳಿದ್ದರೂ ನಾನು ಈ ಹಿಂದೆ ಯಾವುದೇ ಸಾರ್ವಜನಿಕ ಹೇಳಿಕೆ ಅಥವಾ ಪತ್ರಿಕಾ ಟಿಪ್ಪಣಿಯನ್ನು ನೀಡಿಲ್ಲ. ಆದಾಗ್ಯೂ, ಈ ಬಾರಿ ಅಧ್ಯಯನದ ಮೌನವನ್ನು ಕಾಯ್ದುಕೊಳ್ಳುವುದರಲ್ಲಿ ನಾನು ಯಾವುದೇ ಅರ್ಥ ಕಾಣುತ್ತಿಲ್ಲ. ಯಾಕೆಂದರೆ ಕೆಲವು ಆರೋಪಗಳು ನನ್ನ ಕುಟುಂಬ, ನನ್ನ ಹೆತ್ತವರು ಮತ್ತು ತಂಗಿಯ ಮೇಲೆ ಗುರಿಯಾಗಿಸಿದೆ. ಅವರು ಕೆಲವು ಕಷ್ಟದ ಸಮಯದಲ್ಲಿ ನನ್ನೊಂದಿಗೆ ನಿಂತಿದ್ದಾರೆ” ಎಂದು ಹನಿ ಸಿಂಗ್ ಬರೆದುಕೊಂಡಿದ್ದಾರೆ.
ಹನಿ ಸಿಂಗ್ ವಿರುದ್ಧ ಶಾಲಿನಿ ತಲ್ವಾರ್ ಅವರು ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ, ವಂಚನೆ ಮತ್ತು ಆರ್ಥಿಕ ವಂಚನೆ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ