ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ಸೋನು ಸೂದ್.!
Team Udayavani, Aug 27, 2021, 10:55 AM IST
ನವ ದೆಹಲಿ : ಕೋವಿಡ್ 19 ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದಲ್ಲದೇ, ದೇಶದಲ್ಲಿ ಜೈವಿಕ ಆಮ್ಲಜನಕದ ಕೊರತೆ ಇದ್ದಾಗ ಪೂರೈಸಿದ ಬಾಲಿವುಡ್ ಸಿನಿ ಅಂಗಳದ ಪ್ರಚಲಿತದ ಹೆಸರು, ನಟ ಸೋನು ಸೂದ್ ಇಂದು(ಶುಕ್ರವಾರ, ಆಗಸ್ಟ್ 27) ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದಾರೆ.
ಕೆಜ್ರಿವಾಲ್ ಜೊತೆ ಮಾತುಕತೆ ನಡೆಸಿದ ಸೋನು, ದೇಶದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿರುವ ವಿಚಾಋಗಳನ್ನು ಹಂಚಿಕೊಂಡಿದ್ದು, ಮತ್ತು ವಲಸೆ ಕಾರ್ಮಿಕರಿಗಾಗಿಯೇ ಆರಂಭಿಸಿದ ಆ0ನ್ ಲೈನ್ ಜಾಬ್ ಪೋರ್ಟಲ್ ‘ಪ್ರವಾಸಿ ರೋಜ್ ಗರ್’ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ : ಐಸಿಸ್ ಕೆ ದಾಳಿಗೆ ದೇಹಗಳು ಛಿದ್ರ, ಛಿದ್ರ…ಎಲ್ಲೇ ಅಡಗಿದ್ದರೂ ಉಗ್ರರನ್ನು ಬಿಡಲ್ಲ: ಬೈಡೆನ್
ಸುಮಾರು 7, 50,000 ಮಂದಿ ವಲಸೆ ಕಾರ್ಮಿಕರನ್ನು ಅವರ ತವರಿಗೆ ಕಳುಹಿಸುವಲ್ಲಿ ಕಾರ್ಯ ನಿರ್ವಹಿಸಿದ ಬಗ್ಗೆ ನನಗೆ ಹೆಮ್ಮೆ ಇದೆ. ಮಾತ್ರವಲ್ಲದೇ, ಎಲ್ಲಾ ವಲಸೆ ಕಾರ್ಮಿಕರ ಡೇಟಾ ನನ್ನಲ್ಲಿದೆ. ಅದರ ಆಧಾರದ ಮೇಲೆ ಸುಮಾರು 3,00,000 ಮಂದಿಗೆ ಉದ್ಯೋಗ ಅವಕಾಶವನ್ನು ಪೂರೈಸುವುದಕ್ಕೆ ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಲಾಕ್ ಡೌನ್ ನ ಸಂದರ್ಭದಲ್ಲಿ ನಾನು ಆ ಎಲ್ಲಾ ವಲಸೆ ಕಾರ್ಮಿಕರ ಜೊತೆ ಸಂಪರ್ಕದಲ್ಲಿ ಇರುವುದಕ್ಕೆ ನಾನು ಪ್ರಯತ್ನಿಸಿದ್ದೆ. ಅವರ ಮುಂದಿನ ಭವಿಷ್ಯದ ಬಗ್ಗೆ ಎಂದಿಗೂ ನಾನು ಅವರನ್ನು ಮಾತನಾಡಿಸುತ್ತಿದ್ದೆ. ಜನರು ಎಷ್ಟು ಕಷ್ಟದಲ್ಲಿದ್ದಾರೆ ಎನ್ನುವುದು ನನಗೆ ಆ ಸಂದರ್ಭದಲ್ಲಿ ನನಗೆ ತಿಳಿಯಿತು.
ನಿರುದ್ಯೋಗ ಸಮಸ್ಯೆ ತಾರಕಕ್ಕೇರಿರುವ ಸಂದರ್ಭದಲ್ಲಿ, ಏನು ಪರಿಹಾರ ಕಂಡುಕೊಳ್ಳಬಹುದು ಎಂಬುವುದರ ಬಗ್ಗೆ ನಾನು ಯೋಚನೆ ಮಾಡಿದೆ. ಆ ಸಂದರ್ಭದಲ್ಲಿ ಯೋಚನೆಗೆ ಬಂದಿದ್ದೇ ಈ ಆನ್ ಲೈನ್ ಜಾಬ್ ಪೋರ್ಟಲ್ ‘ಪ್ರವಾಸಿ ರೋಜ್ ಗರ್’ ಯೋಜನೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ನವ ದೆಹಲಿಯ ಉಪ ಮುಖ್ಯಮಂತ್ರಿ ಮನೀಸ್ ಸಿಸೋಡಿಯಾ ಹಾಜರಿದ್ದರು.
ಇದನ್ನೂ ಓದಿ : ಮೈಸೂರು ವಿದ್ಯಾರ್ಥಿನಿ ಪ್ರಕರಣ; ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ: ಹಾಲಪ್ಪ ಆಚಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ