ನಟ ಸೋನು ಸೂದ್ ಗೆ ಒಲಿದ 2020 ರ ಜನೋಪಕಾರಿ ಪ್ರಶಸ್ತಿ
ನಾರ್ವೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ಸ್ಕ್ಯಾಂಡೀವಿಯನ್ ಬಾಲಿವುಡ್ ಫೆಸ್ಟಿವಲ್ ನಲ್ಲಿ ಈ ಪ್ರಶಸ್ತಿ ಪ್ರದಾನ
Team Udayavani, Dec 30, 2020, 7:00 PM IST
ಮುಂಬೈ: ಇತ್ತೀಚಿನ ದಿನಗಳಲ್ಲಿ ಹಲವಾರು ಸಾಮಾಜಿಕ ಸೇವೆಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಜನೋಪಕಾರಿ 2020 ಪ್ರಶಸ್ತಿಯ ಗರಿ ದೊರಕಿದೆ.
ನಾರ್ವೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ಸ್ಕ್ಯಾಂಡೀವಿಯನ್ ಬಾಲಿವುಡ್ ಫೆಸ್ಟಿವಲ್ ನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮ ವರ್ಚುವಲ್ ವೇದಿಕೆಯ ಮೂಲಕ ನಡೆಯಲಿದೆ ಎಂದು ವರದಿಯಾಗಿದೆ.
ಈ ಕುರಿತು ಮಾತನಾಡಿರುವ ಬಾಲಿವುಡ್ ಫೆಸ್ಟಿವಲ್ ನಾರ್ವೆ ಯ ಡೈರೆಕ್ಟರ್ ನಸ್ರುಲ್ಲಾ ಖುರೇಷಿ ನಾವು ಸಮಾಜದ ಅತೀ ಸಂಕಷ್ಟದ ಸಮಯದಲ್ಲಿ ನಟ ಸೋನು ಸೂದ್ ಅವರು ಯಾವ ರೀತಿ ಮಾನವೀಯತೆಯನ್ನು ಮೆರೆದಿದ್ದಾರೆ ಎಂಬುದನ್ನು ಗಮನಿಸಿದ್ದೇವೆ. ಹಾಗೂ ಅವರ ಸಮಾಜಮುಖಿ ಕಾರ್ಯಗಳಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿದ್ದೇವೆ ಎಂದಿದ್ದಾರೆ.
ಕೋವಿಡ್ ಆರಂಭಗೊಂಡ ನಂತರ ಹೇರಲಾಗಿದ್ದ ಲಾಕ್ ಡೌನ್ ನಿಂದಾಗಿ ಹಲವಾರು ಜನರ ಬದುಕು ಬೀದಿಗೆ ಬಿದ್ದಿತ್ತು , ಸಾವಿರಾರು ಜನರು ಕೆಲಸವಿಲ್ಲದೆ, ಹಣವಿಲ್ಲದೆ ತಮ್ಮ ತಮ್ಮ ಊರುಗಳಿಗೆ ಹೋಗಲೂ ಆಗದೆ ಒದ್ದಾಡುವಂತಾಗಿತ್ತು . ಆ ಸಂದರ್ಭದಲ್ಲಿ ನಟ ಸೋನು ಸೂದ್ ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ಜನರು ತಮ್ಮ ತಮ್ಮ ಊರುಗಳಿಗೆ ತಲುಪಲು ಸಾರಿಗೆ ವ್ಯವಸ್ಥೆ ಮಾಡಿಕೊಟ್ಟಿದ್ದರು. ಆ ಮೂಲಕ ಸಮಾಜದ ರಿಯಲ್ ಹೀರೋ ಆಗಿ ಕಾಣಿಸಿಕೊಂಡಿದ್ದರು.
ಇವರ ಈ ಸಾಮಾಜಿಕ ಸೇವೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಗೊಂಡಂತೆ ಹಲವು ರಾಜಕೀಯ ನಾಯಕರು ಮತ್ತು ಸಮಾಜ ಸೇವಾ ಸಂಸ್ಥೆಗಳಿಂದ ಪ್ರಶಂಸೆ ವ್ಯಕ್ತವಾಗಿತ್ತು.
ಇದನ್ನೂ ಓದಿ:ಮಂಡ್ಯ : ಬೆಳಗೊಳ ಗ್ರಾಮ ಪಂಚಾಯತ್ ನಲ್ಲಿ ಗೆಲುವು ಸಾಧಿಸಿದ ಪತಿ, ಪತ್ನಿ
ಈ ಹಿಂದೆ ನಟ ಸೋನು ಸೂದ್ 2020ರ ಏಷ್ಯಿಯನ್ ಸೆಲೆಬ್ರಿಟಿ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಗಿಟ್ಟಿಸಿಕೊಂಡಿರುವುರೊಂದಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ