ಪತ್ರಕರ್ತೆಯ “ಆ” ಪ್ರಶ್ನೆಗೆ ಕೆರಳಿ ಅವಾಚ್ಯವಾಗಿ ನಿಂದನೆ: ಖ್ಯಾತ ನಟನ ಬಂಧನ
ನಾನು ಯಾರನ್ನೂ ನಿಂದಿಸಿಲ್ಲ, ನಾನೇನು ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ
Team Udayavani, Sep 27, 2022, 2:44 PM IST
ಕೇರಳ: ಸ್ಟಾರ್ ಗಳು ತಮ್ಮ ಚಿತ್ರದ ಪ್ರಚಾರಕ್ಕಾಗಿ ಹತ್ತಾರು ಸಂದರ್ಶನಗಳನ್ನು ಕೊಡುತ್ತಾರೆ. ಕೆಲವೊಮ್ಮೆ ಅನಗತ್ಯ ಪ್ರಶ್ನೆಗಳಿಗೂ ಉತ್ತರಿಸುವ ಸಂದರ್ಭ ಬರುತ್ತದೆ. ಮಲಯಾಳಂ ಚಿತ್ರರಂಗದ ಖ್ಯಾತ ನಟನೊಬ್ಬ ಸಂದರ್ಶನ ನೀಡುವ ವೇಳೆ ಎಡವಟ್ಟನ್ನು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಘಟನೆ ನಡೆದಿದೆ.
ಮಲಯಾಳಂ ಚಿತ್ರರಂಗದ ಯುವನಟ ಶ್ರೀನಾಥ್ ಭಾಸಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಭಿನಯಕ್ಕೆ ಪ್ರತ್ಯೇಕ ಅಭಿಮಾನಿಗಳೂ ಇದ್ದಾರೆ. ಇತ್ತೀಚೆಗೆ ತಮ್ಮ ಮುಂದಿನ ಸಿನಿಮಾಕ್ಕಾಗಿ ಸಂದರ್ಶನದಲ್ಲಿ ಅವರು ಭಾಗಿಯಾಗಿದ್ದರು.
ವರದಿಯ ಪ್ರಕಾರ ಪತ್ರಕರ್ತೆ, ಭಾಸಿ ಅವರಲ್ಲಿ ಚಿತ್ರದ ಟೈಟಲ್ ಹಾಗೂ ಅವರ ಸಹ ಕಲಾವಿದರಿಗೆ ಅವರ ವರ್ತನೆಗೆ ಅನುಗುಣವಾಗಿ ಅಂಕವನ್ನು ನೀಡಿ ಎಂದು ಪ್ರಶ್ನೆ ಕೇಳಿದ್ದಾರೆ. ಇದು ಕ್ಷಣ ಮಾತ್ರದಲ್ಲಿ ಭಾಸಿ ಅವರನ್ನು ಕೆರಳಿಸಿದ್ದು, ಅವರು ಹೊರ ಬರಲು ಹೊರಟಿದ್ದಾರೆ. ಸಿಟ್ಟಿನಲ್ಲಿ ಭಾಸಿ ಅಲ್ಲಿರುವ ಸಿಬ್ಬಂದಿಗಳಿಗೆ ಕ್ಯಾಮರಾ ಆಫ್ ಮಾಡಲು ಹೇಳಿದ್ದಾರೆ. ಪತ್ರಕರ್ತೆಯನ್ನು ಕೆಟ್ಟ ಮಾತುಗಳಿಂದ ನಿಂದಿಸಿದ್ದಾರೆ. ಅಲ್ಲಿದ್ದ ಮಹಿಳೆಯರಿಗೆ ಅವಮಾನಕರವಾಗುವ ಮಾತುಗಳನ್ನಾಡಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ, ಭಾಸಿ ಕ್ಷಮೆ ಕೇಳಿದ್ದಾರೆ. ನಾನು ಯಾರನ್ನೂ ನಿಂದಿಸಿಲ್ಲ, ನಾನೇನು ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟು ಪಾರಾಗಲು ಯತ್ನಿಸಿದ್ದಾರೆ.
ಆನ್ ಲೈನ್ ಮಾಧ್ಯಮವೊಂದರಲ್ಲಿ ಕೆಲಸ ಮಾಡುವ ಪತ್ರಕರ್ತೆ ಸಂದರ್ಶನವೊಂದರಲ್ಲಿ ನಟ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪತ್ರಕರ್ತೆ ಕೊಟ್ಟ ದೂರಿನ ಮೇಲೆ ಮರಡು ಪೊಲೀಸರು ನಟನನ್ನು ವಿಚಾರಣೆಗೆ ಕರೆದು, ಬಳಿಕ ಬಂಧಿಸಿದ್ದಾರೆ. “ಚಟ್ಟಂಬಿ” ಸಿನಿಮಾಕ್ಕಾಗಿ ಸಂದರ್ಶನ ನೀಡುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು