ಕೊನೆಗೂ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಎರಡು ಆಸೆಗಳು ಈಡೇರಲೇ ಇಲ್ಲ!
ಆ ಮನೆಯನ್ನು ಅವರು ವೇದ ಶಾಲೆ ನಡೆಸಲು ದಾನವಾಗಿ ನೀಡಿದ್ದರು.
Team Udayavani, Sep 28, 2020, 2:09 PM IST
ಹೈದರಬಾದ್:ಅಭಿಮಾನಿಗಳಿಂದ ಗಾನ ಗಂಧರ್ವ, ಗಾನ ಗಾರುಡಿಗ ಎಂದೆಲ್ಲಾ ಬಿರುದು ಪಡೆದಿದ್ದ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ 2020ರ ಸೆಪ್ಟೆಂಬರ್ 25ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಆದರೆ ಎಸ್ ಪಿಬಿಗೆ ಕೊನೆಗೂ ತನ್ನ ಆಸೆ ಈಡೇರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದು ಬಹಿರಂಗಗೊಂಡಿದೆ.
ಬಾಲು ಎಂದೇ ಚಿರಪರಿಚಿತರಾಗಿದ್ದ ಎಸ್ ಪಿಬಿಗೆ ಪೂರ್ವಜರ ಮನೆಯಾದ ನಲ್ಲೂರಿನಲ್ಲಿ ತಂದೆ ಸಾಂಬಮೂರ್ತಿ ಹಾಗೂ ತಾಯಿ ಶಕುಂತಲಮ್ಮ ಅವರ ಪ್ರತಿಮೆಯನ್ನು ಸ್ಥಾಪಿಸುವ ಇಚ್ಛೆ ಹೊಂದಿದ್ದರು. ಆ ಮನೆಯನ್ನು ಅವರು ವೇದ ಶಾಲೆ ನಡೆಸಲು ದಾನವಾಗಿ ನೀಡಿದ್ದರು.
ಅಷ್ಟೇ ಅಲ್ಲ ತನ್ನ ಸ್ವಂತ ಪ್ರತಿಮೆಯನ್ನು ಮನೆಯಲ್ಲಿ ಸ್ಥಾಪಿಸಬೇಕೆಂಬ ಆಸೆ ಹೊಂದಿದ್ದರು. ಅದಕ್ಕಾಗಿ ಎಸ್ ಪಿಬಿ ಖ್ಯಾತ ಶಿಲ್ಪಿ ರಾಜ್ ಕುಮಾರ್ ಅವರಿಗೆ ಪ್ರತಿಮೆ ಕೆತ್ತನೆ ಮಾಡಿಕೊಡುವಂತೆ ಹೇಳಿದ್ದರು. ಆದರೆ ಪೋಷಕರ ಹಾಗೂ ತನ್ನ ಪ್ರತಿಮೆಯನ್ನು ಇರಿಸಬೇಕೆಂಬ ಆವರ ಆಸೆ ಕೊನೆಗೂ ಈಡೇರಿಲ್ಲ. ಆ ಪ್ರತಿಮೆಗಳು ಅಂತಿಮ ರೂಪ ಪಡೆಯುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದುರಂತ ಎಂದು ವರದಿ ತಿಳಿಸಿದೆ.
ತಮ್ಮ ಪೂರ್ವಜರ ಮನೆಯಲ್ಲಿ ತಂದೆ-ತಾಯಿಯ ಪ್ರತಿಮೆಗಳನ್ನು ಸ್ಥಾಪಿಸುವುದನ್ನು ಕಣ್ಣಾರೆ ನೋಡಬೇಕೆಂಬ ಬಾಲಸುಬ್ರಹ್ಮಣ್ಯಂ ಅವರ ಆಸೆ ಕೈಗೂಡಲಿಲ್ಲ. ಅವರಿಗೆ ಆಗಸ್ಟ್ 5ರಂದು ಕೋವಿಡ್ 19 ಸೋಂಕು ಇದ್ದಿರುವುದು ದೃಢಪಟ್ಟ ನಂತರ ಆಸ್ಪತ್ರೆಯಲ್ಲಿಯೇ ದೀರ್ಘಾವಧಿ ಚಿಕಿತ್ಸೆ ಪಡೆಯುತ್ತಿದ್ದರೂ. ಆದರೂ ಚಿಕಿತ್ಸೆ, ಸಾವಿರಾರು ಜನರ ಹಾರೈಕೆ ಫಲಿಸದೇ ಅವರು ಇಹಲೋಕ ತ್ಯಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ