‘ಮ್ಯಾನ್ ವರ್ಸಸ್ ವೈಲ್ಡ್’ ಶೂಟಿಂಗ್ : ರಜನಿಗೆ ಗಾಯ? ಈಗ ಹೇಗಿದ್ದಾರೆ ಸ್ಟೈಲ್ ಕಿಂಗ್?

‘ಐ ಯಾಮ್ ಫೈನ್ ಅಂದಿದ್ಯಾಕೆ ತಲೈವಾ ; ಸ್ಕ್ರೀನ್ ಪ್ಲೇನಲ್ಲಿ ಇದ್ದಿದ್ದೇನು?

Team Udayavani, Jan 29, 2020, 11:33 AM IST

Rajnikanth-730

ಮೈಸೂರು: ಬ್ರಿಟಿಶ್ ಸಾಹಸಿಗ ಬೇರ್ ಗ್ರಿಲ್ ಜೊತೆ ಕರ್ನಾಟಕದ ಬಂಡೀಪುರದಲ್ಲಿರುವ ಹುಲಿ ಸಂರಕ್ಷಣಾ ಮತ್ತು ರಾಷ್ಟ್ರೀಯ ಉದ್ಯಾನದಲ್ಲಿ ‘ಮ್ಯಾನ್ ವರ್ಸ್ಸಸ್ ವೈಲ್ಡ್’ ಕಾರ್ಯಕ್ರಮದ ಶೂಟಿಂಗ್ ನಲ್ಲಿರುವ ಸೂಪರ್ ಸ್ಟಾರ್ ‘ತಲೈವಾ’ ರಜನಿಕಾಂತ್ ಅವರು ಶೂಟಿಂಗ್ ಸ್ಥಳದಲ್ಲಿ ಗಾಯಗೊಂಡಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿ ಅವರ ಅಭಿಮಾನಿಗಳಲ್ಲಿ ಗಾಬರಿಯನ್ನುಂಟುಮಾಡಿತ್ತು.

ಆದರೆ ಈ ಸುದ್ದಿ ಪೂರ್ತಿ ನಿಜವಲ್ಲ ಎಂದು ಇದೀಗ ಸಾಬೀತಾಗಿದೆ. ಶೂಟಿಂಗ್ ಸಂದರ್ಭದಲ್ಲಿ ರಜನಿ ಅವರಿಗೆ ಸಣ್ಣ ಪ್ರಮಾಣದ ತರಚು ಗಾಯಗಳುಂಟಾಗಿವೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಮಾತ್ರವಲ್ಲದೇ ಬೇರ್ ಜೊತೆಗಿನ ಒಂದು ದಿನದ ಶೂಟಿಂಗ್ ಮುಗಿಸಿ ರಜನಿ ಇದೀಗ ಚೆನ್ನೈಗೆ ವಾಪಾಸಾಗಿದ್ದಾರೆ. ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಈ ಶೂಟಿಂಗ್ ನಡೆದಿದೆ.

ಬಳಿಕ ಚೆನ್ನೈ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಜನಿ ಅವರು ತನ್ನ ಶೂಟಿಂಗ್ ಅನುಭವದ ಕುರಿತು ಹೇಳಿದ್ದಿಷ್ಟು, ‘ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದ ಶೂಟಿಂಗ್ ಅನ್ನು ಮುಗಿಸಿದ್ದೇನೆ. ಶೂಟಿಂಗ್ ನಡೆಯುತ್ತಿದ್ದ ಆ ಜಾಗದಲ್ಲಿ ಬಹಳಷ್ಟು ಮುಳ್ಳುಗಿಡಗಳಿದ್ದವು ಹಾಗಾಗಿ ನನಗೆ ಅಲ್ಲಲ್ಲಿ ಸ್ವಲ್ಪ ತರಚು ಗಾಯಗಳಾಗಿವೆಯಷ್ಟೇ, ಉಳಿದಂತೆ ಐ ಯಾಮ್ ಫೈನ್’ ಎಂದು ಹೇಳಿದರು.

ಇನ್ನು ಶೂಟಿಂಗ್ ಸಮಯದಲ್ಲಿ ರಜನಿಕಾಂತ್ ಅವರು ಗಾಯಗೊಂಡಿದ್ದಾರೆ ಎಂಬ ಸುದ್ದಿಯನ್ನು ಬಂಡೀಪುರ ರಕ್ಷಿತಾರಣ್ಯದ ಅಧಿಕಾರಿಗಳೂ ಸಹ ಅಲ್ಲಗಳೆದಿದ್ದಾರೆ. ‘ಸ್ಕ್ರೀನ್ ಪ್ಲೇಯಲ್ಲಿದ್ದಂತೆ ರಜನಿ ಅವರು ಬೀಳುವ ದೃಶ್ಯವಿತ್ತು. ಆ ರೀತಿಯಾಗಿ ರಜನಿ ಹಗ್ಗದಿಂದ ಕೆಳಗೆ ಜಾರುವ ಸಂದರ್ಭದಲ್ಲಿ ಅವರು ಸೂಚನೆಯಂತೇ ಬೀಳುತ್ತಾರೆ, ಆ ಸಂದರ್ಭದಲ್ಲಿ ಅಲ್ಲಿದ್ದವರೆಲ್ಲರೂ ಅವರಲ್ಲಿಗೆ ಧಾವಿಸುತ್ತಾರೆ. ಮತ್ತು ಇದೆಲ್ಲವೂ ಪೂರ್ವನಿರ್ಧಾರಿತವಾಗಿತ್ತು. ಆ ಬಳಿಕ ರಜನಿಕಾಂತ್ ಅವರು ಸಾವರಿಸಿಕೊಂಡು ಎದ್ದು ನಿಂತರು ಮತ್ತು ಶೂಟಿಂಗ್ ಮುಗಿಸಿ ಚೆನ್ನೈಗೆ ವಾಪಾಸು ತೆರಳಿದ್ದಾರೆ’ ಎಂದು ಸ್ಥಳದಲ್ಲಿ ಹಾಜರಿದ್ದ ಅರಣ್ಯಾಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಶೂಟಿಂಗ್ ಗಾಗಿ ರಜನಿಕಾಂತ್ ಅವರು ಬಂಡೀಪುರಕ್ಕೆ ಆಗಮಿಸುತ್ತಿರುವ ವಿಡಿಯೋ ಒಂದನ್ನು ಎ.ಎನ್.ಐ. ಸುದ್ದಿಸಂಸ್ಥೆ ಮಂಗಳವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿತ್ತು.

ವಿಶ್ವಾದ್ಯಂತ ಜನಪ್ರಿಯವಾಗಿರುವ ಈ ಸಾಹಸ ಕಾರ್ಯಕ್ರಮದಲ್ಲಿ ಬೇರ್ ಗ್ರಿಲ್ ಜೊತೆ ಕಾಣಿಸಿಕೊಳ್ಳುತ್ತಿರುವ ಎರಡನೇ ಭಾರತೀಯ ರಜನಿಕಾಂತ್ ಆಗಿದ್ದಾರೆ. ಇವರಿಗೂ ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಮತ್ತು ಅವರ ಭಾಗದ ಚಿತ್ರೀಕರಣವನ್ನು ಕಳೆದ ವರ್ಷದ ಫೆಬ್ರವರಿಯಲ್ಲಿ ಉತ್ತರಾಖಂಡ್ ನಲ್ಲಿರುವ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ ಚಿತ್ರೀಕರಿಸಲಾಗಿತ್ತು. ಮತ್ತು ಈ ಕಾರ್ಯಕ್ರಮ ಆಗಸ್ಟ್ ತಿಂಗಳಲ್ಲಿ ಪ್ರಸಾರಗೊಂಡಿತ್ತು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.