
ಆ ದಿನಗಳು.. ಹೃದಯಾಘಾತವಾದ ಕರಾಳ ದಿನಗಳ ಬಗ್ಗೆ ಮೌನ ಮುರಿದ ನಟ ಸುನಿಲ್ ಗ್ರೋವರ್
Team Udayavani, Mar 28, 2023, 11:08 AM IST

ಮುಂಬಯಿ: ಬಾಲಿವುಡ್ ನಟಿ ಸುಶ್ಮಿತಾ ಸೇನ್ ಇತ್ತೀಚೆಗೆ ಹೃದಯಾಘಾತವಾದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೋರ್ವ ನಟ ಹೃದಯಾಘಾತವಾಗಿದ್ದರ ಬಗ್ಗೆ ಮಾತನಾಡಿದ್ದಾರೆ.
ನಟ-ಹಾಸ್ಯಗಾರ ಸುನಿಲ್ ಗ್ರೋವರ್ ಸಂದರ್ಶನವೊಂದರಲ್ಲಿ ಹೃದಯಾಘಾತವಾದ ದಿನಗಳ ಬಗ್ಗೆ ಮಾತನಾಡಿದ್ದಾರೆ.
ಆ ಸಮಯದಲ್ಲಿ (2022 ರಲ್ಲಿ) ನಾನು ವೆಬ್ ಸಿರೀಸ್ ಶೂಟ್ ಮಾಡುತ್ತಿದ್ದೆ. ಆಗ ಎದೆ ನೋವು ಕಾಣಿಸಿಕೊಂಡಿದೆ. ಚಿತ್ರೀಕರಣ ಮುಗಿಸಿ ಕೂಡಲೇ ಆಸ್ಪತ್ರೆಗೆ ತೆರಳಿದ್ದೇನೆ. ಅದೇ ಸಮಯದಲ್ಲಿ ನಾನು ಕೋವಿಡ್ ಪಾಸಿಟಿವ್ ಆದೆ. ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಸರಿಯಾದೆ ಎಂದು ನಟ ಹೇಳಿದ್ದಾರೆ.
ಇದನ್ನೂ ಓದಿ:ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್ ಬಿ
ಕೋವಿಡ್ ನಲ್ಲಿರುವಾಗ ಹೃದಯಾಘಾತವಾಯಿತು. ಜೀವನದಲ್ಲಿ ಎಲ್ಲವನ್ನು ಎದುರಿಸಬೇಕು ಮತ್ತು ಮುಂದುವೆರೆಯಬೇಕು. ಆ ಸಮಯದಲ್ಲಿ ನಮ್ಮ ತಲೆಯಲ್ಲಿ ತುಂಬಾ ಆಲೋಚನೆಗಳು ಓಡುತ್ತಿರುತ್ತದೆ. ಆ 1-2 ತಿಂಗಳು ಮಾನಸಿಕವಾಗಿ ತುಂಬಾ ಕಷ್ಟದಾಯಕವಾಗಿತ್ತು. ಈಗ ಎಲ್ಲವೂ ಆರಾಮದಾಯಕವಾಗಿದೆ ಎಂದು ಸುನಿಲ್ ಹೇಳಿದ್ದಾರೆ.
ಇಂಥ ಸ್ಥಿತಿಯಲ್ಲಿ ನಿಮ್ಮಲ್ಲಿ ನಿಮಗೆ ಎಲ್ಲವೂ ಸರಿಯಾಗುತ್ತದೋ ಇಲ್ಲವೋ ಎನ್ನುವ ಪ್ರಶ್ನೆ ಮೂಡುತ್ತದೆ. ದೇವರ ದಯೆಯಿಂದ ಎಲ್ಲವೂ ಸರಿಯಾಯಿತು. ಬಹುಶಃ ಎಲ್ಲಾ ವಿಚಾರಗಳು ಆಗುವುದರ ಹಿಂದೆ ಒಂದು ಕಾರಣವಿರಬಹುದು ಎಂದು ಹೇಳಿದ್ದಾರೆ.
ಸುನಿಲ್ ಇತ್ತೀಚೆಗೆ ಜೀ5ಯಲ್ಲಿ ಸ್ಟ್ರೀಮ್ ಆದ ʼಸನ್ ಫ್ಲವರ್ʼ ನಲ್ಲಿ ಕಾಣಿಸಿಕೊಂಡಿದ್ದರು. ಮುಂದೆ ಶಾರುಖ್ ಖಾನ್ ಅವರ ʼಜವಾನ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

Road mishap: ಭೀಕರ ಅಪಘಾತ; 39 ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

Sharwanand: ವೈವಾಹಿಕ ಜೀವನಕ್ಕೆ ಕಾಲಿಟ್ಟ ಟಾಲಿವುಡ್ ನಟ ಶರ್ವಾನಂದ್; ಫೋಟೋಸ್ ವೈರಲ್
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ