ಸಿನಿಮಾದಲ್ಲಿ ಫೋನ್ ನಂಬರ್ ಬಳಕೆ, ಅಭಿಮಾನಿ ಹೈರಾಣ; ಕ್ಷಮೆಯಾಚಿಸಿದ ಸನ್ನಿ ಲಿಯೋನ್


Team Udayavani, Aug 3, 2019, 3:30 PM IST

leone

ಮುಂಬೈ: ಇತ್ತೀಚೆಗೆ ಬಿಡುಗಡೆಯಾಗಿದ್ದ ಬಾಲಿವುಡ್ ನ “ದಿಲ್ಜಿತ್ ದೋಸಾಂಜ್” ಅಭಿನಯದ ಅರ್ಜುನ್ ಪಾಟಿಯಾಲಾ ಸಿನಿಮಾದಲ್ಲಿ ಆಕಸ್ಮಿಕವಾಗಿ ಮೊಬೈಲ್ ನಂಬರ್ ಅನ್ನು ಸಿನಿಮಾದಲ್ಲಿ ಬಹಿರಂಗಗೊಳಿಸಿದ್ದರಿಂದ ತೊಂದರೆಗೊಳಗಾಗಿದ್ದ ದೆಹಲಿ ಮೂಲದ ಅಭಿಮಾನಿ ಬಳಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಕ್ಷಮೆಯಾಚಿಸಿದ್ದಾರೆ.

ಝೂಮ್ ಟಿವಿಗೆ ನೀಡಿದ್ದ ಸಂದರ್ಶನದ ವೇಳೆ ಮಾತನಾಡಿದ ಸನ್ನಿ, ಚಿತ್ರದ ಸನ್ನಿವೇಶವೊಂದರಲ್ಲಿ ನಾನು ನಿಮ್ಮ ಮೊಬೈಲ್ ನಂಬರ್ ಅನ್ನು ಬಳಸಿಕೊಂಡಿದ್ದೆ..ದಯವಿಟ್ಟು ಕ್ಷಮಿಸಿ..ನಾನು ನಿಮಗೆ ತೊಂದರೆ ಕೊಡಬೇಕು ಎಂಬ ಉದ್ದೇಶದಿಂದ ಹಾಗೆ ಮಾಡಿಲ್ಲ ಎಂದು ಮನವಿ ಮಾಡಿಕೊಂಡಿದ್ದರು.

ಅರ್ಜುನ್ ಪಾಟಿಯಾಲಾ ಸಿನಿಮಾದ ದೃಶ್ಯವೊಂದರಲ್ಲಿ ಸನ್ನಿ ಲಿಯೋನ್ ತಮ್ಮ ಮೊಬೈಲ್ ನಂಬರ್ ಅನ್ನು ಹೇಳುವ ಡೈಲಾಗ್ ಇತ್ತು. ಏತನ್ಮಧ್ಯೆ ಸನ್ನಿ ಲಿಯೋನ್ ಅಭಿಮಾನಿಗಳು ಮುಗಿಬಿದ್ದು ಕರೆ ಮಾಡಿದ್ದರು..ಆದರೆ ಅದು ನಿಜಕ್ಕೂ ಸನ್ನಿ ಲಿಯೋನ್ ನಂಬರ್ ಆಗಿರಲಿಲ್ಲವಾಗಿತ್ತು. ಅದು ದೆಹಲಿ ಮೂಲದ ವ್ಯಕ್ತಿಯೊಬ್ಬರದ್ದಾಗಿತ್ತು. ಆ ವ್ಯಕ್ತಿ ಸಿನಿಮಾ ಬಿಡುಗಡೆಯಾದ ದಿನ ಸಾವಿರಾರು ಕರೆಗಳಿಗೆ ಉತ್ತರಿಸಿ ಹೈರಾಣಾಗಿದ್ದರು ಎಂದು ವರದಿ ತಿಳಿಸಿದೆ.

ಅರ್ಜುನ್ ಪಾಟಿಯಾಲಾ ಹಿಂದಿ ಸಿನಿಮಾದಲ್ಲಿ ಬಹಿರಂಗಗೊಂಡ ಮೊಬೈಲ್ ನಂಬರ್ ದೆಹಲಿ ಪೀತಂಪುರ್ ನಿವಾಸಿ ಪುನೀತ್ ಅಗರ್ವಾಲ್(27ವರ್ಷ) ಎಂಬ ಯುವಕನದ್ದು. ಸನ್ನಿ ಲಿಯೋನ್ ಳ ಸಾವಿರಾರು ಅಭಿಮಾನಿಗಳು ಕರೆ ಮಾಡಿದ್ದರಿಂದ ರೋಸಿ ಹೋದ ಅಗರ್ವಾಲ್ ಪೊಲೀಸರಿಗೆ ದೂರು ನೀಡಿದ್ದರು.

ಇದು ಸನ್ನಿ ಲಿಯೋನ್ ನಂಬರ್ ಅಲ್ಲ, ತನ್ನ ನಂಬರ್ ಎಂದು ಸಮಜಾಯಿಷಿ ನೀಡಲು ಹೋದರೂ ಅದನ್ನು ಕೇಳಿಸಿಕೊಳ್ಳದೆ ಅವಾಚ್ಯ ಶಬ್ದಗಳಿಂದ ಸನ್ನಿ ಅಭಿಮಾನಿಗಳು ಬೈದಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.